ಬಂಗಾರಪ್ಪ ಮೊಮ್ಮಕ್ಕಳೊಂದಿಗೆ ಆಡಿಕೊಂಡಿರಲಿ : ಕುಮಾರ್

ಬಂಗಾರಪ್ಪ ಅವರು ಕಾಂಗ್ರೆಸ್ ತೊರೆದು ಜಾತ್ಯತೀತ ಜನತಾದಳ ಸೇರುತ್ತಿರುವ ಹಿನ್ನೆಲೆಯಲ್ಲಿ ನವದೆಹಲಿಗೆ ಧಾವಿಸಿರುವ ಕುಮಾರ್ ಬಂಗಾರಪ್ಪ ಪಕ್ಷದ ಹಿರಿಯರನ್ನು ಭೇಟಿ ಮಾಡಿ ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ವಿವರಿಸಿದ್ದಾರೆ.
ಬಂಗಾರಪ್ಪನವರು ಹಿಂದುಳಿದ ಜನಾಂಗದ ನಾಯಕರೆಂದು ಗುರುತಿಸಿಕೊಂಡಿದ್ದರು. ಈಗ ಪಕ್ಷಾಂತರ ಮಾಡುತ್ತಿರುವುದು ಹಿಂದುಳಿದ ಯುವಜನತೆಗೆ ಮಾಡುತ್ತಿರುವ ಅನ್ಯಾಯ ಎಂದು ಕುಮಾರ್ ಖಾರವಾಗಿ ನುಡಿದಿದ್ದಾರೆ. ಜೆಡಿಎಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವವೆನ್ನುವುದೇ ಇಲ್ಲ. ಕುಮಾರಸ್ವಾಮಿ ರಾಜ್ಯಾಧ್ಯಕ್ಷ, ಅವರಪ್ಪ ದೇವೇಗೌಡ ರಾಜ್ಯಾಧ್ಯಕ್ಷ, ರೇವಣ್ಣ ಕಾರ್ಯದರ್ಶಿಯಾಗಿದ್ದಾರೆ. ಉಳಿದವರಿಗೆ ಸ್ಥಾನವೂ ಇಲ್ಲ ಮಾನವೂ ಇಲ್ಲ. ಪರಿಸ್ಥಿತಿ ಹೀಗಿರುವಾಗ ಬಂಗಾರಪ್ಪನವರು ಜಾತ್ಯತೀತ ರಾಜಕಾರಣ ಮಾಡುತ್ತೇನೆ ಎಂದು ಹೇಳುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಕುಮಾರ್ ನುಡಿದರು.
ಬಂಗಾರಪ್ಪನವರು ಬೇರೆ ಪಕ್ಷ ಕಟ್ಟಿ ಅಥವಾ ಪಕ್ಷಾಂತರ ಮಾಡಿದ ನಂತರ ಬರೀ ಸೋಲುಂಡಿದ್ದಾರೆ. ಕರ್ನಾಟಕ ವಿಕಾಸ ಪಕ್ಷ ಕಟ್ಟಿ ಅವರು ಸಾಧಿಸಿದ್ದು ಅಷ್ಟರಲ್ಲೇ ಇದೆ. ಬಿಜೆಪಿ ಸೇರಿದ್ರು, ಸಮಾಜವಾದಿ ಪಕ್ಷ ಸೇರಿದ್ರು, ಮತ್ತೆ ಕಾಂಗ್ರೆಸ್ಸಿಗೆ ಬಂದ್ರು. ಈಗ ಮತ್ತೆ ಜೆಡಿಎಸ್ ಗೆ ಸೇರುತ್ತಿದ್ದಾರೆ. ಈ ತರಹದ ಪಕ್ಷಾಂತರ ಅವರಂಥ ಹಿರಿಯ ನಾಯಕರಿಗೆ ಶೋಭೆ ತರುವುದಿಲ್ಲ. ಕಿರಿಯರಿಗೆ ಅವರು ಮಾರ್ಗದರ್ಶನ ನೀಡಬೇಕು. ರಾಜಕೀಯ ಸನ್ಯಾಸ ಪಡೆದು ಮನೆಯಲ್ಲಿ ಮೊಮ್ಮಕ್ಕಳೊಂದಿಗೆ ಆಡಿಕೊಂಡಿರಲಿ ಎಂದು ತಂದೆಗೆ ಕುಮಾರ್ ಸಲಹೆ ನೀಡಿದರು.
ಜೆಡಿಎಸ್ ಸೇರ್ಪಡೆ - ಬಂಗಾರಪ್ಪ ದೃಢ : ಬಂಗಾರಪ್ಪ ಯಾವುದೇ ಕಾರಣಕ್ಕೂ ಕಾಂಗ್ರೆಸ್ ತ್ಯಜಿಸುವುದಿಲ್ಲ ಎಂದು ಕರ್ನಾಟಕದಲ್ಲಿ ರಾಜ್ಯ ನಾಯಕರು ಪುಂಖಾನುಪುಂಖವಾಗಿ ಹೇಳಿಕೆ ನೀಡುತ್ತಿರುವ ನಡುವೆಯೇ ತಾವು ಜೆಡಿಎಸ್ ಸೇರುತ್ತಿರುವುದು ಖಚಿತ ಎಂದು ಬಂಗಾರಪ್ಪ ದೃಢವಾಗಿ ಹೇಳಿದ್ದಾರೆ. ಈ ಕುರಿತು ದೇವೇಗೌಡರೊಡನೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ಏಕೆ ತೊರೆಯುತ್ತೇನೆಂಬ ಬಗ್ಗೆ ವಿವರಣೆ ನೀಡುತ್ತೇನೆ ಎಂದು ಬಂಗಾರಪ್ಪ ಹೇಳಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications