ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಪಿ ನಗರ ಸ್ಲಮ್ ಬಳಿ ಡಬ್ಬಲ್ ಮರ್ಡರ್

By Mahesh
|
Google Oneindia Kannada News

JP Nagar Double Murder
ಬೆಂಗಳೂರು, ನ.29: ಜೆಪಿನಗರ 3 ನೇ ಹಂತದ ಒಂಬತ್ತನೇ ಅಡ್ಡರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರಿಬ್ಬರನ್ನು ಕಾರಿನಲ್ಲಿದ್ದ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ,ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಭಾನುವಾರ ರಾತ್ರಿ ನಡೆದ ಈ ಘಟನೆಯಲ್ಲಿ ರಾಗಿಗುಡ್ಡ ಸ್ಲಮ್ ನಿವಾಸಿ ದೇವ (27) ಮತ್ತು ಆತನ ಸ್ನೇಹಿತ ಕಳ್ಳ ಭೀಮ (25) ಕೊಲೆಯಾಗಿದ್ದಾರೆ.

ಮೃತರಿಬ್ಬರು ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಾಗಿದ್ದು. ಇವರ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ರೌಡಿ ಷೀಟರ್ ಎಂದು ಪ್ರಕರಣಗಳು ದಾಖಲಾಗಿದ್ದವು ಎಂದು ಜೆ.ಪಿ.ನಗರ ಪೊಲೀಸರು ತಿಳಿಸಿದ್ದಾರೆ.

ರಾತ್ರಿ 9 ಗಂಟೆ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ದೇವ 'ಬಾರ್‌ನಲ್ಲಿ ಗಲಾಟೆಯಾಗಿದ್ದು, ನಾನು ಕೆಲವರ ಮೇಲೆ ಹಲ್ಲೆ ನಡೆಸಿದ್ದೇನೆ. ಸ್ವಲ್ಪ ಸಮಯದಲ್ಲೇ ಮನೆಗೆ ಬರುತ್ತೇನೆಂದು ತಿಳಿಸಿದ್ದ" ಎಂದು ವಿಚಾರಣೆಯಿಂದ ಗೊತ್ತಾಗಿದೆ. ಆತನಿಂದ ಹಲ್ಲೆಗೊಳಗಾದ ವ್ಯಕ್ತಿಗಳೇ ಈ ಕೃತ್ಯ ಎಸಗಿರುವ ಶಂಕೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಅಲೋಕ್‌ಕುಮಾರ್, ದಕ್ಷಿಣ ವಿಭಾಗದ ಡಿಸಿಪಿ ಸೋನಿಯಾ ನಾರಂಗ್, ಇನ್‌ಸ್ಪೆಕ್ಟರ್ ಎಸ್.ಕೆ.ಉಮೇಶ್, ಎಸ್‌ಐ ಮನೋಜ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

English summary
JP Nagar 3rd phase Ragi Gudda slum dwellers were shocked see their own neighbors stabbed to death in street in JP Nagar police station limit. Joint Police commissioner Alok Kumar and DCP Sonia Narang visited the place and console the ex-rowdies family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X