Get Updates
Get notified of breaking news, exclusive insights, and must-see stories!

ಪತ್ರಕರ್ತ ಮತ್ತಿಹಳ್ಳಿ ನಾಗರಾಜರಾವ್ ವಿಧಿವಶ

Mattihalli Nagaraj Rao
ಬಳ್ಳಾರಿ, ಡಿ. 13: ಪಿ. ರಾಮಯ್ಯ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಮತ್ತಿಹಳ್ಳಿ ನಾಗರಾಜ್ ರಾವ್ (88) ಅವರು ಸೋಮವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಓರ್ವ ಪತ್ರ, ಮೂವರು ಪುತ್ರಿಯರು, ಅಪಾರ ಬಂಧುಬಳಗ, ಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ. ಮತ್ತಿಹಳ್ಳಿ ನಾಗರಾಜ್‌ರಾವ್ ಅವರ ನಿಧನಕ್ಕೆ ಪ್ರವಾಸೋದ್ಯಮ ಸಚಿವ ಜಿ. ಜನಾರ್ದನರೆಡ್ಡಿ, ಬಿ. ಶ್ರೀರಾಮುಲು ಅವರು ಶೋಕ ವ್ಯಕ್ತಪಡಿಸಿದ್ದಾರೆ.

ಮೃತರು ಕೆಲ ದಿನಗಳಿಂದ ಅಸ್ವಸ್ಥರಾಗಿದ್ದರು. ಮೃತರ ಅಂತ್ಯಕ್ರಿಯೆ ಸೋಮವಾರ ಸಂಜೆ ವಿಧಿ ಸಂಪ್ರದಾಯಗಳ ಪ್ರಕಾರ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನೆರವೇರಲಿದೆ.

ಸಂಯುಕ್ತ ಕರ್ನಾಟಕ ದಿನ ಪತ್ರಿಕೆಯಲ್ಲಿ ವೃತ್ತಿ ಆರಂಭಿಸಿದ್ದ ಮತ್ತಿಹಳ್ಳಿ ನಾಗರಾಜ್‌ರಾವ್ ಅವರು, 38 ವರ್ಷ ಕಾಲ ಸೇವೆ ಸಲ್ಲಿಸಿ ಹುಬ್ಬಳ್ಳಿ ಆವೃತ್ತಿಯ ಸಂಪಾದಕರಾಗಿದ್ದರು. ಸಿಂಗಾಪುರ, ಯುನೈಟೆಡ್ ಕಿಂಗ್‌ಡಂ ಸೇರಿ 12 ದೇಶಗಳ ಅಧ್ಯಯನ ಪ್ರವಾಸ ಕೈಗೊಂಡು ಇರಾನ್ - ಇರಾಕ್‌ನಲ್ಲಿಯ ಹನಿ ನೀರಾವರಿ ಯೋಜನೆಯ ಯಶಸ್ವಿ ಕುರಿತು ಪುಸ್ತಕ ಪ್ರಕಟಿಸಿದ್ದರು.

ಇವರ ಪ್ರವಾಸಿ ಅನುಭವಗಳ 'ಏಷಿಯಾದ ಸುತ', 'ನಾರಿ ನಿನಗೆ ನಮೋ ನಮಃ', 'ಭೂ ಸ್ವರ್ಗ ಸ್ವಿಟ್ಜರ್‌ಲ್ಯಾಂಡ್' ಎಂಬ 4 ಪ್ರವಾಸಿ ಕಥನಗಳ ಕೃತಿಗಳು ಇತ್ತೀಚೆಗೆ ಬಿಡುಗಡೆ ಆಗಿದ್ದವು.

ಗಣ್ಯರ ಶೋಕ :ಮತ್ತಿಹಳ್ಳಿ ನಾಗರಾಜ್‌ರಾವ್ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ದಿವಾಕರಬಾಬು, ಎಂಎಲ್ಸಿ ಕೆ.ಸಿ. ಕೊಂಡಯ್ಯ, ಮುಖಂಡ ಎಂ.ಪಿ. ಪ್ರಕಾಶ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎನ್. ಸೂರ್ಯನಾರಾಯಣರೆಡ್ಡಿ, ಬಳ್ಳಾರಿ ರಿಪೋರ್ಟರ್‍ಸ್ ಗಿಲ್ಡ್‌ನ ಸದಸ್ಯರು ಮೃತರ ಅಂತಿಮ ದರ್ಶನ ಪಡೆದು ತೀವ್ರ ಶೋಕ ವ್ಯಕ್ತಪಡಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+