ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಿ.ಪಂನಲ್ಲಿ ಹೊಸಮುಖಗಳಿಗೆ ಅವಕಾಶ: ಕಾಂಗ್ರೆಸ್

By Mahesh
|
Google Oneindia Kannada News

Tanvir Seth
ಕುಶಾಲನಗರ, ಡಿ.14: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಹೊಸಮುಖ ಹಾಗೂ ಯುವ ಜನಾಂಗಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಚುನಾವಣಾ ವೀಕ್ಷಕರೂ ಆದ ಮಾಜಿ ಸಚಿವ ತನ್ವೀರ್ ಸೇಟ್ ಇಲ್ಲಿ ಹೇಳಿದ್ದಾರೆ.

ಸೋಮವಾರ ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನದೆ ಆದ ಶಕ್ತಿಯನ್ನು ಹೊಂದಿದೆ ಜಿಲ್ಲೆಯಲ್ಲಿ ಕಾಂಗ್ರೆಸ್ ದುರ್ಬಲವಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದರು.

ಕಾಂಗ್ರೆಸ್ ನಾಯಕರಾದ ಮಾಜಿ ಸಚಿವರಾದ ಎಂ.ಎಂ.ನಾಣಯ್ಯ, ಟಿ.ಜಾನ್. ಸುಮಾವಸಂತ್, ಮುಖಂಡರಾದ ಮಿಟ್ಟುಚಂಗಪ್ಪ, ಅರುಣ್ ಮಾಚಯ್ಯ, ಚಂದ್ರಕಲಾ ಸೇರಿದಂತೆ ಎಲ್ಲ ನಾಯಕರ ನೇತೃತ್ವದಲ್ಲಿ ಈ ಬಾರಿ ಜಿ.ಪಂ.ಚುನಾವಣೆ ಎದುರಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯ್ತಿಯನ್ನು ಕಾಂಗ್ರೆಸ್ ತನ್ನದಾಗಿಸಿಕೊಳ್ಳಲಿದೆ ಎಂದರು.

ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳಿಗೆ ಡಿ.26 ಹಾಗೂ ಡಿ.31 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜ.4ರಂದು ಮತ ಎಣಿಕೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಆಯೋಗದ ವೆಬ್ ತಾಣ ವೀಕ್ಷಿಸಿ.

English summary
Congress to field new faces in upcoming Zilla and Taluk Panchayat elections said ex minister and Kodagu district congress observer Tanvir seth. Congress has strong hold in the district and will win elections he added.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X