ಅಂತರಂಗ ಬಹಿರಂಗ ಖ್ಯಾತಿ ಗುಲ್ವಾಡಿ ಇನ್ನಿಲ್ಲ

ಮಂಗಳವಾರ ಸಂಜೆ 6.45 ಸುಮಾರಿಗೆ ಗುಲ್ವಾಡಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಅವರನ್ನು ಕೂಡಲೇ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಅಲ್ಲಿಂದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುಲ್ವಾಡಿ ಅವರು ಮೃತರಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬೆಂಗಳೂರಿನ ಮಲ್ಲೇಶ್ವರದ ಎವೆರೆಸ್ಟ್ ಅಪಾರ್ಟ್ ಮೆಂಟ್ ನಲ್ಲಿ ಬಹುಕಾಲದಿಂದ ವಾಸವಾಗಿದ್ದರು.
ಗುಲ್ವಾಡಿ ಕಿರುಪರಿಚಯ: 1938 ರ ಅ.2 ರಂದು ಉಡುಪಿಯಲ್ಲಿ ಜನಿಸಿದರು. ಮೈಸೂರು ವಿವಿಯಿಂದ ಬಿಕಾಂ ಪದವಿ, ಮುಂಬೈ ವಿವಿಯಿಂದ ಎಲ್ ಎಲ್ ಬಿ, ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಪಡೆದರು. 1982 ರಿಂದ 1999ರ ವರೆಗೂ 'ತರಂಗ" ವಾರಪತ್ರಿಕೆ ಸಂಪಾದಕರಾಗಿ ಮಣಿಪಾಲದಲ್ಲಿ ದುಡಿದಿದ್ದರು. ಇವರ ಸಂಪಾದಕೀಯ ಅಂತರಂಗ ಬಹಿರಂಗ ಓದುಗರನ್ನು ಆಕರ್ಷಿಸಿತ್ತು. ಅದಕ್ಕೂ ಮುನ್ನ ಅವರು ವಿವಿಧ ಕ್ಷೇತ್ರಗಳಲ್ಲಿ ಮುಖ್ಯವಾಗಿ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು.
ಮುಂಬೈನಲ್ಲಿ ಪತ್ರಿಕೋದ್ಯಮ ಹಾಗೂ ಜಾಹೀರಾತು ಕ್ಷೇತ್ರದಲ್ಲಿ ಫ್ರಿಲ್ಯಾನ್ಸರ್ ಆಗಿಯೂ ದುಡಿದಿದ್ದರು. ಆ ಸಮಯದಲ್ಲಿ ಅವರು 'ಪ್ರಜಾವಾಣಿ" ಮತ್ತು 'ಸುಧಾ" ಪತ್ರಿಕೆಗಳಿಗೆ ಅರೆಕಾಲಿಕ ವರದಿಗಾರರಾಗಿ ಕೆಲಸ ಮಾಡಿದ್ದರು. ತರಂಗ ವಾರಪತ್ರಿಕೆಯಿಂದ ನಿರ್ಗಮಿಸಿದ ಬಳಿಕ 1999ರಲ್ಲಿ 'ನೂತನ" ವಾರಪತ್ರಿಕೆ ಸಂಪಾದಕರಾಗಿ ಕೆಲ ಕಾಲ ಕಾರ್ಯನಿರ್ವಹಿದ್ದರು. ಇವರ ಅಂಕಣ ಬರಹಗಳ ಸಂಗ್ರಹ ಅಂತರಂಗ ಬಹಿರಂಗ ಕೃತಿಗೆ 1993ರಲ್ಲಿ ಕರ್ನಾಟಕ ಸಾಹಿತ್ಯ ಕಾಡಿಮೆ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಇದಲ್ಲದೆ ವಿಶ್ವೇಶ್ವರಯ್ಯ, ವೀರ ಸಾವರ್ಕರ್, ಭಾರ್ಗವ, ಕೊಂಕಣಿ ಸಾಹಿತ್ಯ ಹಾಗೂ ಆಳ್ವಾಸ್ ನುಡಿಸಿರಿ ಪ್ರಶಸ್ತಿಗಳಿಗೆ ಗುಲ್ವಾಡಿ ಭಾಜನರಾಗಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications