ಪೇಜಾವರರ ನೇತೃತ್ವದಲ್ಲಿ ರಾಮಮಂದಿರ

ಶುಕ್ರವಾರ (ಡಿ10) ಇಲ್ಲಿ ಪೇಜಾವರ ಸ್ವಾಮಿಜಿಗಳಿಗೆ ನಡೆದ ವಿರಾಟ್ ಅಭಿನಂದನೆ ಸಮಾರಂಭದಲ್ಲಿ ಮಾತನಾಡುತ್ತಿದ್ದ ಸಿಂಘಾಲ್, ಪೇಜಾವರಶ್ರೀಗಳು ಹಿಂದೂ ಸಂಘಟನೆಗಳ ಉಸಿರಾಗಿದ್ದಾರೆ ಮತ್ತು ದೊಡ್ಡ ಶಕ್ತಿಯಾಗಿದ್ದಾರೆ. ವಿಎಚ್ ಪಿ ಆರಂಭದಿಂದ ಇಂದಿನವರೆಗೂ ಸಂಘದ ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಸೋನಿಯಾ ಗಾಂಧೀ ನೇತೃತ್ವದ ಕೇಂದ್ರ ಸರಕಾರ ರಾಮಸೇತುವೆಯನ್ನು ಒಡೆದು ಹಾಕಲು ಮುಂದಾಯಿತು. ಬಹುಸಂಖ್ಯಾತ ಹಿಂದೂಗಳಿಗೆ ಕಿರುಕುಳ ನೀಡುವ ಮೂಲಕ ಸಂಘಟನೆ ಶಕ್ತಿ ಕುಂದಿಸುವ ಕೆಲಸಕ್ಕೆ ಕೈಹಾಕಿದೆ. ದೇಶಭಕ್ತ ಆರ್ಎಸ್ಎಸ್ ಸಂಘಟನೆಯನ್ನು ದೇಶದ್ರೋಹಿ ಸಂಘಟನೆ ಜೊತೆ ತುಳುಕು ಹಾಕುವ ಕೆಲಸ ಮಾಡಿತು, ಇದಕ್ಕೆಲ್ಲಾ ಕಾಲ ಉತ್ತರಿಸಲಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ರಥಬೀದಿಯಲ್ಲಿ ವಿಶ್ವಕಲ್ಯಾಣ ದೃಷ್ಟಿಯಿಂದ ಹಮ್ಮಿಕೊಂಡಿದ್ದ ಮಹಾಯಾಗ 108 ಯಜ್ಞಕುಂಡಗಳಲ್ಲಿ ಶುಕ್ರವಾರ ಬೆಳಿಗ್ಗೆ ಮಂತ್ರಘೋಷಗಳ ನಡುವೆ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ 11.30ಕ್ಕೆ ಪೂರ್ಣಾಹುತಿಯೊಂದಿಗೆ ಸಮಾಪ್ತಿಗೊಂಡಿತು. 450ಕ್ಕೂ ಅಧಿಕ ವೈದಿಕರು ಅಷ್ಟಮಹಾಮಂತ್ರ, ಧನ್ವಂತರಿ ಹಾಗೂ ಷಡಕ್ಷರ ಮಂತ್ರ ಪಠಿಸಿ, ಪ್ರತಿ ಕುಂಡಕ್ಕೂ 1,000 ಆಹುತಿಗಳನ್ನು ಹಾಕಿ ಹೋಮ ನೆರವೇರಿಸಿದರು.
ಇಂದು ಆಡ್ವಾಣಿ ಭೇಟಿ : ಪೇಜಾವರ ಶ್ರೀಗಳ ವಿರಾಟ್ ಅಭಿನಂದನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಶನಿವಾರ (ಡಿ 11) ಮಧ್ಯಾಹ್ನ ಉಡುಪಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ನಗರದ ಕುಕ್ಕಿಕಟ್ಟೆಯಲ್ಲಿನ ಶ್ರೀಕೃಷ್ಣ ಉಚಿತ ಸಾರ್ವಜನಿಕ ವಿದ್ಯಾರ್ಥಿ ನಿಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, 5 ಗಂಟೆಗೆ ಕೃಷ್ಣ ಮಠದ ಬಳಿ ನಡೆಯುವ ವಿರಾಟ್ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications