ನಮ್ಮ ಬೆಂಗಳೂರು ಪ್ರಶಸ್ತಿಗೆ ಹೆಸರನ್ನು ಸೂಚಿಸಿ

ವಿದ್ಯಾರ್ಥಿಗಳು, ಕ್ರೀಡಾಪಟುಗಳು, ಉದ್ಯಮಿಗಳು, ಸ್ವಯಂ ಸೇವಾ ಸಂಘಗಳು, ಎನ್ ಜಿಒಗಳು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಸಾಮಾನ್ಯ ಸಾಧನೆ ತೋರಿರುವ ಜನ ಸಮಾನ್ಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ವರ್ಷ ಸುಮಾರು 4,000 ಜನ ಹೆಸರನ್ನು ಪ್ರಶಸ್ತಿಗೆ ಸೂಚಿಸಲಾಗಿತ್ತು. ನಗರಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ವೈದ್ಯರು, ಶಿಕ್ಷಕಿಯರು, ಪೌರ ಸೇವಕರು, ಸಮಾಜ ಸೇವಕರು ಹೀಗೆ ಹಲವು ವ್ಯಕ್ತಿಗಳು, ಸಂಘ ಸಂಸ್ಥೆಗಳು ಎಲೆ ಮರೆ ಕಾಯಿಯಂತೆ ದುಡಿಯುತ್ತಿರುವವರನ್ನು ಮುಖ್ಯ ವಾಹಿನಿಗೆ ಪರಿಚಯಿಸುವುದು ನಮ್ಮ ಬೆಂಗಳೂರು ಫೌಂಡೇಷನ್ ಉದ್ದೇಶ. ಬೆಂಗಳೂರನ್ನು ಉತ್ತಮ ನಗರವನ್ನಾಗಿಸಲು ನಾವು ಹಮ್ಮಿಕೊಂಡಿರುವ ಈ ಕಾಯಕಕ್ಕೆ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅತಿಮುಖ್ಯ ಎಂದು ರಾಜೀವ್ ಅಭಿಪ್ರಾಯಪಟ್ಟರು.
ಆಯ್ಕೆ ಸಮಿತಿ : ಪ್ರಶಸ್ತಿಗೆ ಅರ್ಹರಾದವರನ್ನು ಆಯ್ಕೆ ಮಾಡಲು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಕೆಎಸ್ ಸಿಎ ಅಧ್ಯಕ್ಷ ಅನಿಲ್ ಕುಂಬ್ಳೆ, ನಿವೃತ್ತ ಐಎಎಸ್ ಅಧಿಕಾರಿ ಡಾ. ಎ ರವೀಂದ್ರ ಸೇರಿದಂತೆ 21 ಜನ ಗಣ್ಯರ ಸಮಿತಿ ರಚಿಸಲಾಗಿದೆ.
ಇದೇ ವೇಳೆ " ನಮ್ಮ ಬೆಂಗಳೂರು ಪ್ರಶಸ್ತಿ " ಜೊತೆಗೆ "ನಮ್ಮ ಬೆಂಗಳೂರಿಗ" ಎಂಬ ವಿಶಿಷ್ಟ ಪ್ರಶಸ್ತಿಯನ್ನು ನಗರದ ಒಳಿತಿಗಾಗಿ ದುಡಿಯುವ ವ್ಯಕ್ತಿಗೆ ನೀಡಲಾಗುವುದು ಪ್ರಶಸ್ತಿಯು ನಗದು ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ. ಇನ್ನೇಕೆ ತಡ, ಕೆಳಗಿನ ವಿಭಾಗಗಳಲ್ಲಿ ನಿಃಸ್ವಾರ್ಥದಿಂದ ಕರ್ತವ್ಯ ನಿರ್ವಹಿಸುತ್ತಿರುವವರ ಪ್ರಶಸ್ತಿಗೆ ಅರ್ಹರಾದ ನಿಮ್ಮ ನೆಚ್ಚಿನ ಬೆಂಗಳೂರಿಗರನ್ನು ಸೂಚಿಸಿ,
1) ವಿಧಾನಸಭೆ ಸದಸ್ಯ, ವಿಧಾನಪರಿಷತ್ ಸದಸ್ಯ, ಸಂಸದ, ಸರಕಾರಿ ಅಧಿಕಾರಿಗಳು, ಬಿಡಿಎ, ಬಿಬಿಎಂಪಿ, ಬೆಸ್ಕಾಂನಂಥ ಸಂಸ್ಥೆಗಳು.
2) ಸರ್ಕಾರೇತರ ಸಂಸ್ಥೆ, ಮತ್ತು ಶ್ರೀಸಾಮಾನ್ಯರು.
ನಾಮ ನಿರ್ದೇಶನ ಮಾಡುವುದು ಹೇಗೆ?
* ನಮ್ಮ ಬೆಂಗಳೂರು ಅಂತರ್ಜಾಲ ತಾಣದಿಂದ ನಾಮನಿರ್ದೇಶನ ಫಾರಂಅನ್ನು ಡೌನ್ ಲೋಡ್ ಮಾಡಬಹುದು.
* ಬೆಂಗಳೂರು ಒನ್ ಕಚೇರಿ, ಕೆಫೆ ಕಾಫಿ ಡೇಯಿಂದ ನಾಮನಿರ್ದೇಶನ ಫಾರಂಅನ್ನು ಪಡೆಯಬಹುದು.
* ಭರ್ತಿ ಮಾಡಿದ ಅರ್ಜಿಯನ್ನು ಅಥವಾ ಫಾರಂಅನ್ನು ಫೋಟೋ, ವಿಡಿಯೋ ಸಹಿತ ಸಲ್ಲಿಸಬೇಕು.
* ಖುದ್ದಾಗಿ ಅಥವಾ ಆನ್ ಲೈನ್ ಕೂಡ ಅರ್ಜಿಯನ್ನು ಸಲ್ಲಿಸಬಹುದು.
* ನಾಮನಿರ್ದೇಶನ ಫಾರಂಗಳು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಲಭ್ಯವಿವೆ.
* ಹೆಚ್ಚಿನ ಮಾಹಿತಿಗೆ ಫೀವರ್ 104 ಎಫ್ ಎಂ ವಾಹಿನಿ ಹಾಗೂ ರೇಡಿಯೋ ಇಂಡಿಗೋ ಎಫ್ ಎಂ ವಾಹಿನಿ ಕೇಳುತ್ತಿರಿ.
* ನಮ್ಮ ಬೆಂಗಳೂರು ಫೌಂಡೇಷನ್ ಜೊತೆ ಕೈ ಜೋಡಿಸಿರುವ ಸುವರ್ಣ ನ್ಯೂಸ್ ವಾಹಿನಿಯಲ್ಲಿ ವಿವರಗಳನ್ನು ಪಡೆಯಬಹುದು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications