Get Updates
Get notified of breaking news, exclusive insights, and must-see stories!

ಶಿವಮೊಗ್ಗ : ಧ್ವನಿ ಬೆಳಕಿನಲ್ಲಿ ವಿಜಯನಗರದ ವೈಭವ

Ponnu Raj, Shivamogga DC
ಶಿವಮೊಗ್ಗ, ಡಿ. 1 : ವಿಜಯನಗರದ ಅರಸ ಶ್ರೀ ಕೃಷ್ಣದೇವರಾಯರ 500ನೇ ವರ್ಷದ ಪೀಠಾರೋಹಣ ಸಮಾರಂಭ ಆಚರಣೆಯ ಸ್ಮರಣಾರ್ಥವಾಗಿ ಸರ್ಕಾರವು ರಾಜ್ಯದ 20 ಜಿಲ್ಲೆಗಳಲ್ಲಿ ಧ್ವನಿ-ಬೆಳಕು ವಿಶೇಷ ಕಾರ್ಯಕ್ರಮವನ್ನು ಪ್ರವಾಸೋದ್ಯಮ ಇಲಾಖೆಯ ನೇತೃತ್ವದಲ್ಲಿ ಪ್ರಸ್ತುತಪಡಿಸುತ್ತಿದೆ.

ಶಿವಮೊಗ್ಗದಲ್ಲಿ ಡಿಸೆಂಬರ್ 4 ಮತ್ತು 5ರಂದು ಪ್ರತಿದಿನ ಸಂಜೆ 7.30ರಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪೊನ್ನುರಾಜ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಅವರು ಮಾತನಾಡುತ್ತಿದ್ದರು.

ಈ ಕಾರ್ಯಕ್ರಮ ವಿಶೇಷ ರೀತಿಯಲ್ಲಿ ರೂಪುಗೊಂಡಿದ್ದು, ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ನೆನಪಿಸಲಿದೆ ಎಂದ ಅವರು, ವಿಜಯನಗರದ ವಿರೂಪಾಕ್ಷ ದೇವಾಲಯ, ಕಲ್ಲಿನರಥ, ಸಾಸಿವೆಕಾಳು ಗಣಪ, ಕಡಲೆಕಾಳು ಗಣಪ, ವಿಜಯ ವಿಠ್ಠಲ ದೇವಾಲಯ, ನರಸಿಂಹ, ಕಲ್ಯಾಣಿ ಮತ್ತು ಹಂಪೆಯ ದೃಶ್ಯ ವೈಭವಗಳು ಧ್ವನಿ-ಬೆಳಕಿನಲ್ಲಿ ಅತ್ಯಾಕರ್ಷಕವಾಗಿ ಮೂಡಿಬರಲಿವೆ ಎಂದರು.

ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದ ಸೊಬಗನ್ನು ಸಾರ್ವಜನಿಕರು ನೋಡಿ ಆನಂದಿಸಬೇಕು ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಂಗಯ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಹುಸೇನಿ, ವಿವೇಕಾನಂದ, ವೈದ್ಯ ಮುಂತಾದವರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+