ಲೋಕಾಯುಕ್ತ ಎಫ್ ಐಆರ್ ಪಡೆದ ಕಟ್ಟಾ ತಲೆದಂಡ?

ಇದರಿಂದ ರಾಜ್ಯ ಸರ್ಕಾರಕ್ಕೆ ಇನ್ನೊಂದು ದೊಡ್ಡ ಆಘಾತ ಉಂಟಾಗಿದ್ದು, ಈ ಪ್ರಕರಣದಿಂದಾಗಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ತಲೆ ದಂಡವಾಗುವ ಸಾಧ್ಯತೆ ನಿಚ್ಚಳವಾಗಿದೆ. ರಾಜ್ಯದ ಸಂಪುಟ ದರ್ಜೆಯ ಸಚಿವರೊಬ್ಬರ ಮೇಲೆ ಇದೇ ಮೊದಲ ಬಾರಿಗೆ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿದ ಲೋಕಾಯುಕ್ತ ಪೊಲೀಸರು, ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರನ್ನು ಬಂಧಿಸಲು ಅನುಮತಿ ಕೋರಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯನವರಿಗೆ ಪತ್ರ ಬರೆದಿದ್ದಾರೆ.
ವಿವಿಧ ಸೆಕ್ಷನ್ಗಳಡಿ ಎಫ್ಐಆರ್: ಸಚಿವ ಕಟ್ಟಾ ಹಾಗೂ ಅವರ ಪುತ್ರ ಸಹಿತ 11 ಮಂದಿಯ ವಿರುದ್ಧ ಸೆಕ್ಷನ್ 7,8,12, 13(1)(ಡಿ), ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆ.419, 420, 465, 468, 471 ಅಯನ್ವಯ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕೆಐಎಡಿಬಿ ಹಗರಣದಲ್ಲಿ ಈ ಹಿಂದೆ ಸಿಲುಕಿ ಜೈಲು ಪಾಲಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಪುತ್ರ ಕಟ್ಟಾ ಜಗದೀಶ್ರನ್ನು ಮತ್ತೆ ಲೋಕಾಯುಕ್ತ ಪೊಲೀಸರು ವಿಚಾರಣೆಗೊಳಪಡಿಸಲು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
2006ರಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಬೃಹತ್ ಕೈಗಾರಿಕಾ ಸಚಿವರಾಗಿದ್ದ ಅವಧಿಯಲ್ಲಿ ಕೆಐಎಡಿಬಿ ಅಧಿಕಾರಿಗಳೊಂದಿಗೆ ಸೇರಿಕೊಂಡು ಕೋಟ್ಯಂತರ ರೂ.ಬೆಲೆಯ ಭೂಮಿಯನ್ನು ಕಾನೂನು, ನೀತಿ, ನಿಯಮವನ್ನು ಉಲ್ಲಂಘಿಸಿ ಇಟಾಸ್ಕ ಎಂಬ ಕೆಂಪೆನಿಗೆ ಮಂಜೂರು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ಎಫ್ಐಆರ್ ದಾಖಲು ಮಾಡಲಾಗಿದೆ.
ದೇವನಹಳ್ಳಿ ಸಮೀಪದ ಬಂಡಿಕೊಡಿಗೆಹಳ್ಳಿ ಗ್ರಾಮದ 325 ಎಕರೆ ಭೂಮಿಯನ್ನು ಪುತ್ರ ಕಟ್ಟಾ ಜಗದೀಶ್ರ ಇಟಾಸ್ಕ ಕಂಪೆನಿಗೆ ಅಕ್ರಮವಾಗಿ ಮಂಜೂರು ಮಾಡಲು ಕೆಐಎಡಿಬಿ ಅಧಿಕಾರಿಗಳೊಂದಿಗೆ ಸಚಿವ ಕಟ್ಟಾ ಒಡಂಬಡಿಕೆ ಮಾಡಿಕೊಂಡಿದ್ದರು ಎಂದು ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಆರೋಪಿಸಿದ್ದಾರೆ.
ಇಟಾಸ್ಕ ಕಂಪೆನಿಯ ಪರವಾಗಿ ಸಚಿವರ ಕುಟುಂಬ, ಅವರ ಸಹಚರರು, ಇತರ ಕೆಲವು ರೈತರಿಂದ ಭೂಸ್ವಾಧೀನಕ್ಕೆ ಒಪ್ಪಂದ ಪತ್ರ ಸಲ್ಲಿಕೆ ಮಾಡಿದ ಪ್ರಕ್ರಿಯೆಯಲ್ಲಿ ಹಲವಾರು ಅಕ್ರಮಗಳು, ನಕಲಿ ದಾಖಲೆ ಸೃಷ್ಟಿ, ಸರಕಾರಕ್ಕೆ ಸುಳ್ಳು ಮಾಹಿತಿ ಸಲ್ಲಿಸುವಿಕೆ, ಬಲವಂತ ಮತ್ತು ಸರಕಾರದ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಅವರು ವಿವರ ನೀಡಿದ್ದಾರೆ.
ಇಟಾಸ್ಕ ಎಂಬ ಸಾಫ್ಟ್ಟ್ವೇರ್ ಕಂಪೆನಿ ಸ್ಥಾಪಿಸಿ ಉದ್ಯೋಗ ಮಿತ್ರ ಯೋಜನೆಯಡಿ ಇದನ್ನು ನೋಂದಣಿ ಮಾಡಿಸಿದ್ದರು. ಈ ಸಂಸ್ಥೆಯ ಮೂಲಕ ನೂರಾರು ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಸ್ವಾಧೀನಪಡಿಸಿ ಕೊಂಡಿರುವುದಲ್ಲದೆ, ಸರಕಾರಿ ಭೂಮಿಗೆ ಪರಿಹಾರವನ್ನೂ ಕೂಡ ಪಡೆದಿದ್ದ ಆರೋಪ ಸಚಿವ ಕಟ್ಟಾ ಹಾಗೂ ಅವರ ಪುತ್ರನ ಮೇಲೆ ಹೊರಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications