ಶಿವಮೊಗ್ಗ ಡಿವಿಎಸ್ ಕಾಲೇಜಿನಲ್ಲಿ ಎಲ್ಲವೂ ಸರಿಯಿಲ್ಲ

ಡಿವಿಎಸ್ ಸ್ವತಂತ್ರ ಕಾಲೇಜಿನ ಗಣಿತ ಉಪನ್ಯಾಸಕ ರಾಜಶೇಖರ್ ಇತ್ತೀಚೆಗೆ ನಡೆದ ಕೌನ್ಸಿಲ್ ಸಭೆಗೆ ಹಾಜರಾಗಿರಲಿಲ್ಲ. ಅಂತೆಯೇ, ಪ್ರೌಢಶಾಲೆಯ ಶಿಕ್ಷಕ ಲಕ್ಷ್ಮಣ್ರವರು ಮುದ್ರಣ ವಿಭಾಗದಲ್ಲಿ ನಷ್ಟ ಉಂಟುಮಾಡಿದ್ದರು ಎಂಬ ಕಾರಣಗಳನ್ನಿಟ್ಟುಕೊಂಡು ಈ ಇಬ್ಬರನ್ನು ಕಾಲೇಜಿನ ಆಡಳಿತಾಧಿಕಾರಿಯೂ ಆಗಿರುವ ಉಪವಿಭಾಗಾಧಿಕಾರಿ ಎಂ.ಎಲ್. ವೈಶಾಲಿರವರು ಅಮಾನತು ಮಾಡಿದ್ದರು.
ಅಮಾನತು ಆದೇಶದಿಂದ ರೊಚ್ಚಿಗೆದ್ದ ಕಾಲೇಜಿನ ವಿದ್ಯಾರ್ಥಿಗಳು ಕೂಡಲೇ ಅಮಾನತು ಆದೇಶವನ್ನು ಹಿಂಪಡೆದು, ಶಿಕ್ಷಕರುಗಳು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಬೇಕು. ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯುಂಟಾಗುತ್ತದೆ. ಪಾಠ-ಪ್ರವಚನಗಳು ಸರಾಗವಾಗಿ ನಡೆಯಲು ಅಡ್ಡಿಯುಂಟಾಗುತ್ತದೆ. ಅಲ್ಲದೇ, ಉತ್ತಮ ಶಿಕ್ಷಕರಾಗಿರುವ ಇವರನ್ನು ಅಮಾನತು ಮಾಡಿರುವ ಕ್ರಮ ಸರಿಯಲ್ಲವೆಂದು ಆರೋಪಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಿನ್ಸಿಪಾಲರು ಕಾಲೇಜಿಗೆ ರಜೆ ಘೋಷಿಸಿದರು. ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಶುಕ್ರವಾರದಂದು ನಡೆಸಲಾಗುವುದೆಂದು ತಿಳಿಸಿದರು. ಕಾರ್ಯನಿಮಿತ್ತ ಬೇರೆಡೆಗೆ ತೆರಳಿದ್ದ ಆಡಳಿತಾಧಿಕಾರಿ ವೈಶಾಲಿರವರು ಪ್ರತಿಭಟನಾ ಸ್ಥಳಕ್ಕೆ ಬಂದಿರಲಿಲ್ಲ. ಸ್ಥಳಕ್ಕೆ ಆಗಮಿಸಿ ಅಮಾನತು ಆದೇಶವನ್ನು ಹಿಂಪಡೆದಿರುವುದನ್ನು ಆಡಳಿತಾಧಿಕಾರಿಗಳು ತಿಳಿಸಬೇಕೆಂದು ಒತ್ತಾಯಿಸಿದ ವಿದ್ಯಾರ್ಥಿಗಳು ನಾಳೆ ಕೂಡ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಎಚ್ಚರಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications