ವೆಬ್ ಸೈಟಿನಲ್ಲಿ ವೇದಾಂತ ಪಾಠ ಬೇಕೇನು

ವಿದ್ಯೆಯನ್ನು, ಜ್ಞಾನವನ್ನು, ಶಾಂತಿ ಸಮಾಧಾನಗಳನ್ನು ಗುರುಕುಲ ಕ್ರಮದಿಂದ ಅಧ್ಯಯನ ಮಾಡುವುದಕ್ಕೆ ಇವತ್ತು ಯಾರಿಗೂ ಪುರುಸೊತ್ತಿಲ್ಲ. ಅಂಥ ವಾತಾವರಣವೂ ಇಲ್ಲ. ಇಂದಿನ ಯುಗ ಕಂಪ್ಯೂಟರ್ ಯುಗ. ಕಳ್ಳಕಾಕರ ಯುಗ. ದೊರೆಯೇ ಧೂರ್ತನಾಗುವ ಯುಗ. ವೈಜ್ಞಾನಿಕ ಯುಗ. ವೇಗದ ಯುಗ. ಆವೇಗದ ಯುಗ. ಉದ್ವೇಗದ ಯುಗ. ಪ್ರಮುಖವಾಗಿ ಈಗಿನ ಯುವಕ ಯುವತಿಯರು, ಮಧ್ಯವಯಸ್ಕರು ಮತ್ತು ಹಿರಿಯ ನಾಗರಿಕರು ಐಹಿಕ ಸುಖಕ್ಕೆ ಮತ್ತು ವಸ್ತು ಭೋಗಕ್ಕೆ ತುತ್ತಾಗಿ ಬಳಲಿದ್ದಾರೆ. ತಮ್ಮನ್ನು ಕಾಡುತ್ತಿರುವ ಕಾಯಿಲೆ ಯಾವುದು ಎನ್ನುವುದು ನರಳುತ್ತಿರುವ ವ್ಯಕ್ತಿಗೇ ತಿಳಿಯದಾಗಿದೆ.
ಇದನ್ನು ಗಮನದಲ್ಲಿ ಇಟ್ಟುಕೊಂಡು "ವೇದಾಂತ ಸತ್ಸಂಗ ಕೇಂದ್ರ"ದ ವತಿಯಿಂದ "ಶಂಕರಹೃದಯಂ" ಎಂಬ ಅಂತರ್ಜಾಲ ತಾಣವನ್ನು ತೆರೆಯಲಾಗುತ್ತಿದೆ. ವೇದಾಂತ ಪಾಠಗಳನ್ನು ಪ್ರಚುರ ಪಡಿಸುವುದು ಈ ವೆಬ್ ಸೈಟಿನ ಉದ್ದೇಶವಾಗಿರುತ್ತದೆ. ಬರುವ ಭಾನುವಾರ 12 ಡಿಸೆಂಬರ್ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಶಂಕರಪುರದ ಶೃಂಗೇರಿ ಶಂಕರಮಠದಲ್ಲಿ ಡಾ. ಎಸ್. ರಂಗನಾಥ್ ಅವರು ಈ ತಾಣಕ್ಕೆ ಚಾಲನೆ ನೀಡಲಿದ್ದಾರೆ. ಅಂತರ್ಜಾಲಕ್ಕೆ ಮಹಾಮಹೋಪಾಧ್ಯಾಯ ವಿದ್ವಾನ್ ಕೆ.ಜಿ.ಸುಬ್ರಾಯ ಶರ್ಮರು ಪ್ರಧಾನ ಆಚಾರ್ಯರಾಗಿರುತ್ತಾರೆ.
ಶೃಂಗೇರಿ ಮಹಾಸಂಸ್ಥಾನದ ಗೌರವ ಆಡಳಿತಾಧಿಕಾರಿ ವಿ.ಆರ್. ಗೌರೀಶಂಕರ್ ರವರು ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಸಿ.ಏ.ಸಂಜೀವ ಮೂರ್ತಿಗಳು ಹಾಡಿರುವ, ಹೊಳೆನರಸೀಪುರದ ಶ್ರೀ ಸಚ್ಚಿದಾನಂದೇಂದ್ರ ಸರಸ್ವತೀ ಸ್ವಾಮಿಗಳು ಕನ್ನಡದಲ್ಲಿ ರಚಿಸಿರುವ ಹಾಡುಗಳ "ಶ್ರೀ ಶಂಕರವಚನ ಗಾನ ರಸಾಯನ " ಎಂಬ ಸಿ.ಡಿ ಯನ್ನೂ ಲೋಕಾರ್ಪಣೆ ಮಾಡುವವರಿದ್ದಾರೆ.( ಸಿ.ಡಿ.ಬೆಲೆ ರೂ.80 ).
ವೆಬ್ ಸೈಟ್ ವಿಳಾಸ : http://www.satchidanandendra.org
ಶಂಕರ ಭಗವತ್ಪಾದರು ತೋರಿದ ಆದರ್ಶಗಳನ್ನು ಮನಸಾ ಮೆಚ್ಚುವವರು ಮತ್ತು ನೆಮ್ಮದಿ ಅರಸುತ್ತಿರುವವರು ಈ ತಾಣದ ಪ್ರಯೋಜನ ಪಡೆಯಬಹುದೆಂದು ವೇದಾಂತ ಸತ್ಸಂಗ ಕೇಂದ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ವಿವರಗಳಿಗೆ : 98860 51222 ದೂರವಾಣಿ ಸಂಖ್ಯೆಯನ್ನು ತಲುಪಿರಿ. ಇಮೇಲ್ : [email protected]
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ












Click it and Unblock the Notifications