ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತರು ಪ್ರತಿಪಕ್ಷದ ನಾಯಕರಾ?

By Mrutyunjaya Kalmat
|
Google Oneindia Kannada News

Nitin Gadkari
ಬೆಂಗಳೂರು, ಡಿ. 8 : ರಾಜ್ಯದಲ್ಲಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರತಿಪಕ್ಷ ನಾಯಕರಂತೆ ವರ್ತಿಸುತ್ತಿದ್ದು, ಈ ಹಿಂದೆ ರಾಜ್ಯಪಾಲರು ಇದೇ ರೀತಿ ವರ್ತಿಸುತ್ತಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಂಗಳವಾರ ಮಾತನಾಡಿರುವ ಗಡ್ಕರಿ, ಲೋಕಾಯುಕ್ತರು ಸರಕಾರಕ್ಕೆ ಕಂಟಕ ಪ್ರಾಯರಾಗಿರುವ ಕುರಿತು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ರಾಜ್ಯ ನಾಯಕರಿಗೆ ಕಿವಿಮಾತು ಹೇಳಿದ್ದಾರೆ. ರಾಜ್ಯ ಸರಕಾರದ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೇ ಮುಂದುವರಿಯಲಿದ್ದು, ಸರಕಾರ ದ ವಿರುದ್ಧ ಬಂದಿರುವ ಭೂ ಹಗರಣ ಆರೋಪಕ್ಕೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಫಲಿತಾಂಶ ಮೂಲಕ ಉತ್ತರಿಸಲಾಗುವುದು ಎಂದು ಅವರು ಹೇಳಿದರು.

ಆಂತರಿಕ ಸಮಸ್ಯೆ : ನಾಯಕತ್ವ ಬದಲಾವಣೆ ಮಾಡಬೇಕೆಂಬ ಬೇಡಿಕೆ ಬರುತ್ತಿರುವುದೇಕೆ ಎಂಬ ಪ್ರಶ್ನೆಗೆ, ಇದು ಪಕ್ಷದೊಳಗಿನ ಆಂತರಿಕ ಸಮಸ್ಯೆ. ಪಕ್ಷದ ವೇದಿಕೆಯಲ್ಲೇ ಚರ್ಚಿಸಿ ಪರಿಹಾರ ಕಂಡುಕೊಳ್ಳ ಲಾಗುವುದು. ಬಹಿರಂಗ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಹಾರಿಕೆ ಉತ್ತರ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಥಳೀಯ ಆಡಳಿತ ಚುನಾವಣೆ ಬಳಿಕ ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

English summary
BJP National president Nitin Gadkari come down heavily on Lokayukta Santosh Hegde for his recent statment, Karnataka lokayukta Santosh Hegde acts like opposition leader, Gadkari criticizes. The Yeddyurappa government is doing very good work. I have seen a presentation of work done in the area of e-governance, metro rail and ring road development. I can say that this government will make Karnataka number one in development, Gadkari said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X