ದೇವರಕಾಡು, ನದಿಮೂಲ ರಕ್ಷಣೆಗೆ ಹೋರಾಟ ನಿಲ್ಲದು

ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವರ ಕಾಡು ರಕ್ಷಣೆಗಾಗಿ ಅನೇಕ ರೀತಿಯ ಕಾರ್ಯ ಕ್ರಮಗಳನ್ನು ರೂಪಿಸಲಾಗಿದೆ. ಇಂತಹ ಕಾಡುಗಳನ್ನು ಗುರುತಿ ಸಲಾಗಿದ್ದು, ಇದರ ಮೇಲೆ ಅರಣ್ಯ ಇಲಾಖೆ ನಿಯಂತ್ರಣಕ್ಕೆ ಒಳಪಡಿಸಲು ಸರ್ಕಾರದ ಜೊತೆ ಸಮಾಲೋಚನೆ ನಡೆಸಲಾಗುತ್ತಿದೆ. ಇಂತಹ ಕಾಡುಗಳಲ್ಲಿ ದೊಡ್ಡ ಮರಗಳು ಹೇರಳವಾಗಿದ್ದು, ಇವುಗಳ ರಕ್ಷಣೆಗಾಗಿ ಸರ್ಕಾರ ಮುಂದಾಗಬೇಕು. ಜೊತೆಗೆ ಅರಣ್ಯ ಇಲಾಖೆಗೆ ಮರಗಳ ಬಗ್ಗೆ ರಕ್ಷಣೆ ತೆಗೆದುಕೊಳ್ಳಲು ಸೂಚನೆ ನೀಡಬೇಕು ಎಂದರು.
ಪಶ್ಚಿಮಘಟ್ಟ ಕಾರ್ಯಪಡೆ ಅರಣ್ಯ ರಕ್ಷಣೆಯ ಬಗ್ಗೆ ಬದ್ಧವಾಗಿದೆ. ಇದಕ್ಕಾಗಿ ಯೋಜನೆಗಳನ್ನು ರೂಪಿಸ ಲಾಗಿದೆ ಎಂದ ಅವರು, ಶಿವಮೊಗ್ಗ ಜಿಲ್ಲೆಯ ಮಂಡಗದ್ದೆ ಸಮೀಪದ ಕುಲ್ಳುಂಡೆ ಎಂಬಲ್ಲಿ ಖಾಸಗಿ ವ್ಯಕ್ತಿಗಳು 100 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಭೂಮಿಯನ್ನು ಹೊಂದಿದ್ದು, ಇದು ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಈ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಗಳು ಹಕ್ಕು ಸ್ಥಾಪನೆ ಮಾಡಿದ್ದು, ಕಾಫಿ ಕಾನ್ ಪ್ರದೇಶದಲ್ಲಿ ದೊಡ್ಡ ದೊಡ್ಡ ಮರಗಳನ್ನು ಕಡಿಯಲು ಮುಂದಾಗಿದ್ದರು. ಪ್ರತ್ಯೇಕ್ಷವಾಗಿ ಆ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿಯನ್ನು ತೆಗೆದುಕೊಂಡು ಬಂದಿದ್ದೇನೆ. ಖಾಸಗಿ ವ್ಯಕ್ತಿಗಳು ಈಗಾಗಲೇ ನ್ಯಾಯಾಲಯದಲ್ಲಿ ತಮ್ಮ ಹಕ್ಕಿಗಾಗಿ ದೂರನ್ನು ದಾಖಲಿಸಿದ್ದಾರೆ.
ಆದರೆ, ಆ ಜಾಗದಲ್ಲಿ ಬೆಳೆಯನ್ನು ಬೇಕಾದರೆ ಬೆಳೆಯಲಿ. ಅಲ್ಲಿರುವಂತಹ ಮರಗಳನ್ನು ಕಡಿಯುವುದು ಸರಿಯಲ್ಲ. ಹೀಗಾ ಗಿಯೇ ಇಂತಹ ಪ್ರದೇಶಗಳನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆಯುವ ಸಂಬಂಧ ಹಾಗೂ ಸಂರಕ್ಷಣಾ ಕ್ರಮ ತೆಗೆದುಕೊಳ್ಳಲು ಸರ್ಕಾರದ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ನದಿಮೂಲ ರಕ್ಷಣೆ ಅಭಿಯಾನ : ಹಾಗೆಯೇ ಪಶ್ಚಿಮಘಟ್ಟ ಪ್ರದೇಶ ಗಳ ವ್ಯಾಪ್ತಿಯಲ್ಲಿರುವ 9 ಜಿಲ್ಲೆಗಳಲ್ಲಿ ನದಿಗಳ ಸಂರಕ್ಷಣೆಗಾಗಿ ನದಿಮೂಲ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಕುಮದ್ವತಿ ನದಿ ಮೂಲದಲ್ಲಿ ಅಲ್ಲಿನ ಸ್ಥಳೀಯರನ್ನೇ ಜೊತೆಗಿಟ್ಟುಕೊಂಡು ಜಾಗೃತಿ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗುವುದು. ಒಟ್ಟಾರೆ ಪಶ್ಚಿಮಘಟ್ಟ ಅರಣ್ಯ ಪ್ರದೇಶ ಹಾಗೂ ನದಿಗಳ ಉಳುವಿಗಾಗಿ ಎಲ್ಲಾ ರೀತಿಯಲ್ಲಿ ಹೋರಾಟ ನಡೆಯಲಿದೆ ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications