ಶಿವಮೊಗ್ಗ ಡಿವಿಎಸ್ ಕಾಲೇಜಿನಲ್ಲಿ ಎಲ್ಲವೂ ಸರಿಯಿಲ್ಲ

ಡಿವಿಎಸ್ ಸ್ವತಂತ್ರ ಕಾಲೇಜಿನ ಗಣಿತ ಉಪನ್ಯಾಸಕ ರಾಜಶೇಖರ್ ಇತ್ತೀಚೆಗೆ ನಡೆದ ಕೌನ್ಸಿಲ್ ಸಭೆಗೆ ಹಾಜರಾಗಿರಲಿಲ್ಲ. ಅಂತೆಯೇ, ಪ್ರೌಢಶಾಲೆಯ ಶಿಕ್ಷಕ ಲಕ್ಷ್ಮಣ್ರವರು ಮುದ್ರಣ ವಿಭಾಗದಲ್ಲಿ ನಷ್ಟ ಉಂಟುಮಾಡಿದ್ದರು ಎಂಬ ಕಾರಣಗಳನ್ನಿಟ್ಟುಕೊಂಡು ಈ ಇಬ್ಬರನ್ನು ಕಾಲೇಜಿನ ಆಡಳಿತಾಧಿಕಾರಿಯೂ ಆಗಿರುವ ಉಪವಿಭಾಗಾಧಿಕಾರಿ ಎಂ.ಎಲ್. ವೈಶಾಲಿರವರು ಅಮಾನತು ಮಾಡಿದ್ದರು.
ಅಮಾನತು ಆದೇಶದಿಂದ ರೊಚ್ಚಿಗೆದ್ದ ಕಾಲೇಜಿನ ವಿದ್ಯಾರ್ಥಿಗಳು ಕೂಡಲೇ ಅಮಾನತು ಆದೇಶವನ್ನು ಹಿಂಪಡೆದು, ಶಿಕ್ಷಕರುಗಳು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಬೇಕು. ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯುಂಟಾಗುತ್ತದೆ. ಪಾಠ-ಪ್ರವಚನಗಳು ಸರಾಗವಾಗಿ ನಡೆಯಲು ಅಡ್ಡಿಯುಂಟಾಗುತ್ತದೆ. ಅಲ್ಲದೇ, ಉತ್ತಮ ಶಿಕ್ಷಕರಾಗಿರುವ ಇವರನ್ನು ಅಮಾನತು ಮಾಡಿರುವ ಕ್ರಮ ಸರಿಯಲ್ಲವೆಂದು ಆರೋಪಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಿನ್ಸಿಪಾಲರು ಕಾಲೇಜಿಗೆ ರಜೆ ಘೋಷಿಸಿದರು. ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಶುಕ್ರವಾರದಂದು ನಡೆಸಲಾಗುವುದೆಂದು ತಿಳಿಸಿದರು. ಕಾರ್ಯನಿಮಿತ್ತ ಬೇರೆಡೆಗೆ ತೆರಳಿದ್ದ ಆಡಳಿತಾಧಿಕಾರಿ ವೈಶಾಲಿರವರು ಪ್ರತಿಭಟನಾ ಸ್ಥಳಕ್ಕೆ ಬಂದಿರಲಿಲ್ಲ. ಸ್ಥಳಕ್ಕೆ ಆಗಮಿಸಿ ಅಮಾನತು ಆದೇಶವನ್ನು ಹಿಂಪಡೆದಿರುವುದನ್ನು ಆಡಳಿತಾಧಿಕಾರಿಗಳು ತಿಳಿಸಬೇಕೆಂದು ಒತ್ತಾಯಿಸಿದ ವಿದ್ಯಾರ್ಥಿಗಳು ನಾಳೆ ಕೂಡ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಎಚ್ಚರಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications