ವೆಬ್ ಸೈಟಿನಲ್ಲಿ ವೇದಾಂತ ಪಾಠ ಬೇಕೇನು

ವಿದ್ಯೆಯನ್ನು, ಜ್ಞಾನವನ್ನು, ಶಾಂತಿ ಸಮಾಧಾನಗಳನ್ನು ಗುರುಕುಲ ಕ್ರಮದಿಂದ ಅಧ್ಯಯನ ಮಾಡುವುದಕ್ಕೆ ಇವತ್ತು ಯಾರಿಗೂ ಪುರುಸೊತ್ತಿಲ್ಲ. ಅಂಥ ವಾತಾವರಣವೂ ಇಲ್ಲ. ಇಂದಿನ ಯುಗ ಕಂಪ್ಯೂಟರ್ ಯುಗ. ಕಳ್ಳಕಾಕರ ಯುಗ. ದೊರೆಯೇ ಧೂರ್ತನಾಗುವ ಯುಗ. ವೈಜ್ಞಾನಿಕ ಯುಗ. ವೇಗದ ಯುಗ. ಆವೇಗದ ಯುಗ. ಉದ್ವೇಗದ ಯುಗ. ಪ್ರಮುಖವಾಗಿ ಈಗಿನ ಯುವಕ ಯುವತಿಯರು, ಮಧ್ಯವಯಸ್ಕರು ಮತ್ತು ಹಿರಿಯ ನಾಗರಿಕರು ಐಹಿಕ ಸುಖಕ್ಕೆ ಮತ್ತು ವಸ್ತು ಭೋಗಕ್ಕೆ ತುತ್ತಾಗಿ ಬಳಲಿದ್ದಾರೆ. ತಮ್ಮನ್ನು ಕಾಡುತ್ತಿರುವ ಕಾಯಿಲೆ ಯಾವುದು ಎನ್ನುವುದು ನರಳುತ್ತಿರುವ ವ್ಯಕ್ತಿಗೇ ತಿಳಿಯದಾಗಿದೆ.
ಇದನ್ನು ಗಮನದಲ್ಲಿ ಇಟ್ಟುಕೊಂಡು "ವೇದಾಂತ ಸತ್ಸಂಗ ಕೇಂದ್ರ"ದ ವತಿಯಿಂದ "ಶಂಕರಹೃದಯಂ" ಎಂಬ ಅಂತರ್ಜಾಲ ತಾಣವನ್ನು ತೆರೆಯಲಾಗುತ್ತಿದೆ. ವೇದಾಂತ ಪಾಠಗಳನ್ನು ಪ್ರಚುರ ಪಡಿಸುವುದು ಈ ವೆಬ್ ಸೈಟಿನ ಉದ್ದೇಶವಾಗಿರುತ್ತದೆ. ಬರುವ ಭಾನುವಾರ 12 ಡಿಸೆಂಬರ್ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಶಂಕರಪುರದ ಶೃಂಗೇರಿ ಶಂಕರಮಠದಲ್ಲಿ ಡಾ. ಎಸ್. ರಂಗನಾಥ್ ಅವರು ಈ ತಾಣಕ್ಕೆ ಚಾಲನೆ ನೀಡಲಿದ್ದಾರೆ. ಅಂತರ್ಜಾಲಕ್ಕೆ ಮಹಾಮಹೋಪಾಧ್ಯಾಯ ವಿದ್ವಾನ್ ಕೆ.ಜಿ.ಸುಬ್ರಾಯ ಶರ್ಮರು ಪ್ರಧಾನ ಆಚಾರ್ಯರಾಗಿರುತ್ತಾರೆ.
ಶೃಂಗೇರಿ ಮಹಾಸಂಸ್ಥಾನದ ಗೌರವ ಆಡಳಿತಾಧಿಕಾರಿ ವಿ.ಆರ್. ಗೌರೀಶಂಕರ್ ರವರು ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಸಿ.ಏ.ಸಂಜೀವ ಮೂರ್ತಿಗಳು ಹಾಡಿರುವ, ಹೊಳೆನರಸೀಪುರದ ಶ್ರೀ ಸಚ್ಚಿದಾನಂದೇಂದ್ರ ಸರಸ್ವತೀ ಸ್ವಾಮಿಗಳು ಕನ್ನಡದಲ್ಲಿ ರಚಿಸಿರುವ ಹಾಡುಗಳ "ಶ್ರೀ ಶಂಕರವಚನ ಗಾನ ರಸಾಯನ " ಎಂಬ ಸಿ.ಡಿ ಯನ್ನೂ ಲೋಕಾರ್ಪಣೆ ಮಾಡುವವರಿದ್ದಾರೆ.( ಸಿ.ಡಿ.ಬೆಲೆ ರೂ.80 ).
ವೆಬ್ ಸೈಟ್ ವಿಳಾಸ : http://www.satchidanandendra.org
ಶಂಕರ ಭಗವತ್ಪಾದರು ತೋರಿದ ಆದರ್ಶಗಳನ್ನು ಮನಸಾ ಮೆಚ್ಚುವವರು ಮತ್ತು ನೆಮ್ಮದಿ ಅರಸುತ್ತಿರುವವರು ಈ ತಾಣದ ಪ್ರಯೋಜನ ಪಡೆಯಬಹುದೆಂದು ವೇದಾಂತ ಸತ್ಸಂಗ ಕೇಂದ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ವಿವರಗಳಿಗೆ : 98860 51222 ದೂರವಾಣಿ ಸಂಖ್ಯೆಯನ್ನು ತಲುಪಿರಿ. ಇಮೇಲ್ : [email protected]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications