ಕೃಷ್ಣಾ ಮೇಲ್ದಂಡೆ ಅಕ್ರಮ, ಗೌಡ್ರ ಮೇಲೆ ಸಿಐಡಿ ತನಿಖೆ

CID probe on Deve Gowda
ಬೆಂಗಳೂರು, ನ.30: ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ತುಂಡು ಗುತ್ತಿಗೆ ಕಾಮಗಾರಿಗಳಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ಸಿಐಡಿ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ತನಿಖೆ ಪೂರ್ಣಗೊಳಿಸಿ ವರದಿ ನೀಡಲು ಕಾಲಮಿತಿ ನಿಗದಿ ಮಾಡಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ವಿಎಸ್ ಆಚಾರ್ಯ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಾರ್ವಜನಿಕವಾಗಿಯೂ ಚರ್ಚೆಯಾಗಿತ್ತು. ಮಾಜಿ ಸಚಿವ ವೈಜನಾಥ್ ಪಾಟೀಲ ಮತ್ತು ದಾತಾರ್ ಸಮಿತಿ ಸಹ ಈ ಬಗ್ಗೆ ಪ್ರಸ್ತಾಪಿಸಿತ್ತು. ಅಲ್ಲದೆ ಸೋಮಶೇಖರ ರೆಡ್ಡಿ ಎನ್ನುವವರು ಕಳೆದ ಜನವರಿಯಲ್ಲಿ ಈ ವಿಷಯವನ್ನು ಹೈಕೋರ್ಟ್‌ಗೆ ತೆಗೆದುಕೊಂಡು ಹೋಗಿದ್ದರು. ನ್ಯಾಯಾಲಯ ಈ ಬಗ್ಗೆ ತನಿಖೆ ನಡೆಸಬಹುದು ಎಂದು ಫೆಬ್ರವರಿಯಲ್ಲಿ ತೀರ್ಪು ನೀಡಿದೆ.

ಹೀಗಾಗಿ ತುಂಡು ಗುತ್ತಿಗೆ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಲಾಗಿದೆ. 1994-96ರ ಅವಧಿಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದ ವಿವಿಧ ಕಾಮಗಾರಿಗಳಲ್ಲಿ ಒಟ್ಟು 85 ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಈ ಪೈಕಿ ಲೋಕೋಪಯೋಗಿ ಇಲಾಖೆಯು ಟೆಂಡರ್ ಕರೆಯುವಾಗ ಕೋಡ್ ಉಲ್ಲಂಘನೆ ಮಾಡಿರುವುದರಿಂದ 73 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಮಹಾಲೆಕ್ಕಪಾಲರ ವರದಿಯಲ್ಲಿ ಪ್ರಸ್ತಾಪಿಸಿರುವುದು ಪ್ರಮುಖವಾಗಿದೆ ಎಂದು ಆಚಾರ್ಯ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+