ಯಾರದೋ ಭೂಮಿಯಲಿ ಸಿಮೆಂಟ್ ಕಂಬ ನೆಟ್ಟ ರಾಘು!

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 206ರ ಪಕ್ಕದಲ್ಲಿಯೇ 17 ಎಕರೆ 10 ಗುಂಟೆ ಜಮೀನಿದೆ. ಈ ಪೈಕಿ ಸರ್ವೆ ನಂ.3/ಪಿ ಜಮೀನಿಗೆ ನಾನು ಖಾತೆದಾರನಾಗಿದ್ದು, 2 ಎಕರೆ ಜಮೀನು ನನ್ನ ಸ್ವಾಧೀನದಲ್ಲಿದೆ. ಈ ಜಮೀನನ್ನು 1985ರಲ್ಲಿ ನಾನು ಖರೀದಿಸಿದ್ದು, ಭೂ ಪರಿವರ್ತನೆಯೂ ಆಗಿದೆ ಎಂದು ವಿವರಿಸಿದರು.
ಈ ಜಮೀನನ್ನು ಸಂಸದ ಬಿ.ವೈ.ರಾಘವೇಂದ್ರ ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಮಾಡಿಕೊಂಡು ಹೋಟೆಲ್ ಕಾಂಪ್ಲೆಕ್ಸ್ ಕಟ್ಟಲು ತಯಾರಿ ಮಾಡಿಸಿದ್ದಾರೆ. ನನ್ನ ಸ್ವಾಧೀನದಲ್ಲಿರುವ ಜಮೀನಿನಲ್ಲಿ ಅಕ್ರಮವಾಗಿ ಪ್ರವೇಶ ಮಾಡಿ ನನ್ನ ಹೆಸರನ್ನೇ ಪಹಣಿಯಿಂದ ಕೈಬಿಡಲು ಕುತಂತ್ರ ನಡೆಸಿದ್ದಾರೆ. ಈ ಜಾಗದಲ್ಲಿ ರಾತ್ರೋರಾತ್ರಿ ಅಕ್ರಮ ಸಿಮೆಂಟ್ ಕಂಬಗಳನ್ನು ನಿಲ್ಲಿಸಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದರು.
ಸರ್ವೆ ನಂ.3/ಪಿ ಜಮೀನನ್ನು 1985ರಲ್ಲಿ ಮಲ್ಲಿಗೇನಹಳ್ಳಿ ವಾಸಿ ತಿಮ್ಮಪ್ಪ ಬಿನ್ ಕೆಂಪತಿಮ್ಮಯ್ಯರವರಿಂದ ನಾನು ಶುದ್ಧ ಕ್ರಯಕ್ಕೆ ಖರೀದಿಸಿದ್ದೆ. ಈ ಸಂಬಂಧ ಎಲ್ಲಾ ದಾಖಲಾತಿಗಳು ನನ್ನ ಹೆಸರಿನಲ್ಲೇ ಇವೆ. ಈ ಪ್ರದೇಶ 1986-87ರಲ್ಲಿ ವಸತಿ ಉದ್ದೇಶಕ್ಕಾಗಿ ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಭೂ ಪರಿವರ್ತನೆಯಾಗಿದೆ. ರಾಘವೇಂದ್ರ ಅಕ್ರಮ ಪ್ರವೇಶ ಮಾಡಿದಾಗ ನಾನು ತಕರಾರು ಮಾಡಿದ್ದೆ. ಆಗ ರಾಘವೇಂದ್ರ ಅಧಿಕಾರದ ದರ್ಪದಿಂದ ಅಸಭ್ಯವಾಗಿ ಮಾತನಾಡಿದ್ದರು. ನಂತರದಲ್ಲಿಯೂ ಸಹ ಹಲವಾರು ಬಾರಿ ಖುದ್ದಾಗಿ ರಾಘವೇಂದ್ರರವರನ್ನು ಭೇಟಿ ಮಾಡಿದಾಗಲೂ ಅವರು ಸ್ಪಂದಿಸಲಿಲ್ಲ ಎಂದು ಮಲ್ಲಿಕಾರ್ಜುನಪ್ಪ ತಮ್ಮ ನೋವು ತೋಡಿಕೊಂಡರು.
ರಾಘವೇಂದ್ರ ಅವರು ನನ್ನ ಜಮೀನನ್ನು ಅಕ್ರಮವಾಗಿ ಕಬಳಿಸಲು ಪ್ರಯತ್ನಿಸುತ್ತಿರುವ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದೇನೆ. ಆದರೆ ಈ ಅರ್ಜಿಗೆ ಪ್ರಾಧಿಕಾರದಿಂದ ಮಾನ್ಯತೆ ಸಿಗಲಿಲ್ಲ. ಹಾಗಾಗಿ ನಾನು ಮಾಧ್ಯಮದ ಎದುರು ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications