ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಂದೇ ವೇದಿಕೆಯಲ್ಲಿ ಬಿಎಸ್ ವೈ, ಕುಮಾರಸ್ವಾಮಿ

By Mrutyunjaya Kalmat
|
Google Oneindia Kannada News

HD Kumaraswamy
ಬೆಂಗಳೂರು, ಡಿ. 2 : ದೇವೇಗೌಡರ ಕುಟುಂಬದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ನೆರೆದಿದ್ದ ಸಾರ್ವಜನಿಕರಿಗೆ ಅಚ್ಚರಿಯನ್ನುಂಟು ಮಾಡಿದ ಪ್ರಸಂಗ ಯಲಹಂಕದಲ್ಲಿ ನಡೆದ ಸಮಾರಂಭವೊಂದು ಸಾಕ್ಷಿಯಾಯಿತು.

ಮುಖ್ಯಮಂತ್ರಿಗಳ ವೇದಿಕೆಯಲ್ಲೇ ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬ ಅಕ್ರಮವಾಗಿ ಜಮೀನು ಗಳಿಸಿದೆ. ವಾರದೊಳಗೆ ಜಮೀನನ್ನು ಸರಕಾರಕ್ಕೆ ಹಿಂದಿರುಗಿಸದಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದರು. ದೇವೇಗೌಡರ ಕುಟುಂಬ ಅಕ್ರಮವಾಗಿ ಭೂಮಿ ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಸಾಬೀತುಪಡಿಸಿದರೆ, ವಾರದೊಳಗೆ ನಮ್ಮ ಎಲ್ಲ ಭೂಮಿಯನ್ನು ಸರಕಾರಕ್ಕೆ ನೀಡುವುದಾಗಿ ಕುಮಾರಸ್ವಾಮಿ ಹೇಳಿದರು.

ತಪ್ಪು ಮಾಡಿದ್ದರೆ ದೇವೇಗೌಡರು ಸೇರಿದಂತೆ ಕುಟುಂಬದ ಸದಸ್ಯರು ಸೇರಿದಂತೆ ಜೈಲಿಗೆ ಹೋಗಲು ರೆಡಿಯಾಗಿದ್ದೇವೆ. ಬರೀ ಸುಳ್ಳು ಆಪಾದನೆ ಮಾಡುವುದನ್ನು ಬಿಡುವುದು ಒಳ್ಳೆಯದು ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಮಾತಿಗಿಳಿಯುವ ಮುಂಚಿತವಾಗಿಯೇ ಕುಮಾರಸ್ವಾಮಿ ವೇದಿಕೆಯಿಂದ ನಿರ್ಗಮಿಸಿದ್ದು ವಿಶೇಷವಾಗಿತ್ತು.

ನಂತರ ಮಾತನಾಡಿದ ಯಡಿಯೂರಪ್ಪ, ಹಳೆ ರಾಗವನ್ನೆ ಹಾಡಿದರು. ಪ್ರತಿಪಕ್ಷಗಳು ವಿನಾಕಾರಣ ಸರಕಾರದ ವಿರುದ್ಧ ಆರೋಪ ಮಾಡುತ್ತಿವೆ. ಇದಕ್ಕೆ ನಾವು ಬಗ್ಗುವುದಿಲ್ಲ. ಭೂ ಹಗರಣಗಳನ್ನು ಬಯಲಿಗೆಳೆಯಲು ಸರಕಾರ ಆರಂಭಿಸಿದೆ. ಎಲ್ಲ ಹುಳುಕುಗಳನ್ನು ಹೊರಗೆಳೆಯಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಸಿದ್ಧಗಂಗಾ ಮಠ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

English summary
Former Chief Minister H.D. Kumaraswamy and Chief Minister B.S. Yeddyurappa, the political arch rivals, surprised the audience when they shared the dais in a public function here in a mega conference on universe at Siddhashri Dhama in Yelahanka,Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X