ಬಿಐಎಎಲ್ ಗೆ ಕೆಂಪೇಗೌಡ ಹೆಸರು: ಆರ್ ಅಶೋಕ
ಬೆಂಗಳೂರು,
ಡಿ. 16: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಬಿಐಎ)ಕ್ಕೆ ಬೆಂದಕಾಳೂರಿನ ನಿರ್ಮಾತೃ ಕೆಂಪೇಗೌಡರ ಹೆಸರಿಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅನುಮೋದನೆಗೆ ಕಳಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರ್ ಅಶೋಕ ತಿಳಿಸಿದ್ದಾರೆ. ಡಾ ಹೇಮಚಂದ್ರ ಸಾಗರ್ ನೇತೃತ್ವದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಂಟಿ ಸದನ ಪರಿಶೀಲನಾ ಸಮಿತಿ ಸಲ್ಲಿಸಿದ್ದ ವರದಿಯ ಅನ್ವಯ ಈ ನಿರ್ಣಯ ಕೈಗೊಳ್ಳಲಾಗಿದೆ. id="toptextpromo">ಜಂಟಿ
ಸದನ ಸಮಿತಿಯ ವರದದಿಯಂತೆ ನಿಲ್ದಾಣದಲ್ಲಿ ಕನ್ನಡ ಪತ್ರಿಕೆ ಒದಗಿಸುವುದು ಮತ್ತು ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕುವುದು ಹಾಗೂ ಎಚ್ಎಎಲ್ ನಿಲ್ದಾಣಕ್ಕೆ ಮರುಚಾಲನೆ ನೀಡುವುದರ ಬಗ್ಗೆ ಕೂಡಾ ಚಿಂತನೆ ನಡೆದಿದೆ ಎಂದು ಸಚಿವ ಅಶೋಕ್ ಹೇಳಿದರು. id='are-slot-1' class='oiad oi-axt oiadv'> id='top-searched-articles'>ನಾಡಪ್ರಭು
ಕೆಂಪೇಗೌಡ ಅವರ 500ನೇ ಜಯಂತಿಯನ್ನು 5 ಕೋಟಿ ರು ವೆಚ್ಚದಲ್ಲಿ ಆಚರಿಸಲಾಗುವುದು. ಕರಗದ ದಿನ ಅಥವಾ ಮುಂಚಿತವಾಗಿ ಪ್ರತಿ ವಾರ್ಡ್ ನಲ್ಲೂ ಕೆಂಪೇಗೌಡ ಜಯಂತಿ ಆಚರಿಸಲು ಸೂಚಿಸಲಾಗುವುದು. ಕೆಂಪೇಗೌಡರ ಹಿರಿಮೆಯನ್ನು ಎಲ್ಲರಿಗೂ ಸಾರಲು ಸಮಿತಿಯನ್ನು ರಚಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ. ಬೆಂಗಳೂರು ನಿರ್ಮಾತೃ ಕೇಂಪೇಗೌಡರ ಸಮುದಾಯದವನು ನಾನು ಎನ್ನುವ ಬಗ್ಗೆ ನನಗೆ ಹೆಮ್ಮೆ ಮತ್ತು ಗೌರವವಿದೆ ಎಂದು ಭೂಮಿ ಬಳಗ ಟ್ರಸ್ಟ್ ಹಮ್ಮಿಕೊಂಡಿದ್ದ ಎರಡನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಚಿವ ಅಶೋಕ್ ತಿಳಿಸಿದರು.











Click it and Unblock the Notifications