ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷ ಸರ್ಕೋಜಿ ಬೆಂಬಲ

ಬೆಂಗಳೂರಿನ ಇಸ್ರೋದಲ್ಲಿ ವಿಜ್ಞಾನಿಗಳು, ಉದ್ಯಮದ ಮುಖಂಡರು ಮತ್ತು ವಿದ್ಯಾರ್ಥಿಗಳಿದ್ದ 500 ಜನರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವಸಂಸ್ಥೆಯಲ್ಲಿ ಕಾಯಂ ಸ್ಥಾನ ಪಡೆಯಲು ಭಾರತ ಅರ್ಹವಾಗಿದೆ. ಭಾರತ ಸೇರಿದಂತೆ ಬ್ರಜಿಲ್, ಜರ್ಮನಿ, ಜಪಾನ್, ಆಫ್ರಿಕಾ ಮತ್ತು ಅರಬ್ ರಾಷ್ಟ್ರಗಳಿಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗಬೇಕು ಎಂದು ಆಶಿಸಿಸಿದರು.
ನೂರು ಕೋಟಿ ಜನಸಂಖ್ಯೆಯನ್ನು ಪ್ರತಿನಿಧಿಸುವ ಭಾರತದಂಥ ರಾಷ್ಟ್ರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇರದಿರುವುದು ಊಹಿಸಲಸಾಧ್ಯವಾದ ಸಂಗತಿ ಎಂದು ಅವರು ಅಭಿಪ್ರಾಯಪಟ್ಟರು. ಭಾರತದಲ್ಲಿ ಅಣು ಕಾರ್ಯಕ್ರಮದ ಅಭಿವೃದ್ಧಿಗೆ ಫ್ರಾನ್ಸ್ ಎಲ್ಲ ಸಹಕಾರವನ್ನು ನೀಡಲಿದೆ ಎಂದು ಅವರು ನುಡಿದರು.
ನಾಲ್ಕು ದಿನಗಳ ಭಾರತ ಪ್ರವಾಸದ ಮೊದಲ ಭಾಗವಾಗಿ ಬೆಂಗಳೂರಿಗೆ ಬಂದಿರುವ ಸರ್ಕೋಜಿ ಅವರು, ನಾಗರಿಕ ಅಣು ಸಹಕಾರ ಮತ್ತು ಖಗೋಳ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭಾರತದ ಜೊತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಮಾಲಿನ್ಯರಹಿತ ಇಂಧನ ಉತ್ಪಾದಿಸುವ ಭಾರತದ ಉದ್ದೇಶಕ್ಕೆ ಭಾರತದೊಂದಿಗೆ ಸ್ನೇಹದಿಂದಿರುವ ಫ್ರಾನ್ಸ್ ಸಂಪೂರ್ಣ ಸಹಕಾರ ನೀಡಲಿದೆ. ಅಣು ಶಕ್ತಿ ಉತ್ಪಾದಿಸುವ ಭಾರತದ ಹಕ್ಕಿಗೆ ಕೂಡ ಧಕ್ಕೆ ಉಂಟಾಗಿದೆ. ಇದಕ್ಕೆ ಕೊನೆ ಹಾಡಬೇಕು ಎಂದು ಅವರು ನುಡಿದರು.
ಮಹಾರಾಷ್ಟ್ರದ ಜೈತಪುರದಲ್ಲಿ ಫ್ರಾನ್ಸ್ ನ ಕಂಪನಿ ಅರೇವಾ 10 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಅಣು ಸ್ಥಾವರವನ್ನು ಸ್ಥಾಪಿಸುತ್ತಿರುವುದು ಸಂತಸದ ಸಂಗತಿ ಎಂದು ಸರ್ಕೋಜಿ ಹೇಳಿದರು. ಮಾಡೆಲ್ ಮತ್ತು ಸಂಗೀತಗಾರ್ತಿ ಆಗಿರುವ ಪತ್ನಿ ಕಾರ್ಲಾ ಬ್ರುನಿ ಮತ್ತು ಉನ್ನತ ಮಟ್ಟದ ನಿಯೋಗದೊಂದಿಗೆ ಅವರು ಭಾರತ ಪ್ರವಾಸ ಕೈಗೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications