ಔಟ್ ಲುಕ್ ನಿಂದ ಮತ್ತಷ್ಟು ನೀರಾ ರಾಡಿ ಬಿಡುಗಡೆ

ಪತ್ರಿಕೆಯ ನೂತನ ಸಂಚಿಕೆಯಲ್ಲಿ ಈ ವಿಷಯಗಳು ಬಹಿರಂಗಗೊಂಡಿವೆ. ಭಾರತೀಯ ಕೈಗಾರಿಕಾ ಒಕ್ಕೂಟದ ಈ ಹಿಂದಿನ ಅಧ್ಯಕ್ಷರಾಗಿದ್ದ ತರುಣ್ ದಾಸ್ ಹಾಗೂ ತಮಿಳುನಾಡಿನ ಮಹಿಳಾ ರಾಜಕಾರಣಿಯೊಬ್ಬರ ನಡುವಣ ಸಂಭಾಷಣೆಗಳನ್ನು ಈ ನೂತನ ಟೇಪ್ ಒಳಗೊಂಡಿದೆ. ಈ ಹಿಂದೆ ನೀರಾ ಜತೆಗಿನ ಸಂಭಾಷಣೆಯ 120 ಟೇಪ್ಗಳು ಬಹಿರಂಗವಾಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ದೊಡ್ಡ ಬಿರುಗಾಳಿ ಎದ್ದು ರಾಜಾ ಅವರು ರಾಜೀನಾಮೆ ನೀಡಬೇಕಾಯಿತು.
2009ರ ಮೇನಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರಕ್ಕೆ ಬಂದಾಗ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ಯಾವ ರೀತಿಯಲ್ಲಿ ಹಂಚಿಕೆ ಮಾಡಲಾಯಿತು. ಈ ದಿಸೆಯಲ್ಲಿ ಟಾಟಾ, ಅಂಬಾನಿಯಂತಹ ದೊಡ್ಡ ಉದ್ಯಮಿಗಳು ಯಾವ ರೀತಿಯಲ್ಲಿ ಪ್ರಭಾವ ಬೀರಿದರು ಎಂಬುದರ ಬಗ್ಗೆಯೂ ಇದು ಬೆಳಕು ಚೆಲ್ಲಿದೆ. ಅದರಲ್ಲೂ ವಿಶೇಷವಾಗಿ ಎ. ರಾಜಾ ಅವರನ್ನು ದೂರಸಂಪರ್ಕ ಸಚಿವರನ್ನಾಗಿ ನೇಮಕ ಮಾಡಲು ನಡೆದ ಲಾಬಿಯ ಬಗ್ಗೆ ಮತ್ತಷ್ಟು ವಿವರಗಳನ್ನು ಬಹಿರಂಗಪಡಿಸಲಿದೆ.
ರಾಜಾ ದಲಿತ ವರ್ಗದಿಂದ ಬಂದವರು ಎಂಬ ಕಾರಣಕ್ಕಾಗಿ ಕರುಣಾನಿಧಿ ಅವರ ಸೇರ್ಪಡೆಗೆ ಒತ್ತಡ ಹೇರಿದ್ದರು. ಇದಕ್ಕೆ ಪ್ರಧಾನಿ ವಿರೋಧ ಇರಲಿಲ್ಲ. ಹಿಂದಿನ ಅಧಿಕಾರದ ಅವಧಿಯಲ್ಲಿ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡ ಟಿಆರ್ ಬಾಲು ಮಾತ್ರ ಸಂಪುಟ ಸೇರುವುದು ಬೇಡ ಎಂಬುದು ಪ್ರಧಾನಿ ಒತ್ತಾಸೆಯಾಗಿತ್ತು ಎಂದು ರಾಡಿಯಾ ಸಂಭಾಷಣೆ ವೇಳೆ ಬಹಿರಂಗಪಡಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications