ಜಿಪಂ ಚುನಾವಣೆ : ಪದಾಧಿಕಾರಿಗಳೊಂದಿಗೆ ಗಡ್ಕರಿ ಚರ್ಚೆ

ಡಿಸೆಂಬರ್ 26 ರಿಂದ ಆರಂಭವಾಗುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ರಣತಂತ್ರ ಹೆಣೆಯಲು ಗಡ್ಕರಿ ಮತ್ತು ಜೈಟ್ಲಿ ಆಗಮಿಸಿದ್ದಾರೆ ಎಂದು ಮೇಲ್ನೋಟಕ್ಕೆ ಹೇಳಲಾಗಿದೆಯಾದರೂ, ಒಳಮರ್ಮ ಮಾತ್ರ ಬೇರೆಯಾಗಿದೆ ಎಂದು ಪಕ್ಷದ ಇನ್ನೊಂದು ವರ್ಗ ಹೇಳುತ್ತಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸೇರಿದಂತೆ ಸಂಪುಟ ಅನೇಕ ಸಚಿವರ ಮೇಲೆ ಭೂಹಗರಣದ ರಾಡಿ ಮೆತ್ತಿಕೊಂಡಿದ್ದು, ಇದರಿಂದ ಪಕ್ಷಕ್ಕೆ ಹಾನಿಯುಂಟಾಗಿದೆ ಎಂಬುದು ವರಿಷ್ಠರ ಅಸಮಾಧಾನ. ಹೀಗಾಗಿ ಪಕ್ಷಕ್ಕೆ ಆಗಿರುವ ಹಾಗೂ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಗಾಗಿ ಗಡ್ಕರಿ, ಅರುಣ್ ಜಪ ಮಾಡುವುದು ಖಾತ್ರಿಯಾಗಿದೆ.
ಮುಖ್ಯವಾಗಿ ಕೆಐಎಡಿಬಿ ಹಗರಣದ ಆರೋಪಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಅವರ ಮಗ ಕಟ್ಟಾ ಜಗದೀಶ್ ಪ್ರಕರಣ, ರಾಜ್ಯ ಸರಕಾರ ಪ್ರತಿ ನಡೆಯಲ್ಲೂ ಮೂಗು ತೂರಿಸುತ್ತಿರುವ ರಾಜ್ಯಪಾಲರ ಎಚ್ ಆರ್ ಭಾರದ್ವಾಜ್ ಅವರ ಬಗ್ಗೆ ಚರ್ಚೆ ನಡೆಯಲಿದೆ. ಜೊತೆಗೆ ಮುಖ್ಯಮಂತ್ರಿ ಮೇಲೆ ಬಂದಿರುವ ಭೂಹಗರಣ ಹಾಗೂ ಅವರ ಮಕ್ಕಳಿಗೆ ನೀಡಿದ್ದ ನಿವೇಶನಗಳ ಬಗ್ಗೆ ಪಕ್ಷ ನೀಡಿರುವ ವರದಿಯ ಬಗ್ಗೆ ಪರಿಶೀಲನೆ ನಡೆಯಲಿದೆ.
ಮುಂಬರುವ ತಾಪಂ,ಜಿಪಂ ಚುನಾವಣೆಗಳನ್ನು ಗೆಲ್ಲಲೇಬೇಕು ಎಂಬ ಸ್ಥಿತಿ ಬಿಜೆಪಿಗೆ ಉಂಟಾಗಿದ್ದು, ಆ ಬಗ್ಗೆ ಹೆಚ್ಚಿನ ಚರ್ಚೆ ನಡೆಸುವುದು ಪ್ರಮುಖವಾಗಿದೆ. ಹಗರಣದಿಂದ ಕುಖ್ಯಾತಿ ಗಳಿಸಿರುವ ಯಡಿಯೂರಪ್ಪ ನೇತೃತ್ವದ ಸರಕಾರ ಆಕಸ್ಮಾತ್ ಆಗಿ ಜಿಪಂ ಚುನಾವಣೆಯಲ್ಲಿ ಸೋಲುಂಡರೆ, ಪ್ರತಿಪಕ್ಷಗಳು ಸರಕಾರದ ವಿರುದ್ಧ ಇನ್ನಷ್ಟು ಸವಾರಿ ಮಾಡುವು ಸಾಧ್ಯತೆಯೂ ಇದೆ. ಹೀಗಾಗಿ ಬಿಜೆಪಿ ಸರಕಾರಕ್ಕೆ ಈ ಚುನಾವಣೆ ಮಾಡು ಇಲ್ಲವೇ ಮಡಿ ಎಂದರೆ ಸುಳ್ಳಲ್ಲ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications