ಅಂತರಂಗ ಬಹಿರಂಗ ಖ್ಯಾತಿ ಗುಲ್ವಾಡಿ ಇನ್ನಿಲ್ಲ

ಮಂಗಳವಾರ ಸಂಜೆ 6.45 ಸುಮಾರಿಗೆ ಗುಲ್ವಾಡಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಅವರನ್ನು ಕೂಡಲೇ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಅಲ್ಲಿಂದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುಲ್ವಾಡಿ ಅವರು ಮೃತರಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಅವರು ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬೆಂಗಳೂರಿನ ಮಲ್ಲೇಶ್ವರದ ಎವೆರೆಸ್ಟ್ ಅಪಾರ್ಟ್ ಮೆಂಟ್ ನಲ್ಲಿ ಬಹುಕಾಲದಿಂದ ವಾಸವಾಗಿದ್ದರು.
ಗುಲ್ವಾಡಿ ಕಿರುಪರಿಚಯ: 1938 ರ ಅ.2 ರಂದು ಉಡುಪಿಯಲ್ಲಿ ಜನಿಸಿದರು. ಮೈಸೂರು ವಿವಿಯಿಂದ ಬಿಕಾಂ ಪದವಿ, ಮುಂಬೈ ವಿವಿಯಿಂದ ಎಲ್ ಎಲ್ ಬಿ, ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಪಡೆದರು. 1982 ರಿಂದ 1999ರ ವರೆಗೂ 'ತರಂಗ" ವಾರಪತ್ರಿಕೆ ಸಂಪಾದಕರಾಗಿ ಮಣಿಪಾಲದಲ್ಲಿ ದುಡಿದಿದ್ದರು. ಇವರ ಸಂಪಾದಕೀಯ ಅಂತರಂಗ ಬಹಿರಂಗ ಓದುಗರನ್ನು ಆಕರ್ಷಿಸಿತ್ತು. ಅದಕ್ಕೂ ಮುನ್ನ ಅವರು ವಿವಿಧ ಕ್ಷೇತ್ರಗಳಲ್ಲಿ ಮುಖ್ಯವಾಗಿ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು.
ಮುಂಬೈನಲ್ಲಿ ಪತ್ರಿಕೋದ್ಯಮ ಹಾಗೂ ಜಾಹೀರಾತು ಕ್ಷೇತ್ರದಲ್ಲಿ ಫ್ರಿಲ್ಯಾನ್ಸರ್ ಆಗಿಯೂ ದುಡಿದಿದ್ದರು. ಆ ಸಮಯದಲ್ಲಿ ಅವರು 'ಪ್ರಜಾವಾಣಿ" ಮತ್ತು 'ಸುಧಾ" ಪತ್ರಿಕೆಗಳಿಗೆ ಅರೆಕಾಲಿಕ ವರದಿಗಾರರಾಗಿ ಕೆಲಸ ಮಾಡಿದ್ದರು. ತರಂಗ ವಾರಪತ್ರಿಕೆಯಿಂದ ನಿರ್ಗಮಿಸಿದ ಬಳಿಕ 1999ರಲ್ಲಿ 'ನೂತನ" ವಾರಪತ್ರಿಕೆ ಸಂಪಾದಕರಾಗಿ ಕೆಲ ಕಾಲ ಕಾರ್ಯನಿರ್ವಹಿದ್ದರು. ಇವರ ಅಂಕಣ ಬರಹಗಳ ಸಂಗ್ರಹ ಅಂತರಂಗ ಬಹಿರಂಗ ಕೃತಿಗೆ 1993ರಲ್ಲಿ ಕರ್ನಾಟಕ ಸಾಹಿತ್ಯ ಕಾಡಿಮೆ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಇದಲ್ಲದೆ ವಿಶ್ವೇಶ್ವರಯ್ಯ, ವೀರ ಸಾವರ್ಕರ್, ಭಾರ್ಗವ, ಕೊಂಕಣಿ ಸಾಹಿತ್ಯ ಹಾಗೂ ಆಳ್ವಾಸ್ ನುಡಿಸಿರಿ ಪ್ರಶಸ್ತಿಗಳಿಗೆ ಗುಲ್ವಾಡಿ ಭಾಜನರಾಗಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications