ಕರ್ಕರೆ ಅವರಿಗೆ ಬೆದರಿಕೆ ಇತ್ತು : ದಿಗ್ವಿಜಯ್ ಸಿಂಗ್
ದಿಗ್ವಿಜಯ ಸಿಂಗ್ ಅವರ ಹೇಳಿಕೆಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ದಿಗ್ವಿಜಯ ಸಿಂಗ್ ಹೇಳಿಕೆ ಅವರ ವೈಯಕ್ತಿಕ ಎಂದು ಕಾಂಗ್ರೆಸ್ ಜಾರಿಕೊಂಡಿದೆ. ದಿಗ್ವಿಜಯ್ ಸಿಂಗ್ ಅವರ ಹೇಳಿಕೆಗೆ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಬೆದರಿಕೆ ಕರೆಗಳು ನಮ್ಮ ಮನೆಗೆ ಬಂದಿರಲಿಲ್ಲ. ಕಾಂಗ್ರೆಸ್ ನಾಯಕರ ಹೇಳಿಕೆ ಪಾಕಿಸ್ತಾನಕ್ಕೆ ಅನುಕೂಲವಾಗುವ ರೀತಿಯಲ್ಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
26/11ರ ಸಂಜೆ 6ರಿಂದ 7ರ ನಡುವೆ ತಾನು ಕರ್ಕರೆಯವರ ಜತೆ ಸುಮಾರು ಮೂರುವರೆ ತಾಸುಗಳ ಕಾಲ ದೂರವಾಣಿಯಲ್ಲಿ ಮಾತನಾಡಿದ್ದೆನು. ಅವರು ಈ ಸಂದರ್ಭದಲ್ಲಿ ತನಗೆ ಹಿಂದೂ ಸಂಘಟನೆಯೊಂದರಿಂದ ಜೀವ ಬೆದರಿಕೆಯಿದೆ ಎಂದು ಹೇಳಿದ್ದರು. ಇದಾದ ಎರಡು ಗಂಟೆಯಲ್ಲಿ ಅವರು ಹತ್ಯೆಯಾದರೆಂದು ತಿಳಿದಾಗ ತನಗೆ ಭಾರೀ ಆಘಾತವಾಯಿತು ಎಂದು ದಿಗ್ವಿಜಯ್ ಇಂದು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ್ದರು.
ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಹೇಮಂತ್ ಕರ್ಕರೆ ಅವರಿಗೆ ಕೆಲ ಹಿಂದೂ ಸಂಘಟನೆಗಳಿಂದ ಬೆದರಿಕೆ ಬರುತ್ತಿದ್ದವು. ಈ ಕುರಿತು ನನ್ನೊಡನೆ ಹಂಚಿಕೊಂಡಿದ್ದರು ಎಂದು ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.