ಡಿ. 8-9ರಂದು 3ನೇ ಆವೃತ್ತಿಯ ಬೆಂಗಳೂರು ನ್ಯಾನೊ

ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಜೆಎನ್ಸಿಎಎಸ್ಆರ್ನ (ಜವಾಹರಲಾಲ್ ನೆಹರು ಮುಂದುವರಿದ ವೈಜ್ಞಾನಿಕ ಸಂಶೋಧನಾ ಕೇಂದ್ರ) ಗೌರವಾಧ್ಯಕ್ಷ ಮತ್ತು ಕರ್ನಾಟಕ ಸರ್ಕಾರದ ವಿಷನ್ ಗ್ರೂಪ್ನ ಅಧ್ಯಕ್ಷ ಹಾಗೂ ನ್ಯಾನೋ ತಂತ್ರಜ್ಞಾನ ಪ್ರಮುಖ ಮಾರ್ಗದರ್ಶಕ ಪ್ರೊ. ಸಿ.ಎನ್.ಆರ್. ರಾವ್ ಅವರ ನೇತೃತ್ವದಲ್ಲಿ ಈ ಸಮ್ಮೇಳನ ನಡೆಯುತ್ತಿದೆ.
2007ರಿಂದ ಆಯೋಜಿಸಿಕೊಂಡು ಬರಲಾಗುತ್ತಿರುವ ಈ ನ್ಯಾನೋ ಮೇಳವು ದೇಶ ವಿದೇಶದಲ್ಲಿ ಹೆಸರು ಗಳಿಸಿದೆ. ಸಮಾಜಕ್ಕೆ ಮತ್ತು ಜನಸಾಮಾನ್ಯರಿಗೆ ನೆರವಾಗುವ ನ್ಯಾನೋ ತಂತ್ರಜ್ಞಾನದ ಅಭಿವೃದ್ಧಿಗೆ ಈ ಮೇಳವು ಒತ್ತಾಸರೆಯಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ನ್ಯಾನೊ 2010ರ ಮೇಳಕ್ಕಾಗಿ ಜರ್ಮನಿ, ಯುಎಸ್ಎ, ಯುಕೆ, ಜಪಾನ್, ಸಿಂಗಪುರ, ಸ್ವಿಟ್ಜರ್ಲ್ಯಾಂಡ್, ಪೋಲಾಂಡ್ ಸೇರಿದಂತೆ 12ಕ್ಕೂ ಹೆಚ್ಚು ರಾಷ್ಟ್ರಗಳು ಭಾಗವಹಿಸುತ್ತಿವೆ. ಜರ್ಮನಿ ಮೇಳದ ಪಾಲುದಾರ ರಾಷ್ಟ್ರವಾಗಿದೆ. ಜೊತೆಗೆ, ರಿಲಯನ್ಸ್ ಇಂಡಸ್ಟ್ರೀಸ್, ಇಂಡಿಯನ್ ಆಯಿಲ್ ಕಾರ್ಪೋರೇಷನ್, ಲ್ಯಾಬ್ ಇಂಡಿಯಾ, ನ್ಯಾನೊ ಪ್ರೊಫೆಸರ್, ಕೆಐಟಿವಿಇಎನ್ ಮತ್ತು ಅಡ್ವಾನ್ಸ್ ಟೆಕ್ಸ್ ಸಂಸ್ಥೆಗಳು ಪ್ರಯೋಜಕತ್ವ ವಹಿಸಿಕೊಂಡಿವೆ. 12 ರಾಷ್ಟ್ರಗಳ 200ಕ್ಕೂ ಹೆಚ್ಚು ಸಂಸ್ಥೆಗಳು/ ಕಂಪನಿಗಳು ಭಾಗವಹಿಸುತ್ತಿವೆ. 30ಕ್ಕೂ ಹೆಚ್ಚು ಪ್ರದರ್ಶಕರು ಮತ್ತು 400ಕ್ಕೂ ಹೆಚ್ಚು ನಿಯೋಗಗಳು ಮೇಳಕ್ಕೆ ಭೇಟಿ ನೀಡಲಿವೆ.
ಹೂಡಿಕೆ ಮತ್ತು ಉದ್ಯೋಗಾವಕಾಶ : ನ್ಯಾನೋ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅದರಲ್ಲೂ ಇಂಧನ ಮತ್ತು ಪರಿಸರ, ನ್ಯಾನೋ ಮೆಡಿಸಿನ್, ನ್ಯಾನೋ ಎಲೆಕ್ಟ್ರಾನಿಕ್ಸ್ ಮತ್ತು ನ್ಯಾನೋ ಮೆಟಿರಿಯಲ್ಸ್ಗಳಲ್ಲಿನ ಹೊಸ ಆವಿಷ್ಕಾರ ಮತ್ತು ವಿನೂತನ ಸಂಶೋಧನಾ ಯೋಜನೆಗಳನ್ನು ಸಾಕಾರಗೊಳಿಸಿಕೊಳ್ಳಲು ಬಯಸುವವರು ಮತ್ತು ಹೂಡಿಕೆದಾರರು ಹಾಗೂ ವೃತ್ತಿಪರ ಕೈಗಾರಿಕೋದ್ಯಮಿಗಳ ನಡುವೆ ಸಹಕಾರ ಬೆಸೆಯುವ ಒಂದು ವೇದಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸಿಗುವ ಉದ್ಯೋಗಾವಕಾಶ ಮತ್ತು ವಹಿವಾಟಿನ ಸಾಧ್ಯತೆಗೆ ಬಗ್ಗೆ ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದಿರುವ 45ಕ್ಕೂ ಹೆಚ್ಚು ಮಂದಿ ಪರಿಣಿತರು ಮಾತನಾಡಲಿದ್ದಾರೆ.
ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟು ಕೊಂಡು ಅವರಲ್ಲಿ ನ್ಯಾನೊ ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸಲು ನ್ಯಾನೊ ಫಾರ್ ದಿ ಯಂಗ್ (ಯುವಜನತೆಗಾಗಿ ನ್ಯಾನೊ) ಮತ್ತು ಸ್ಫೂರ್ತಿದಾಯಕ ಉಪನ್ಯಾಸ ಕಾರ್ಯಕ್ರಮಗಳನ್ನು ವಿಶೇಷವಾಗಿ ಆಯೋಜಿಸಲಾಗಿದೆ. ಯುವಜನತೆಗಾಗಿ ನ್ಯಾನೊ ಎಂಬ ವಿಷಯದ ಬಗ್ಗೆ ಪ್ರೊ. ಸಿ.ಎನ್.ಆರ್. ರಾವ್ ಅವರು ಉಪನ್ಯಾಸ ನೀಡಲಿದ್ದಾರೆ. ಉಪನ್ಯಾಸ ಕಾರ್ಯಕ್ರಮವನ್ನು ಜೆಎನ್ ಟಾಟಾ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. 750ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಪದವೀದರರು ಮತ್ತು ಸ್ನಾತಕೋತ್ತರ ಪದವೀದರರು ಇದರಲ್ಲಿ ಭಾಗವಹಿಸಲಿದ್ದಾರೆ.
ಪ್ರಶಸ್ತಿ : ನ್ಯಾನೊ ವಲಯದಲ್ಲಿನ ಸಾಧನೆಯನ್ನು ಗೌರವಿಸುವ ಸಲುವಾಗಿ ಬೆಂಗಳೂರು ನ್ಯಾನೊ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರೊ. ಸಿ.ಎನ್.ಆರ್. ರಾವ್ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಆಯ್ಕೆ ಮಂಡಳಿಯನ್ನು ರಚಿಸಲಾಗಿದೆ. ಪ್ರಶಸ್ತಿಗಾಗಿ ಅರ್ಹರನ್ನು ಈ ತಂಡವು ಆಯ್ಕೆ ಮಾಡುತ್ತದೆ. 2007ರ ಸಾಲಿನ ಪ್ರಶಸ್ತಿಯನ್ನು ಪ್ರೊ. ಸಿ.ಎನ್.ಆರ್. ರಾವ್ ಹಾಗೂ 2008ರಲ್ಲಿ ಪ್ರೊ. ದೀಪಾಂಕರ್ ಚರ್ಕವರ್ತಿ ಅವರು ಪಡೆದುಕೊಂಡಿದ್ದರು. ಈ ಸಾಲಿನಲ್ಲಿ ಈ ಪ್ರಶಸ್ತಿಯ ಜೊತೆಗೆ ಉತ್ಸಾಹಿ ಉದ್ಯಮಿ ಪ್ರಶಸ್ತಿಯನ್ನು ಸಹ ನೀಡಲಾಗುತ್ತಿದೆ.
ಬೆಂಗಳೂರು ನ್ಯಾನೋ 2010ಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ : www.bangalorenano.in
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications