ಪೇಜಾವರರ ನೇತೃತ್ವದಲ್ಲಿ ರಾಮಮಂದಿರ

ಶುಕ್ರವಾರ (ಡಿ10) ಇಲ್ಲಿ ಪೇಜಾವರ ಸ್ವಾಮಿಜಿಗಳಿಗೆ ನಡೆದ ವಿರಾಟ್ ಅಭಿನಂದನೆ ಸಮಾರಂಭದಲ್ಲಿ ಮಾತನಾಡುತ್ತಿದ್ದ ಸಿಂಘಾಲ್, ಪೇಜಾವರಶ್ರೀಗಳು ಹಿಂದೂ ಸಂಘಟನೆಗಳ ಉಸಿರಾಗಿದ್ದಾರೆ ಮತ್ತು ದೊಡ್ಡ ಶಕ್ತಿಯಾಗಿದ್ದಾರೆ. ವಿಎಚ್ ಪಿ ಆರಂಭದಿಂದ ಇಂದಿನವರೆಗೂ ಸಂಘದ ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಸೋನಿಯಾ ಗಾಂಧೀ ನೇತೃತ್ವದ ಕೇಂದ್ರ ಸರಕಾರ ರಾಮಸೇತುವೆಯನ್ನು ಒಡೆದು ಹಾಕಲು ಮುಂದಾಯಿತು. ಬಹುಸಂಖ್ಯಾತ ಹಿಂದೂಗಳಿಗೆ ಕಿರುಕುಳ ನೀಡುವ ಮೂಲಕ ಸಂಘಟನೆ ಶಕ್ತಿ ಕುಂದಿಸುವ ಕೆಲಸಕ್ಕೆ ಕೈಹಾಕಿದೆ. ದೇಶಭಕ್ತ ಆರ್ಎಸ್ಎಸ್ ಸಂಘಟನೆಯನ್ನು ದೇಶದ್ರೋಹಿ ಸಂಘಟನೆ ಜೊತೆ ತುಳುಕು ಹಾಕುವ ಕೆಲಸ ಮಾಡಿತು, ಇದಕ್ಕೆಲ್ಲಾ ಕಾಲ ಉತ್ತರಿಸಲಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ರಥಬೀದಿಯಲ್ಲಿ ವಿಶ್ವಕಲ್ಯಾಣ ದೃಷ್ಟಿಯಿಂದ ಹಮ್ಮಿಕೊಂಡಿದ್ದ ಮಹಾಯಾಗ 108 ಯಜ್ಞಕುಂಡಗಳಲ್ಲಿ ಶುಕ್ರವಾರ ಬೆಳಿಗ್ಗೆ ಮಂತ್ರಘೋಷಗಳ ನಡುವೆ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ 11.30ಕ್ಕೆ ಪೂರ್ಣಾಹುತಿಯೊಂದಿಗೆ ಸಮಾಪ್ತಿಗೊಂಡಿತು. 450ಕ್ಕೂ ಅಧಿಕ ವೈದಿಕರು ಅಷ್ಟಮಹಾಮಂತ್ರ, ಧನ್ವಂತರಿ ಹಾಗೂ ಷಡಕ್ಷರ ಮಂತ್ರ ಪಠಿಸಿ, ಪ್ರತಿ ಕುಂಡಕ್ಕೂ 1,000 ಆಹುತಿಗಳನ್ನು ಹಾಕಿ ಹೋಮ ನೆರವೇರಿಸಿದರು.
ಇಂದು ಆಡ್ವಾಣಿ ಭೇಟಿ : ಪೇಜಾವರ ಶ್ರೀಗಳ ವಿರಾಟ್ ಅಭಿನಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಶನಿವಾರ (ಡಿ 11) ಮಧ್ಯಾಹ್ನ ಉಡುಪಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ನಗರದ ಕುಕ್ಕಿಕಟ್ಟೆಯಲ್ಲಿನ ಶ್ರೀಕೃಷ್ಣ ಉಚಿತ ಸಾರ್ವಜನಿಕ ವಿದ್ಯಾರ್ಥಿ ನಿಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, 5 ಗಂಟೆಗೆ ಕೃಷ್ಣ ಮಠದ ಬಳಿ ನಡೆಯುವ ವಿರಾಟ್ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications