ಬಿಜೆಪಿಯದು ಕಿತ್ತುಬಾಕ ಸಂಸ್ಕೃತಿ : ಕರವೇ ಆಕ್ರೋಶ

ಪ್ರತಿಭಟನೆಯ ನೇತೃತ್ವವಹಿಸಿದ್ದ ಕರವೇ ಅಧ್ಯಕ್ಷ ಚಾನಾಳ್ ಶೇಖರ್ ಮಾತನಾಡಿ, ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ರಾಜ್ಯ ಕಂಡರಿಯದ - ಕೇಳರಿಯದ ಭ್ರಷ್ಟ, ಸ್ವಜನಪಕ್ಷಪಾತ ಸರ್ಕಾರ. ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿ ರೈತ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿರುವ ಸರ್ಕಾರ ಎಂದು ಆರೋಪಿಸಿದರು.
ಭೂ ಹಗರಣದ ಮೂಲಕ ರಾಜ್ಯದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಮಣ್ಣಪಾಲು ಮಾಡಿರುವ ಈ ಸರ್ಕಾರ, ಕಾಂಗ್ರೆಸ್ - ಜೆಡಿಎಸ್ಗಳಂತೆ ಕೇವಲ ರಾಜಕಾರಣದಲ್ಲಿ ತೊಡಗಿಕೊಂಡು ಅಭಿವೃದ್ಧಿಯನ್ನು ಕಡೆಗಾಣಿಸಿವೆ. ಇದರಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಗುಲ್ಬರ್ಗಾ, ಬೆಳಗಾವಿ ಹಾಗೂ ಇನ್ನಿತರ ಕಡೆ ವಿಶೇಷ ಅಧಿವೇಶನ ನಡೆಸುವ ಮೂಲಕ ಜನರ ಯೋಚನಾ ದಿಕ್ಕನ್ನು ತಪ್ಪಿಸುತ್ತಿದೆ ಎಂದು ಹೇಳಿದರು.
ದಾವಣೆಗೆರೆ, ಉಡುಪಿ, ಕೊಪ್ಪಳ, ಚಾಮರಾಜನಗರ, ಗದಗ, ಬಾಗಲಕೋಟೆ, ಹಾವೇರಿ ಜಿಲ್ಲೆಗಳು ಘೋಷಣೆ ಆಗಿ ಒಂದು ದಶಕ ಕಳೆದಿದ್ದರೂ ಕೂಡ ಈ ಜಿಲ್ಲೆಗಳು ಅಭಿವೃದ್ಧಿ ಸಾಧಿಸಿಲ್ಲ. ರಾಮನಗರ, ಚಿಕ್ಕಬಳ್ಳಾಪುರ ಮತ್ತು ಯಾದಗಿರಿ ಅಭಿವೃದ್ಧಿ ಕಾಣುತ್ತಿಲ್ಲ. ನಾಡಿನ ಜ್ವಲಂತ ಸಮಸ್ಯೆಗಳಾದ ಹೊಗೇನಕಲ್, ಕಳಸಾ ಬಂಡೂರಿ, ಕೃಷ್ಣ ನ್ಯಾಯಾಧಿಕರಣ ಪ್ರಾಧಿಕಾರ ರಚನೆ, ಡಾ|| ಸರೋಜಿನಿ ಮಹಿಷಿ ವರದಿ ಕುರಿತು ಈ ಸರ್ಕಾರ ಚಿಂತನೆಯನ್ನೇ ನಡೆಸುತ್ತಿಲ್ಲ ಎಂದರು.
ಕೆಐಎಡಿಬಿ ಮೂಲಕ ಕೃಷಿಯೋಗ್ಯ ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುತ್ತಿರುವ ಈ ಸರ್ಕಾರ ರಿಯಲ್ ಎಸ್ಟೇಟ್ ದಂಧೆಯನ್ನು ನಿರ್ವಹಿಸುತ್ತಿದೆ. ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಹೆಸರಲ್ಲಿ ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಹಾಳು ಮಾಡಿ ಕೃಷಿಕರ ಬದುಕಿನ ಹಕ್ಕನ್ನೇ ಕಿತ್ತುಕೊಳ್ಳುತ್ತಿದೆ. ಈ ಸರ್ಕಾರ ಕಿತ್ತುಬಾಕ ಸಂಸ್ಕೃತಿ'ಗೆ ಸಂಪೂರ್ಣ ಹೊಂದಾಣಿಕೆ ಆಗುತ್ತದೆ ಎಂದರು.
ನೆರೆ ಸಂತ್ರಸ್ತರ ಕುರಿತು ಮೊಸಳೆ ಕಣ್ಣೀರು ಹಾಕುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಧಿಕಾರ ಪ್ರಮಾಣ ವಚನ ಸಂದರ್ಭದಲ್ಲಿ ಮಾತ್ರವೇ ರೈತರನ್ನು ಸ್ಮರಿಸಿದ್ದಾರೆ. ಆ ನಂತರ ರೈತರನ್ನು ವಂಚಿಸುವಲ್ಲೇ ಸಂಪೂರ್ಣ ನಿರತರಾಗಿದ್ದಾರೆ. ನೆರೆಯ ರಾಜ್ಯಗಳಲ್ಲಿಯ ಕನ್ನಡಿಗರ ಹಿತದ ಚಿಂತನೆಗೂ ಕೂಡ ಕ್ಷಣಹೊತ್ತು ಇವರು ಚಿಂತಿಸುತ್ತಿಲ್ಲ ಎಂದು ಟೀಕಿಸಿದರು.
ಶರಣರ ಸಮ್ಮಿಲನ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಹಂದ್ಯಾಳು ಗ್ರಾಮದ ಶಿವಶರಣರ ಮಠದಲ್ಲಿ ಡಿಸೆಂಬರ್ 11ರ ಶನಿವಾರ ಮಧ್ಯಾಹ್ನ 3.30ಕ್ಕೆ 96ನೇ ಮಹಾಮನೆ ದತ್ತಿ ಕಾರ್ಯಕ್ರಮ ಏರ್ಪಡಿಸಿದೆ. ಹಂದ್ಯಾಳು ಶ್ರೀಶಿವಶರಣ ಮಠದ ಧರ್ಮದರ್ಶಿ ಡಾ. ಎಚ್. ಮಲ್ಲಿಕಾರ್ಜುನಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ನಿವೃತ್ತ ಅಧೀಕ್ಷಕ ಅಭಿಯಂತರ ವೈ.ಎಲ್. ಕೃಷ್ಣಾರೆಡ್ಡಿ, ವೀರಶೈವ ಮಹಾ ವಿದ್ಯಾಲಯದ ಕನ್ನಡ ಉಪನ್ಯಾಸಕ ಎ.ಎಂ.ಪಿ. ವೀರೇಶಸ್ವಾಮಿ ಮುಖ್ಯ ಅತಿಥಿಗಳಾಗಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications