ವಿದ್ಯುತ್ ದರ ಏರಿಸಿದ ರಾಜ್ಯ ಸರಕಾರ

ವಿದ್ಯುತ್ ಉತ್ಪಾದನೆ ಹಾಗೂ ವಿತರಣಾ ವೆಚ್ಚವನ್ನು ಸರಿದೂಗಿಸಿ ಕಂಪನಿಗಳ ನಷ್ಟವನ್ನು ಕಡಿಮೆ ಮಾಡಲು ಸರಾಸರಿ 75 ಪೈಸೆ ಯೂನಿಟ್ ಗೆ ದರವನ್ನು ಏಕರೂಪ ರೀತಿಯಲ್ಲಿ ಹೆಚ್ಚಳ ಮಾಡಬೇಕೆಂದು ಎಲ್ಲ ಕಂಪನಿಗಳ ಕೆಇಆರ್ ಸಿಗೆ ದುಂಬಾಲು ಬಿದ್ದಿದ್ದವು. ಈ ಸಂಬಂಧ ಸಾರ್ವಜನಿಕರ ಅಹವಾಲು ಪರಿಶೀಲಿಸಿದ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ.
ಆದರೆ, ಏಕರೂಪ ದರ ಹೆಚ್ಚಳವನ್ನು ತಿರಸ್ಕರಿಸಿ ಬೇರೆ ಬೇರೆ ಗ್ರಾಹಕರಿಗೆ ಬೇರೆ ಬೇರೆ ರೀತಿಯ ದರಗಳನ್ನು ನಿಗದಿ ಮಾಡಿದೆ ಎಂದು ಮಂಡಳಿಯ ಅಧ್ಯಕ್ಷ ಎಂ ಆರ್ ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ಹೆಸ್ಕಾಂ-28.64 ಪೈಸೆ, ಮೆಸ್ಕಾಂ-26.63 ಪೈಸೆ, ಚೆಸ್ಕಾಂ-30.75 ಪೈಸೆ ದರವನ್ನು ನಿಗದಿ ಮಾಡಲಾಗಿದೆ ಮತ್ತು ಕಾರ್ಪೋರೇಟ್ ವ್ಯಾಪ್ತಿಯ ಪ್ರದೇಶಗಳಲ್ಲಿ 5 ಪೈಸೆಯಿಂದ 60 ಪೈಸೆವರೆಗೆ ಯೂನಿಟ್ ದರ ಹೆಚ್ಚಳ ಮಾಡಲಾಗಿದೆ. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ 1 ರಿಂದ 10 ಪೈಸೆ ಏರಿಕೆ, ಜೊತೆಗೆ ಗೃಹ ಬಳಕೆ ವಿದ್ಯುತ್ ಗೆ 10 ರಿಂದ 15 ಪೈಸೆ ಏರಿಕೆ ಮಾಡಲಾಗಿದೆ.
ನಗರ ಪ್ರದೇಶದ ವಾಣಿಜ್ಯ ಬಳಕೆಗೆ 30 ರಿಂದ 45 ಪೈಸೆ, ಪಟ್ಟಣ ಪ್ರದೇಶದಲ್ಲಿ 25 ರಿಂದ 40 ಹಾಗೂ ಗ್ರಾಮೀಣ ಪ್ರದೇಶದಲ್ಲಿ 30 ರಿಂದ 35 ಪೈಸೆ ಏರಿಕೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸಂಜೆ 6 ರಿಂದ ಬೆಳಗಿನ 6 ಗಂಟೆ ವರೆಗೆ ಸಿಂಗಲ್ ಫೇಸ್ ವಿದ್ಯುತ್ ನೀಡಲಾಗುವುದು ಎಂದು ಶ್ರೀನಿವಾಸಮೂರ್ತಿ ವಿವರಿಸಿದರು.
ಸೌರಶಕ್ತಿಯನ್ನು ಪ್ರೋತ್ಸಾಹಿಸಲು ಜನಸಾಮಾನ್ಯರು ಬಳಕೆ ಮಾಡುವ ವಿದ್ಯುತ್ ಬಿಲ್ ನಲ್ಲಿ 50 ರುಪಾಯಿ ವಿನಾಯಿತಿ ನೀಡುವುದನ್ನು ಮುಂದುವರೆಸಲಾಗಿದೆ. ಆದರೆ, ದರ ಏರಿಕೆಯಿಂದ ಭಾಗ್ಯಜ್ಯೋತಿ, ಕುಟೀರಜ್ಯೋತಿ ಹಾಗೂ 10 ಎಚ್ ಪಿ ಪಂಪ್ ಸೆಟ್ ಗಳನ್ನು ಹೊರಗಿಡಲಾಗಿದೆ. ದರ ಏರಿಕೆ ಇವುಗಳಿಗೆ ಅನ್ವಯವಾಗುವುದಿಲ್ಲ. ಲೋಡ್ ಶೆಡ್ಡಿಂಗ್ ಮಾಡುವಾಗ ಸಾರ್ವಜನಿಕ ಪ್ರಕಟಣೆ ನೀಡಬೇಕು ಹಾಗೂ ಹೆಚ್ಚುವರಿ ವಿದ್ಯುತ್ ಬಿಲ್ ಖರೀದಿ ಮಾಡುವ ಸಂದರ್ಭದಲ್ಲಿ ಮಂಡಳಿ ಗಮನಕ್ಕೆ ತರಲಾಗುವುದು ಎಂದು ಮೂರ್ತಿ ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications