ಹರಿಯಾಣ ಸಿಎಂ ಮೇಲೆ ಮತ್ತೆ ಬೂಟಿನ ದಾಳಿ

ಇಲ್ಲಿನ ಸರಕಾರಿ ಕಾಲೇಜು ಆವರಣದಲ್ಲಿ ಹಿಂದುಳಿದ ವರ್ಗಗಳ ಸಮ್ಮೇಳನವನ್ನುದ್ದೇಶಿಸಿ ಹೂಡಾ ಮಾತನಾಡುತ್ತಿದ್ದರು. ಈ ವೇಳೆ ಯುವಕ ಮುಖ್ಯಮಂತ್ರಿ ಮಾತನಾಡುತ್ತಿದ್ದ ವೇದಿಕೆಯತ್ತ ಶೂ ಎಸೆದ ಕೂಡಲೇ ಪೊಲೀಸರು ಆತನನ್ನು ಸುತ್ತುವರಿದು ಅಜ್ಞಾತ ಸ್ಥಳವೊಂದಕ್ಕೆ ಕರೆದೊಯ್ದದ್ದಾರೆ. ಯುವಕ ಎಸೆದ ಶೂ ಹೂಡಾ ತಗುಲಿಲ್ಲ. ವೇದಿಕೆಯ ಮುಂಭಾಗದಲ್ಲಿ ಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಜಿತ್ ಸಿಂಗ್ ಶೂ ಎಸೆದ ಭೂಪ ಎಂದು ಪೊಲೀಸರು ತಿಳಿಸಿದ್ದಾರೆ.
ಬೂಟು ಎಸೆತ ಕುರಿತು ಒಂದು ವಿಡಂಬನಾತ್ಮಕ ಲೇಖನ
ತಾನು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ಮಖ್ಯಮಂತ್ರಿ ಬಳಿ ಹೇಳಿಕೊಳ್ಳಲು ಸಂಬಂಧಿತ ಅಧಿಕಾರಿಗಳು ತನಗೆ ಅವಕಾಶ ಮಾಡಿಕೊಡಲಿಲ್ಲವಾದ್ದರಿಂದ ತಾನು ಈ ಕೃತ್ಯವೆಸಗಿರುವುದಾಗಿ ಎಸ್ಸಾರ್ ಜಿಲ್ಲೆಯ ಕಿರ್ಮಾರ ಗ್ರಾಮದ ಯುವಕ ಅಜಿತ್ ಸಿಂಗ್ ವಿಚಾರಣೆ ವೇಳೆ ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. 2010ರ ಅಗಸ್ಟ್ 22 ರಂದು ದಕ್ಷಿಣ ಹರಿಯಾಣದ ಮಹೇಂದ್ರ ಗಢ್ ಎಂಬಲ್ಲಿ ಹೂಡಾ ಅವರ ಮೇಲೆ ಮೊದಲ ಬೂಟಿನ ದಾಳಿ ನಡೆದಿತ್ತು. ಇದು ಇವರಿಗೆ ಎರಡನೇ ಬಾರಿಯಾಗಿದ್ದು, ಈ ಪಟ್ಟಿಯಲ್ಲಿ ಇವರೇ ಮೊದಲಿಗರು.
ಅಪಘಾನಿಸ್ತಾನದ ಪ್ರವಾಸ ಕೈಗೊಂಡಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್ ಅವರ ಮೊದಲ ಬೂಟಿನ ದಾಳಿ ನಡೆಯಿತು. ಗೃಹ ಸಚಿವ ಪಿ ಚಿದಂಬರಂ, ಜಮ್ಮು ಕಾಶ್ಮೀರ ಅಧ್ಯಕ್ಷ ಒಮರ್ ಅಬ್ಧುಲ್ಲಾ, ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಪಂಜಾಬ್ ನ ಕುರುಕ್ಷೇತ್ರದ ಸಂಸದ ಸಚಿನ ಜಿಂದಾಲ್ ಅವರ ಬೂಟು ಹಾಗೂ ಚಪ್ಪಲಿಗಳ ದಾಳಿಗಳು ನಡೆದಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications