ಜಗನ್ ರೆಡ್ಡಿ ರಾಜೀನಾಮೆ, ಹೊಸ ಪಕ್ಷ ಸ್ಥಾಪನೆ?

ರಾಜೀನಾಮೆ ನೀಡಿರುವ ಜಗನ್, ತನ್ನ ತಂದೆ ವೈಎಸ್ ಆರ್ ಹೆಸರಿನಲ್ಲಿ "ವೈಎಸ್ ಆರ್ ಕಾಂಗ್ರೆಸ್ "ಹೊಸ ಪ್ರಾದೇಶಿಕ ಪಕ್ಷವನ್ನು ಘೋಷಿಸಿದ್ದಾರೆ. ಅಲ್ಲದೆ, ಜಗನ್ ಬೆಂಬಲಿಗ ಶಾಸಕರು ರಾಜೀನಾಮೆ ನೀಡಿದಲ್ಲಿ, ಸರಕಾರ ಪತನಗೊಳ್ಳುವ ಸಾಧ್ಯತೆಯಿದೆ. ಇದನ್ನು ತಡೆಯಲು ರಾಜ್ಯದ ಉಸ್ತುವಾರಿ ಹೊತ್ತಿರುವ ವೀರಪ್ಪ ಮೊಯ್ಲಿ, ನೂತನ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಪ್ರಜಾರಾಜ್ಯಂ ಅಧ್ಯಕ್ಷ ಕೆ. ಚಿರಂಜೀವಿ ಬೆಂಬಲ ಕೋರಿರುವ ಬಗ್ಗೆ ಟಿವಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಸರ್ಕಾರ ಪತನ ಸಾಧ್ಯವೇ?: ಆಂಧ್ರಪ್ರದೇಶ ವಿಧಾನಸಭೆಯು 294 ಸದಸ್ಯ ಬಲವನ್ನು ಹೊಂದಿದೆ. ಕಾಂಗ್ರೆಸ್ ಬಳಿ ಸುಮಾರು 156 ಸ್ಥಾನಗಳಿವೆ. ಸರ್ಕಾರದ ಬೆಂಬಲಕ್ಕೆ 147 ಸದಸ್ಯರು ಸಾಕು. ಚಿರಂಜೀವಿ ನೇತೃತ್ವದ ಪ್ರಜಾರಾಜ್ಯಂ ಹೊಂದಿರುವ ಶಾಸಕರ ಸಂಖ್ಯೆ 18. ಹೀಗಾಗಿ ಜಗನ್ ಹಿಂದೆ 30 ರಿಂದ 35 ಶಾಸಕರು ಹೋದರೂ, ಸರ್ಕಾರ ಉಳಿಸಿಕೊಳ್ಳಬಹುದು ಎಂಬ ವಿಶ್ವಾಸ ಕಾಂಗ್ರೆಸ್ಸಿಗಿದೆ. ಅಲ್ಲದೆ, ಜಗನ್ ಚಿಕ್ಕಪ್ಪ ವಿವೇಕಾನಂದ ರೆಡ್ಡಿ ಅವರ ಸಂಪುಟಕ್ಕೆ ಸೇರಿಸಿಕೊಂಡಿದ್ದಲ್ಲದೆ, ವೈಎಸ್ ಆರ್ ಹಿಂಬಾಲಕರಾಗಿದ್ದ ಹಿರಿಯ ನಾಯಕರಿಗೆ ಸೂಕ್ತ ಸ್ಥಾನ ಕಲ್ಪಿಸಿ, ಜಗನ್ ಗೆ ಹೊಡೆತ ನೀಡುವಲ್ಲಿ ಆಂಧ್ರ ಸಿಎಂ ಕಿರಣ್ ರೆಡ್ಡಿ ನಿರತರಾಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications