ಸಚಿನ್ ಒಬ್ಬರಿಂದ ಗೆಲ್ಲಲು ಸಾಧ್ಯವಿಲ್ಲ : ಧೋನಿ

ಡಿ 16 ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಮಹತ್ವದ್ದಾಗಿದೆ. ಟೆಸ್ಟ್ ಜೀವನದಲ್ಲಿ 49 ಶತಕ ಗಳಿಸಿದ್ದು, 50 ನೇ ಟೆಸ್ಟ್ ಶತಕದ ತವಕದಲ್ಲಿದ್ದಾರೆ. ಡಿ.16ರಿಂದ ಸೆಂಚುರಿಯನ್ ಪಾರ್ಕ್ ನಲ್ಲಿ ಆರಂಭವಾಗಲಿರುವ ಟೆಸ್ಟ್ ಪಂದ್ಯದ ಮೇಲೆ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದ್ದು, ದಕ್ಷಿಣ ಆಫ್ರಿಕಾದಲ್ಲಿ ಸಚಿನ್ ಮತ್ತೆ ಮ್ಯಾಜಿಕ್ ಮಾಡಲಿದ್ದಾರೆ ಎಂದು ಮಾಧ್ಯಮಗಳು ಗುಣಗಾನ ಮಾಡುತ್ತಿರುವುದಕ್ಕೆ ಧೋನಿ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಜೋಹಾನ್ಸ್ ಬರ್ಗ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಧೋನಿ, ಕ್ರಿಕೆಟ್ ಒಬ್ಬರ ಆಟವಲ್ಲ, ಒಬ್ಬರ ಆಟದಿಂದ ಉತ್ತಮ ಫಲಿತಾಂಶ ಅಸಾಧ್ಯ. ಸಚಿನ್ ಶ್ರೇಷ್ಟ ಆಟಗಾರ ಅದರಲ್ಲಿ ಎರಡು ಮಾತಿಲ್ಲ. ಆದರೆ, ಅವರೊಬ್ಬರಿಂದಲೇ ತಂಡದ ಗೆಲುವು ಅಸಾಧ್ಯ. ಇಡೀ ತಂಡ ಒಟ್ಟಾಗಿ ಉತ್ತಮ ಪ್ರದರ್ಶನ ನೀಡದರೆ ಮಾತ್ರ ಜಯಗಳಿಸಲು ಸಾಧ್ಯ ಎಂದಿದ್ದಾರೆ.
ಯುವ ಕ್ರಿಕೆಟಿಗರು ತಂಡದಲ್ಲಿದ್ದಾರೆ. ಎಲ್ಲರೂ ಉತ್ತಮ ಫಾರ್ಮನಲ್ಲಿ ಇರುವುದರಿಂದ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದೇವೆ. ದಕ್ಷಿಣ ಆಫ್ರಿಕಾ ಟೆಸ್ಟ್ ಕ್ರಿಕೆಟ್ ಕ್ರಮಾಂಕದಲ್ಲಿ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿರುವ ನಾವುಗಳು ಅವರಿಗೆ ಉತ್ತಮ ಪೈಪೋಟಿ ನೀಡುವುದರಲ್ಲಿ ಸಂದೇಹವಿಲ್ಲ. ಜೊತೆಗೆ ದಕ್ಷಿಣಾ ಆಫ್ರಿಕಾದ ಪ್ರತಿ ಆಟಗಾರ ಆಟದ ಶೈಲಿಯನ್ನು ಗಮನಿಸುತ್ತಿದ್ದು, ಉತ್ತಮ ತಂತ್ರ ರೂಪಿಸಲಾಗುವುದು ಎಂದು ಧೋನಿ ವಿವರಿಸಿದರು.
ಡಿ.16 ರಂದು ದಕ್ಷಿಣ ಆಫ್ರಿಕಾದ ಸೆಂಚುರಿಯನ್ ಪಾರ್ಕ್ ನಲ್ಲಿ ಮೊದಲ ಟೆಸ್ಟ್ ನಡೆಯಲಿದೆ. ಒಟ್ಟು 3 ಟೆಸ್ಟ್, 5 ಏಕದಿನ ಪಂದ್ಯ ಹಾಗೂ 1 ಟ್ವೆಂಟಿ-20 ಪಂದ್ಯಗಳನ್ನು ಭಾರತ ಆಡಲಿದೆ. ಫೆ. 19 ರಿಂದ ಐಸಿಸಿ ವಿಶ್ವಕಪ್ 2011 ರಂದು ಆರಂಭವಾಗಲಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications