ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ-ಪದ್ಮರಾಜ್ ಸಂಬಂಧ ಶೀಘ್ರ ಬಹಿರಂಗ: ಉಗ್ರಪ್ಪ

By Mahesh
|
Google Oneindia Kannada News

VS Ugrappa to reveal BSY Padmaraj relation
ದಾವಣಗೆರೆ, ಡಿ.9: ಭೂ ಹಗರಣ ತನಿಖೆಯನ್ನು ಲೋಕಾಯುಕ್ತರಿಗೆ ವಹಿಸಿದೆ ಸಿಎಂ ಯಡಿಯೂರಪ್ಪ ಅವರು ತಮ್ಮ ತಲೆ ಕಾಯ್ದುಕೊಳ್ಳಲು ನಿವೃತ್ತ ನ್ಯಾಯಾಧೀಶ ಪದ್ಮರಾಜ್ ಅವರಿಗೆ ತನಿಖೆ ನಡೆಸಲು ಹೇಳಿದ್ದಾರೆ. ಪದ್ಮರಾಜ್ ಮತ್ತು ಮುಖ್ಯಮಂತ್ರಿಗಳಿಗೆ ಯಾವ ರೀತಿ ಸಂಬಂಧವಿದೆ ಎಂಬುದನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ವಿಎಸ್ ಉಗ್ರಪ್ಪ ಅವರು ಹೇಳಿದ್ದಾರೆ.

ಬುಧವಾರ ಹರಿಹರದಲ್ಲಿ ನಡೆದ ಗ್ರಾಮೀಣ ಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಹೇಳಿದರು. ಭೂ ಹಗರಣಗಳ ಬಗ್ಗೆ ಕಾಂಗ್ರೆಸ್ ನೀಡಿರುವ ದೂರುಗಳನ್ನು ಲೋಕಾಯುಕ್ತರೇ ತನಿಖೆ ನಡೆಸಬೇಕು. ಈ ತನಿಖೆಯನ್ನು ನ್ಯಾ. ಪದ್ಮರಾಜ್ ನಡೆಸಬಾರದು ಎಂದು ಆಗ್ರಹಿಸಿದರು.

ಹಗರಣಗಳನ್ನು ಮುಚ್ಚಿ ಹಾಕುವ ಉದ್ದೇಶದಿಂದ ನ್ಯಾಯಾಂಗ ತನಿಖೆ ನಾಟಕ ನಡೆಸಿದ್ದಾರೆ. ಜಿಲ್ಲಾ ಪಂಚಾಯತಿ, ತಾಲೂಕ್ ಪಂಚಾಯತಿ ಚುನಾವಣೆಗಳನ್ನು ತರಾತುರಿಯಲ್ಲಿ ನಡೆಸುತ್ತಿದ್ದಾರೆ. ಕುರ್ಚಿ ಉಳಿಸಿಕೊಳ್ಳಲು ಚುನಾವಣೆಯಲ್ಲಿ ಹಣ ಹಾಗೂ ಅಧಿಕಾರದ ದುರುಪಯೋಗ ಮಾಡಿಕೊಳ್ಳುವ ಮೂಲಕ ಹೆಚ್ಚು ಸ್ಥಾನ ಗಳಿಸುತ್ತಾರೆ ಎಂದರು.

ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತೆ ಗಡ್ಕರಿ ಅವರು ಮುಖ್ಯಮಂತ್ರಿಗಳ ಬೆನ್ನು ಚಪ್ಪರಿಸಿ ತೆರಳಿರುವುದು ದುರಂತ. ಈಶ್ವರಪ್ಪ ಅವರಂತೂ ರಾಜ್ಯಪಾಲ, ಲೋಕಾಯುಕ್ತರಿಗೂ ಗೌರವ ಕೊಡುವುದನ್ನು ಮರೆತಿದ್ದಾರೆ. ಹಗರಣಗಳಿಂದ ರಾಜ್ಯ ಮುಕ್ತವಾಗಿ ಜನತೆಗೆ ನ್ಯಾಯ ಸಿಗುವವರೆಗೂ ಕೆಪಿಸಿಸಿ ಹೋರಾಟ ನಡೆಸಲಿದೆ ಎಂದು ಉಗ್ರಪ್ಪ ಹೇಳಿದರು.

English summary
Congress leader VS Ugrappa told soon he will reveal secret relation between Former Judge Padmaraj and CM BSY. He said KPCC will not rest untill the public get justice in land scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X