ಯಡಿಯೂರಪ್ಪ ವಿರುದ್ಧ ಮತ್ತೆ ತೊಡೆತಟ್ಟಿದ ಬೇಳೂರು

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಭ್ರಷ್ಟಾಚಾರಗಳನ್ನು ಮಾಡಿಯೂ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ಇಟ್ಟುಕೊಂಡು ಕುಟುಂಬದ ರಕ್ಷಣೆ ಮಾಡುತ್ತಿದ್ದಾರೆ. ಆದರೆ, ಯಾವುದೇ ತಪ್ಪು ಮಾಡದ ನಮ್ಮನ್ನು ಪಕ್ಷದಿಂದ ಅನರ್ಹಗೊಳಿಸಿದ್ದಾರೆ. ಹೀಗಾಗಿ, 17 ಜನ ಅನರ್ಹ ಶಾಸಕರಿಗೂ ಸರ್ಕಾರದ ವಿರುದ್ಧ ನೋವಿದ್ದು, ಮುಂಬರುವ ಜಿ.ಪಂ ಹಾಗೂ ತಾ.ಪಂ.ಚುನಾವಣೆಯಲ್ಲಿ ಬೇರೆ ಪಕ್ಷಗಳಿಗೆ ಬೆಂಬಲ ನೀಡಿ ಆ ಪಕ್ಷವನ್ನು ಗೆಲ್ಲಿಸುತ್ತೇವೆ. ಇದೇ ನಮ್ಮ ಉದ್ದೇಶವಾಗಿದೆ ಎಂದರು.
ಅನರ್ಹತೆಯ ವಿಚಾರ ಸುಪ್ರೀಂಕೋರ್ಟ್ನಲ್ಲಿದ್ದು, ತೀರ್ಪಿನ ನಂತರ ಅನರ್ಹವಾಗುತ್ತೇವೆಯೋ, ಬಿಡುತ್ತೇವೆಯೋ ಎಂಬುದು ಗೊತ್ತಾಗುತ್ತದೆ. ಸದ್ಯಕ್ಕೆ ನಮ್ಮನ್ನು ಬಿಜೆಪಿಯಿಂದ ಹೊರಹಾಕಿಲ್ಲ ಎಂದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಈಶ್ವರಪ್ಪರಿಗೆ ತಾಕತ್ತಿದ್ದರೆ, ಗಂಡಸುತನವಿದ್ದರೆ ಹೊರಗೆ ಹಾಕಲಿ ಎಂದು ಸವಾಲು ಹಾಕಿದರು.
ಭ್ರಷ್ಟಾಚಾರದಿಂದ ಗಳಿಸಿರುವ ಹಣವನ್ನು ಚುನಾವಣೆಯಲ್ಲಿ ಸುರಿದು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿಗಳು ಭಾವಿಸಿದ್ದಾರೆ. ಈ ಹಿಂದೆ ಸಂಸದ ಹಾಗೂ ಮುಖ್ಯಮಂತ್ರಿಗಳ ಪುತ್ರ ಬಿ.ವೈ.ರಾಘವೇಂದ್ರರ ಹೆಸರಿನಲ್ಲಿ ನಿವೇಶನವಿದ್ದರೂ ಸುಳ್ಳು ದಾಖಲೆ ನೀಡಿ, ಬಿಡಿಎ ನಿವೇಶನವನ್ನು ಪಡೆದಿದ್ದರು. ನಂತರ ಬಿಡಿಎ ನಿವೇಶನ ಪಡೆದಿರುವುದು ತಪ್ಪಾಯಿತು ಎಂದು ವಾಪಸ್ ನೀಡಿದ್ದಾರೆ. ಇಷ್ಟು ನೀಚಮಟ್ಟಕ್ಕೆ ತಂದೆ-ಮಕ್ಕಳು ಇಳಿದಿರುವುದರಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ ಎಂದು ಹರಿಹಾಯ್ದರು.
ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಭ್ರಷ್ಟಾಚಾರದ ಆರೋಪ ಇನ್ನೂ ಸಾಬೀತಾಗದಿದ್ದರೂ ಕಟ್ಟಾಸುಬ್ರಹ್ಮಣ್ಯ ನಾಯ್ಡು, ರಾಮಚಂದ್ರೇಗೌಡ, ಕೃಷ್ಣಯ್ಯ ಶೆಟ್ಟಿ ಹಾಗೂ ಕರ್ಮಕಾಂಡದಲ್ಲಿ ಸಿಕ್ಕಿಬಿದ್ದ ಹರತಾಳು ಹಾಲಪ್ಪ ರಾಜೀನಾಮೆ ಕೊಟ್ಟರು. ಆದರೆ, ಸಾಕಷ್ಟು ಭ್ರಷ್ಟಾಚಾರವನ್ನು ನಡೆಸಿ ಸಿಕ್ಕಿಬಿದ್ದರೂ ಮುಖ್ಯಮಂತ್ರಿ ಮಾತ್ರ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ ಎಂದು ಯಡಿಯೂರಪ್ಪ ಮೇಲೆ ಕಿಡಿಕಾರಿದರು.
ಬಿವೈಆರ್ ಮೇಲೆ ಆಕ್ರೋಶ : ಸಂಸದ ಬಿ.ವೈ.ರಾಘವೇಂದ್ರರ ಬಗ್ಗೆ ಹರಿಹಾಯ್ದ ಅವರು, ಸಂಸದರಾದ ಮೇಲೆ ಅನೇಕ ಭ್ರಷ್ಟಾಚಾರವನ್ನು ನಡೆಸಿ, ಕಂಡಕಂಡಲ್ಲಿ ಆಸ್ತಿ ಮಾಡುತ್ತಿದ್ದಾರೆ. ಸಾಗರದಲ್ಲಿಯೂ ಎಸ್.ಆರ್.ಮಿಲ್, ಕೃಷ್ಣಾ ಟಾಕೀಸ್, ಹೆಗ್ಡೆ ಫಾರಂ ಸೇರಿದಂತೆ ಅನೇಕ ಆಸ್ತಿಗಳನ್ನು ಕೊಂಡುಕೊಳ್ಳಲು ಮುಂದಾಗಿದ್ದರು. ಆದರೆ, ಅದೇನಾಯಿತೋ ಗೊತ್ತಿಲ್ಲ, ತಕ್ಷಣವೇ ಅದರಿಂದ ಹಿಂದೆಸರಿದಿದ್ದಾರೆ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications