8846 ಕೋ.ರು.ಗಳ ದಾನ ನೀಡಿದ ಪ್ರೇಮ್ ಜೀ

ಒಬ್ಬ ಉದ್ಯಮಿ ಹಳ್ಳಿಗಳ ಉದ್ಧಾರಕ್ಕಾಗಿ ಇಷ್ಟು ದೊಡ್ಡ ಮೊತ್ತವನ್ನು ಒಂದೇ ಕಂತಿನಲ್ಲಿ ಹಣವನ್ನು ದಾನವಾಗಿ ಘೋಷಣೆ ಮಾಡಿದ ಉದಾಹರಣೆ ಇಲ್ಲ. ಭಾರತದಲ್ಲಿರುವ ಶಾಲೆಗಳು ಸುಧಾರಣೆಯಾಗಬೇಕು. ಗುಣಮಟ್ಟದ ಶಿಕ್ಷಣ ಭಾರತೀಯ ಬಡಮಕ್ಕಳಿಗೆ ಸಿಗಬೇಕು ಎಂಬ ಉದ್ದೇಶದ ಜೊತೆಗೆ ಶಿಕ್ಷಣವೇ ದೇಶದ ಭವಿಷ್ಯವನ್ನು ನಿರ್ಧರಿಸಬಲ್ಲದು.
ಇದನ್ನು ಕೊಟ್ಟರೆ ಮಕ್ಕಳೆ ದೇಶಕ್ಕೆ ದೊಡ್ಡ ಆಸ್ತಿಯಾಗಬಲ್ಲರು ಎಂಬ ನಂಬಿಕೆ ಇಟ್ಟುಕೊಂಡು ಒಂದೇ ಕಂತಿನಲ್ಲಿ ಶಿಕ್ಷಣದ ಉದ್ಧಾರಕ್ಕಾಗಿ 8,846 ಕೋಟಿ ರುಪಾಯಿಗಳನ್ನು ನೀಡುತ್ತಿರುವುದಾಗಿ ಪ್ರೇಮ್ ಜೀ ತಿಳಿಸಿದ್ದಾರೆ. ಡಿಸೆಂಬರ್ 7ರೊಳಗೆ ಅಜೀಂ ಪ್ರೇಮ್ ಜೀ ಟ್ರಸ್ಟ್ ಗೆ ಹಣವನ್ನು ವರ್ಗಾವಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
2001ರಲ್ಲಿ ಅಜೀಂ ಪ್ರೇಮ್ ಜೀ ಫೌಂಡೇಷನ್ ಟ್ರಸ್ಟ್ ಸ್ಥಾಪಿಸಲಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈವರೆಗೆ ಸುಮಾರು 25 ಸಾವಿರ ಶಾಲೆಗಳೊಂದಿಗೆ ಟ್ರಸ್ಟ್ ನಿಕಟ ಸಂಪರ್ಕ ಹೊಂದಿದ್ದು, ಎರಡೂವರೆ ಲಕ್ಷ ವಿದ್ಯಾರ್ಥಿಗಳು ಕಂಪನಿಯ ಧನ ಸಹಾಯ ಪಡೆದುಕೊಂಡಿದ್ದಾರೆ. ಕರ್ನಾಟಕ ಸರಕಾರ ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯ ಸ್ಥಾಪಿಸಲು ಅನುಮತಿ ನೀಡಿದ್ದು, ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಸುಮಾರು 75 ಜಾಗದಲ್ಲಿ ವಿಶ್ವವಿದ್ಯಾಲಯ ಆರಂಭಿಸಲಾಗುವುದು.
2011ಕ್ಕೆ ವಿಶ್ವವಿದ್ಯಾಲಯ ಶುರು ಮಾಡಲಾಗುವುದು. ಬಡಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣವನ್ನು ಸಹ ವಿಶ್ವವಿದ್ಯಾಲಯ ನೀಡಲಿದೆ ಎಂದು ಅಜೀಂ ಪ್ರೇಮ್ ಜೀ ವಿವರಿಸಿದರು. ಅಜೀಂ ಪ್ರೇಮ್ ಜೀ ಭಾರತದ ಮೂರನೇ ಸಿರಿವಂತ ವ್ಯಕ್ತಿಯಾಗಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications