ಗಣಿಗಾರಿಕೆ : ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್

ಮುಖ್ಯನ್ಯಾಯಮೂರ್ತಿ ನಿಸಾರ್ ಅಹ್ಮದ್ ಹಾಗೂ ನ್ಯಾ. ವಿಲಾಸ್ ಅಫ್ಜಲ್ ಪುರ್ ಕರ್ ಅವರನ್ನೊಳಗೊಂಡ ಪೀಠ ಈ ಮಹತ್ವದ ಅದೇಶ ನೀಡಿದೆ. ಕರ್ನಾಟಕ ಪ್ರವಾಸೋಧ್ಯಮ ಸಚಿವ ಜಿ ಜನಾರ್ದನರೆಡ್ಡಿ ಅವರ ಮಾಲೀಕತ್ವದ ಒಎಂಸಿ ಕಂಪನಿ ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ತಿರಸ್ಕರಿಸಿದೆ. ಕಳೆದ 8 ತಿಂಗಳ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದ ಹೈಕೋರ್ಟ್ ಸಿಬಿಐ ತನಿಖೆಗೆ ಒಪ್ಪಿಗೆ ಸೂಚಿಸಿದೆ. ಈ ಬೆಳವಣಿಗೆಯಿಂದ ರೆಡ್ಡಿಗಳು ಮತ್ತೆ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಆಂಧ್ರಪ್ರದೇಶ ಮತ್ತು ಕರ್ನಾಟಕದ ಬಳ್ಳಾರಿ ಗಡಿ ಪ್ರದೇಶ ಮತ್ತು ಅನಂತಪುರ ಜಿಲ್ಲೆಯಲ್ಲಿ ಒಎಂಸಿ, ಬಿಐಪಿಒ ಮತ್ತು ಇತರ 3 ಸಂಸ್ಥೆಗಳ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪಗಳು ಕೇಳಿಬಂದಿದ್ದು, ತನಿಖೆಗೆ ಅನುವು ಮಾಡಿಕೊಡಬೇಕು ಎಂದು ಸಿಬಿಐ ಬುಧವಾರ ಹೈಕೋರ್ಟ್ ಗೆ ಮನವಿ ಸಲ್ಲಿಸಿತ್ತು.












Click it and Unblock the Notifications