ಆಂಧ್ರದಲ್ಲಿ ಜಗನ್ ಜೊತೆಗೆ ಬಿಜೆಪಿ ಮೈತ್ರಿ?

ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಗೆ ಪರ್ಯಾಯವಾಗಿ ಇನ್ನೊಂದು ಪಕ್ಷ ಅನಿವಾರ್ಯತೆ ಎದುರಾಗಿದೆ. ಇರುವ ಪ್ರತಿಪಕ್ಷಗಳು ಕಾಂಗ್ರೆಸ್ ವಿರುದ್ಧ ಸೆಣಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಗನ್ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಆಂಧ್ರದಲ್ಲಿ ಬಿಜೆಪಿಯ ಅಡಿಪಾಯ ಅಷ್ಟೇನೂ ಗಟ್ಟಿಯಾಗಿಲ್ಲವಾದ್ದರಿಂದ ಜಗನ್ ಮೂಲಕ ಅಡಿಪಾಯ ಹಾಕಿಕೊಳ್ಳಲು ಬಿಜೆಪಿ ಮನಸ್ಸು ಮಾಡಿದೆ. ಮೂಲಗಳ ಪ್ರಕಾರ, ಬಿಜೆಪಿ ರಾಜ್ಯ ಮುಖಂಡರು ಈಗಾಗಲೇ ಜಗನ್ ಜೊತೆಗೆ ಮಾತುಕತೆ ನಡೆಸಿದ್ದಾರೆ
ಕಾಂಗ್ರೆಸ್ ನಲ್ಲಿ ಬಂಡಾಯ ಅಲೆ ಎಬ್ಬಿಸಿರುವ ಅನೇಕ ಶಾಸಕರು, ಸಂಸದರು ಶೀಘ್ರದಲ್ಲಿ ಜಗನ್ ಅವರೊಂದಿಗೆ ಗುರುತಿಸಿಕೊಳ್ಳಲಿದ್ದಾರೆ. ಶೀಘ್ರದಲ್ಲಿ ಜಗನ್ ನೂತನ ಪಕ್ಷ ಸ್ಥಾಪಿಸಲಿದ್ದು, ಅಧಿಕೃತವಾಗಿ ಜಗನ್ ಅವರೇ ಘೋಷಣೆ ಮಾಡಲಿದ್ದಾರೆ ಎಂದು ಜಗನ್ ಗುಂಪಿನಲ್ಲಿ ಗುರುತಿಸಿಕೊಂಡಿರುವ ಅಂಬಟಿ ರಾಮಬಾಬು ಹೇಳಿದ್ದಾರೆ. ಕಾಂಗ್ರೆಸ್ ಗೆ ಪರ್ಯಾಯವಾಗಿ ಜಗನ್ ಅವರ ನೂತನ ಪಕ್ಷ ಬೆಳೆದು ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಂಡೆದ್ದಿರುವ ಜಗನ್ ಇತ್ತೀಚೆಗೆ ಕಡಪ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಎಸ್ ರಾಜಶೇಖರರೆಡ್ಡಿ ಅಕಾಲಿಕ ನಿಧನದ ನಂತರ ಜಗನ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಸೋನಿಯಾ ಗಾಂಧಿ ಅವರು ಕೆ ರೋಶಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದರು. ಅಲ್ಲಿಂದ ಶುರುವಾದ ಜಗನ್ ಬಂಡಾಯ ರಾಜೀನಾಮೆ ನೀಡುವ ಮೂಲಕ ಪರ್ಯಾವಸನಗೊಂಡಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications