ಕ್ರೈಂ ವಿರುದ್ಧ ದೊಡ್ಡಪೇಟೆ ಎಸ್ ಐ ಚಿತ್ರ ಅಭಿಯಾನ

ಸೀಗೆಹಟ್ಟಿ ಹಳೇ ಮಂಡ್ಲಿ, ನ್ಯೂಮಂಡ್ಲಿ, ಗಾಂಧಿಬಜಾರ್ನ ಬಸವಣ್ಣ ದೇವಸ್ಥಾನ, ಭರ್ಮಪ್ಪ ನಗರದಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನ ನಡೆದಿದೆ. ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ನಡೆಸಲಾಗುತ್ತಿರುವ ಸಾಕ್ಷ್ಯಚಿತ್ರ ಪ್ರದರ್ಶನವು ಈ ಮಾಸಾಂತ್ಯದವರೆಗೂ ದಿನನಿತ್ಯ ಸಂಜೆ ಹಾಗೂ ರಾತ್ರಿ ದೊಡ್ಡಪೇಟೆ ಠಾಣಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪ್ರದರ್ಶನಗೊಳ್ಳಲಿದೆ.
ಎಚ್ಚರ ಬೀದಿ ನಾಟಕ: ಅಪರಾಧಗಳ ಬಗ್ಗೆ ಜನಜಾಗೃತಿ ಗಾಗಿ ಕೊಟ್ರಪ್ಪ ನೇತೃತ್ವದ ರಂಗಬೆಳಕು ತಂಡ "ಎಚ್ಚರ" ಎಂಬ ಸಮಾರು 30 ನಿಮಿಷಗಳ ಬೀದಿನಾಟಕವನ್ನು ಪ್ರದರ್ಶಿಸುತ್ತಿದೆ. ಈಗಾಗಲೇ 9 ಕಡೆ ಈ ನಾಟಕ ಪ್ರದರ್ಶನ ಕಂಡಿದ್ದು, ಡಿ.17 ಮತ್ತು 18 ರಂದು ಒಟ್ಟು 11 ಪ್ರದರ್ಶನಗಳ ಮೂಲಕ ಅಂತ್ಯ ಕಾಣಲಿದೆ.
ಚಿತ್ರ ನಿರ್ಮಾತೃ ಮಂಜುನಾಥ್ :ದೊಡ್ಡಪೇಟೆ ಠಾಣೆ ಎಸ್ಐ ಮಂಜುನಾಥ್ ಅವರ ಆಸ್ಥೆ ಹಾಗೂ ಆಸಕ್ತಿಯ ಫಲವಾಗಿ ಸುಮಾರು 45 ನಿಮಿಷಗಳ ಸಾಕ್ಷ್ಯಚಿತ್ರವನ್ನು ತಯಾರಿಸಲಾಗಿದೆ. ಸ್ವತಃ ಮಂಜುನಾಥ್ ಅವರೇ ಇದಕ್ಕೆ ಧ್ವನಿ ನೀಡಿದ್ದಾರೆ. ಅಲ್ಲದೆ ದೊಡ್ಡಪೇಟೆ ಠಾಣೆಯ ಪೇದೆಗಳಾದ ಸೈಯದ್ ಇಮ್ರಾನ್ ಹಾಗೂ ಮರ್ದಾನ್ ಪಾತ್ರಧಾರಿಗಳಾಗಿ ನಟಿಸಿದ್ದಾರೆ.
ಒಂಟಿ ಮಹಿಳೆಯನ್ನು ವಂಚಿಸಿ ಒಡವೆ ದೋಚುವಿಕೆ, ನಕಲಿ ಬಂಗಾರವನ್ನು ಅಸಲಿ ಎಂದು ನಂಬಿಸಿ ಮಾರಾಟ ಮಾಡುವುದು, ಪಿಕ್ಪಾಕೇಟ್, ಪ್ರಯಾಣಿಕರ ಸೂಟ್ಕೇಸ್-ಬ್ಯಾಗ್ ಕಳವು, ದ್ವಿಚಕ್ರ ವಾಹನ ಕಳವು, ಎಟಿಎಂ ವಂಚನೆ, ಕಿಟಕಿ ಮೂಲಕ ಕಳವು, ಸರ ಅಪಹರಣ, ಅಪ್ರಾಪ್ತರು ಡ್ರಗ್ಸ್ ವ್ಯಸನಿಗಳಾಗುವುದು, ಪಾಲಿಶ್ ನೆಪದಲ್ಲಿ ಬೆಳ್ಳಿ-ಬಂಗಾರ ಆಭರಣ ಕಳವು... ಹೀಗೆ, ವಿವಿಧ ಅಪರಾಧಗಳ ಬಗ್ಗೆ ವೀಡಿಯೋ ಮೂಲಕ ಸಾಮಾನ್ಯ ಜನರಿಗೂ ಕೂಡಾ ಮನ ದಟ್ಟಾಗುವ ರೀತಿಯಲ್ಲಿ ಸಾಕ್ಷ್ಯ ಚಿತ್ರವನ್ನು ರೂಪಿಸಲಾಗಿದೆ.
"ಸ್ಲೈಡ್ಶೋ ಮೂಲಕ ಪ್ರದರ್ಶಿಸಲಾಗುತ್ತಿರುವ ಸಾಕ್ಷ್ಯಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರು ಜಾಗೃತಿ ವಹಿಸಿದಲ್ಲಿ ಅಪರಾಧಗಳನ್ನು ತಡೆಗಟ್ಟಲು ಸಹಾಯಕವಾಗಲಿದೆ. ಇದಕ್ಕೆ ಪೂರಕವಾಗಿ ಸಾಕ್ಷ್ಯಚಿತ್ರವನ್ನು ತಯಾರಿಸಲಾಗಿದೆ" ಎಂದು ದೊಡ್ಡಪೇಟೆ ಠಾಣೆಯ ಎಸ್ಐ ಮಂಜುನಾಥ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮೊದಲ ಬಾರಿಗೆ ದೊಡ್ಡಪೇಟೆ ಪೊಲೀಸರು ಇಂತಹ ಸಾಕ್ಷ್ಯಚಿತ್ರವನ್ನು ರೂಪಿಸಿದ್ದು, ಇದೇ ದೃಶ್ಯಾವಳಿಯೊಂದಿಗೆ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು ಸಾಕ್ಷ್ಯಚಿತ್ರವನ್ನು ತಯಾರಿಸುತ್ತಿದ್ದಾರೆ. ಈ ಮೂಲಕ ದೊಡ್ಡಪೇಟೆ ಠಾಣೆ ಪೊಲೀಸರು ವಿವಿಧ ಠಾಣೆಗಳ ಪೊಲೀಸರಿಗೆ ಮಾದರಿಯಾಗಿದ್ದಾರೆ.
2007-08ರಲ್ಲಿ ಶಿವಮೊಗ್ಗ ಟ್ರಾಫಿಕ್ ಠಾಣೆಯ ಎಸ್ಐ ಆಗಿದ್ದ ಮಂಜುನಾಥ್ ಸಂಚಾರ ನಿಯಮಾವಳಿಗಳ ಬಗ್ಗೆ ಸಾಕ್ಷ್ಯಚಿತ್ರದ ಮೂಲಕ ಜನರಲ್ಲಿ ಅರಿವು ಮೂಡಿಸಲು ಯಶಸ್ವಿಯಾಗಿದ್ದರು. ಈ ಅನುಭವದ ಹಿನ್ನೆಲೆಯಲ್ಲಿ ಅವರೀಗ ಸಾಕ್ಷ್ಯಚಿತ್ರದ ಪ್ರದರ್ಶನದ ಮೂಲಕ ಅಪರಾಧಗಳ ಬಗ್ಗೆ ಜನಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ಟಿವಿ ಚಾನಲ್ನಲ್ಲಿ ಪ್ರಸಾರ: ಅಪರಾಧಗಳ ಬಗ್ಗೆ ಜನಜಾಗೃತಿಗಾಗಿ ದೊಡ್ಡಪೇಟೆ ಠಾಣೆ ಪೊಲೀಸರು ತಯಾರಿಸಿರುವ ಸುಮಾರು 45 ನಿಮಿಷಗಳ ಸಾಕ್ಷ್ಯಚಿತ್ರವು ಇಂದಿನಿಂದ ಒಂದು ವಾರ ಶಿವಮೊಗ್ಗದ ಸ್ಥಳೀಯ ಟಿವಿಚಾನಲ್ಗಳಾದ ಸ್ಕೈಲೈನ್ ಹಾಗೂ ಅಮೋಘದಲ್ಲಿ ಸಂಜೆ 6 ಗಂಟೆಯಿಂದ ಪ್ರಸಾರವಾಗಲಿದೆ ಎಂದು ದೊಡ್ಡಪೇಟೆ ಠಾಣೆಯ ಎಸ್ಐ ಮಂಜುನಾಥ್ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications