ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶಿವಮೊಗ್ಗ : ಧ್ವನಿ ಬೆಳಕಿನಲ್ಲಿ ವಿಜಯನಗರದ ವೈಭವ
ಶಿವಮೊಗ್ಗದಲ್ಲಿ ಡಿಸೆಂಬರ್ 4 ಮತ್ತು 5ರಂದು ಪ್ರತಿದಿನ ಸಂಜೆ 7.30ರಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪೊನ್ನುರಾಜ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಅವರು ಮಾತನಾಡುತ್ತಿದ್ದರು.
ಈ ಕಾರ್ಯಕ್ರಮ ವಿಶೇಷ ರೀತಿಯಲ್ಲಿ ರೂಪುಗೊಂಡಿದ್ದು, ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ನೆನಪಿಸಲಿದೆ ಎಂದ ಅವರು, ವಿಜಯನಗರದ ವಿರೂಪಾಕ್ಷ ದೇವಾಲಯ, ಕಲ್ಲಿನರಥ, ಸಾಸಿವೆಕಾಳು ಗಣಪ, ಕಡಲೆಕಾಳು ಗಣಪ, ವಿಜಯ ವಿಠ್ಠಲ ದೇವಾಲಯ, ನರಸಿಂಹ, ಕಲ್ಯಾಣಿ ಮತ್ತು ಹಂಪೆಯ ದೃಶ್ಯ ವೈಭವಗಳು ಧ್ವನಿ-ಬೆಳಕಿನಲ್ಲಿ ಅತ್ಯಾಕರ್ಷಕವಾಗಿ ಮೂಡಿಬರಲಿವೆ ಎಂದರು.
ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದ ಸೊಬಗನ್ನು ಸಾರ್ವಜನಿಕರು ನೋಡಿ ಆನಂದಿಸಬೇಕು ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಂಗಯ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಹುಸೇನಿ, ವಿವೇಕಾನಂದ, ವೈದ್ಯ ಮುಂತಾದವರು ಉಪಸ್ಥಿತರಿದ್ದರು.
Comments
ನಾಗರಿಕ ಪತ್ರಕರ್ತ ಕೆಆರ್ ಸೋಮನಾಥ್ ಶಿವಮೊಗ್ಗ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯ somanath citizen journalist krishnadevaraya shivamogga
English summary
On the occasion of 500th year of pattabhisheka of vijayanagar king sri krishnadevaraya government is celebrating the event in shivamogga on december 4 and 5.
Story first published: Wednesday, December 1, 2010, 19:04 [IST]