ರಾಜೀವ್ ಚಂದ್ರಶೇಖರ್ ಗೆ ಟಾಟಾ ಖಡಕ್ ಉತ್ತರ

2ಜಿ ತರಂಗಗುಚ್ಛದ ವ್ಯವಹಾರದಲ್ಲಿ ತೊಡಗಿಕೊಳ್ಳಲು ರತನ್ ಟಾಟಾ ಅವರು ಮೂರನೇ ವ್ಯಕ್ತಿಯ (ನೀರಾ ರಾಡಿಯಾ) ಸಹಾಯ ಪಡೆದದ್ದೇಕೆ ಎಂದು ಪ್ರಶ್ನಿಸಿದ್ದರು. ಮತ್ತು ಈ ಅವ್ಯವಹಾರದಿಂದಾಗಿ ದೇಶದ ಬೊಕ್ಕಸಕ್ಕೆ ಸುಮಾರು 19074.8 ಕೋಟಿ ರು.ಯಷ್ಟು ನಷ್ಟವಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದರು. ರತನ್ ಟಾಟಾ ಅಂಥವರು ಬದಲಾವಣೆಯ ಹರಿಕಾರರಾಗಬೇಕೆ ವಿನಃ ಇಂಥ ಹಗರಣಗಳಿಗೆ ಮೇವು ಹಾಕಬಾರದು ಎಂದು ರಾಜೀವ್ ಚಂದ್ರಶೇಖರ್ ಪತ್ರ ಬರೆದಿದ್ದರು.
ರಾಜೀವ್ ಪತ್ರ : ರತನ್ ಟಾಟಾ ಅವರೇ, ಏನ್ ಸ್ವಾಮಿ ಇದೂ?
ಸಾಮಾನ್ಯವಾಗಿ, ಸಾಮಾನ್ಯ ಅಸಾಮಾನ್ಯರೆನ್ನದೆ ಯಾರೇ ಪತ್ರ ಬರೆದರೂ ತಪ್ಪದೆ ಉತ್ತರಿಸುವ ಗುಣವನ್ನು ಹೊಂದಿರುವ ರತನ್ ಟಾಟಾ ಅವರು ರಾಜೀವ್ ಅವರಿಗೆ ಬರೆದ ಉತ್ತರದಲ್ಲಿ ಎಲ್ಲ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. 2ಜಿ ಹಗರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿರುವ ಟಾಟಾ ಅವರು, ಈ ವ್ಯವಹಾರದಲ್ಲಿ ಟಾಟಾ ಟೆಲಿಸರ್ವೀಸಸ್ ಲಿ. ಯಾವುದೇ ಲಾಭ ಪಡೆದಿಲ್ಲ. ಬದಲಾಗಿ, ಟಾಟಾ ಟೆಲಿಸರ್ವೀಸರ್ ಒಂದೇ ಕಂಪನಿ ದೂರಸಂಪರ್ಕ ಇಲಾಖೆಯ ಎಲ್ಲ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದೆ ಮತ್ತು ತರಂಗಗುಚ್ಛವನ್ನು ಹಿಂದಕ್ಕೆ ನೀಡಿದೆ ಎಂದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. [ವಿಡಿಯೋ ನೋಡಿರಿ]
ಎನ್ ಡಿ ಎ ಆಡಳಿತ ಇರುವಾಗಲೇ ದೂರಸಂಪರ್ಕ ಕಂಪನಿಗಳಿಂದ ಹೆಚ್ಚಿನ ಅವ್ಯವಹಾರ ನಡೆದಿತ್ತು. ಅವೇ ಕಂಪನಿಗಳು ಸರಕಾರದ ನೀತಿಯನ್ನು ಉಲ್ಲಂಘಿಸಿದ್ದವು ಎಂದು ಟಾಟಾ ಅವರು ಪ್ರತ್ಯಾರೋಪ ಮಾಡಿದ್ದಾರೆ. ಸರಕಾರ ಅವಕಾಶ ನೀಡಿದಾಗ ಮಾತ್ರ ದೂರಸಂಪರ್ಕ ವ್ಯವಹಾರಗಳಿಗೆ ಟಾಟಾ ಕಂಪನೀ ಕೈಹಾಕಿದೆ ಮತ್ತು ಸರಕಾರದ ನೀತಿಯನ್ನು ಎಂದೂ ಉಲ್ಲಂಘಿಸಿಲ್ಲ ಎಂದು ಪತ್ರದಲ್ಲಿ ನಮೂದಿಸಿದ್ದಾರೆ.
ರಾಜೀವ್ ಚಂದ್ರಶೇಖರ್ ಅವರಿಗೆ ಬಿಜೆಪಿ ಬಗ್ಗೆ ಒಲವಿರುವುದು ಎಲ್ಲರಿಗೂ ತಿಳಿದ ವಿಚಾರ. ಅವರ ಪತ್ರ ರಾಜಕೀಯವಾಗಿ ಪ್ರೇರೇಪಿತವಾಗಿದ್ದು, ಪ್ರಧಾನ ಮಂತ್ರಿ ಡಾ. ಮನಮೋಹನ ಸಿಂಗ್ ಅವರನ್ನು ಮುಜುಗರಕ್ಕೀಡು ಮಾಡಲೆಂದೇ ಬರೆಯಲಾಗಿದೆ ಎಂದು ರತನ್ ಟಾಟಾ ಅವರು ರಾಜೀವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications