ಪ್ರಣಾಳಿಕೆ : ರಸ್ತೆಗಳ ಕಾಂಕ್ರಿಟೀಕರಣಕ್ಕೆ ಕೈ ಆದ್ಯತೆ

ಜಿಪಂ,ತಾಪಂ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವೆ ಎಂಬ ವದಂತಿಗಳ ಬಗ್ಗೆ ಕಿವಿಗೊಡಬೇಡಿ ಅವರು ಸ್ಪಷ್ಟಪಡಿಸಿದರು. ಪ್ರಚಲಿತ ರಾಜಕೀಯ ವಿದ್ಯಮಾನಗಳಿಂದ ವಿಧಾನಮಂಡಲದ ಅಧಿವೇಶನಕ್ಕೆ ಅವಕಾಶವೇ ದೊರೆಯಲಿಲ್ಲ. ಭೂ ಹಗರಣದ ಆರೋಪದಲ್ಲಿ ಆಡಳಿತ ಪಕ್ಷಗಳು ತೊಡಗಿರುವಾಗಲೇ ಜಿಲ್ಲಾ ಪಂಚಾಯತಿ ಚುನಾವಣೆ ಎದುರಾಗಿದೆ. ಇದರಿಂದ ಚಳಗಾಲದ ಅಧಿವೇಶನವೇ ನಡೆಯದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಣಾಳಿಕೆ ಮುಖ್ಯಾಂಶಗಳು : ಪ್ರತಿ ಜಿಲ್ಲಾ ಪಂಚಾಯಿತಿ ರಾಜ್ ವ್ಯವಸ್ಥೆಯ ಮೂಲಕ ಸ್ತ್ರೀ ಶಕ್ತಿ ಬ್ಯಾಂಕ್ ಸ್ಥಾಪನೆ, ಪ್ರತಿ ಗ್ರಾಮ ಪಂಚಾಯಿತಿಗೊಂದು ಟ್ರಾಕ್ಟರ್, ಟೆಲ್ಲರ್ ವಿತರಣೆ, ಹೋಬಳಿ ಮಟ್ಟದಲ್ಲಿ ವೃದ್ಧರ ರಕ್ಷಣಾ ಕೇಂದ್ರ ಸ್ಥಾಪನೆ, 15 ಲಕ್ಷ ಮನೆಗಳ ನಿರ್ಮಾಣ, ಗ್ರಾಮ ರಕ್ಷಣಾ ದಳ ಸ್ಥಾಪನೆ, ಪಾರದರ್ಶಕ ಪಂಚಾಯಿತಿ ಆಡಳಿತ, ಗ್ರಾಮೀಣ ರಸ್ತೆಗಳ ಕಾಂಕ್ರಿಟೀಕರಣ ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನಗಳಿಗೆ ಜಮೀನು ಒದಗಿಸಲು ರಾಜ್ಯ ಸರಕಾರಕ್ಕೆ ಒತ್ತಾಯ ಮಾಡುವುದೂ ಸೇರಿ ಅನೇಕ ಆಕರ್ಷಕ ಯೋಜನೆಗಳನ್ನು ಪ್ರಣಾಳಿಕೆ ಹೊಂದಿದೆ.
ಪ್ರಣಾಳಿಕೆ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ, ಗ್ರಾಮೀಣ ಬದುಕನ್ನು ಹಸನಾಗಿಸುವಲ್ಲಿ ಜನ ಹಿತವಾದ ಪ್ರಣಾಳಿಕೆಯನ್ನು ಕಾಂಗ್ರೆಸ್ ಪ್ರಕಟಿಸಿದೆ. ಅಧಿಕಾರಕ್ಕೆ ಬಂದರೆ ಅನುಷ್ಠಾನಗೊಳಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ ಶೇ.100ರಷ್ಟು ಸಾಕ್ಷರತೆ ದುಡಿಯುವ ಕೈಗಳಿಗೆ ಉದ್ಯೋಗ, ಗ್ರಾಮಗಳ ಸಂಪೂರ್ಣ ನೈರ್ಮಲ್ಯ, ಚೈತನ್ಯಶೀಲ ಕೃಷಿ ವ್ಯವಸ್ಥೆ, ಸರ್ವರಿಗೂ ವಸತಿ, ಶುದ್ಧ ಕುಡಿಯುವ ನೀರು ಮತ್ತು ಆರೋಗ್ಯ ಸೌಲಭ್ಯಗಳನ್ನು ಹಳ್ಳಿಗಳ ಮಟ್ಟದಲ್ಲೇ ಒದಗಿಸಲು ಕಾಂಗ್ರೆಸ್ ಕಟಿ ಬದ್ಧವಾಗಿದೆ ಎಂದು ಪರಮೇಶ್ವರ ಹೇಳಿದರು.
ಬಂಗಾರಪ್ಪ ಪಕ್ಷ ಬಿಟ್ಟಿದ್ದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಬಂಗಾರಪ್ಪ ಪಕ್ಷ ಬಿಟ್ಟಿದ್ದರಿಂದ ಪಕ್ಷಕ್ಕೆ ಏನೂ ನಷ್ಟ ಆಗದು. ಅವರೀಗ ಜೆಡಿಎಸ್ ಸೇರಿದ್ದಾರೆ. ಆ ಪಕ್ಷಕ್ಕೆ ಎಷ್ಟು ಲಾಭವಾಗುತ್ತದೋ ಗೊತ್ತಿಲ್ಲ. ಆದರೆ, ಕಾಂಗ್ರೆಸ್ ಪಕ್ಷಕ್ಕಂತೂ ಹಾನಿ ಆಗುವುದಿಲ್ಲ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications