ಜೆ ಪಿ ನಗರದಲ್ಲಿ ಹಾಡುಹಗಲೇ ಬಿಪಿಒ ಉದ್ಯೋಗಿ ಕೊಲೆ

ಶುಕ್ರವಾರ (ಡಿ.17)ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಕೊಲೆ ಬೆಳಕಿಗೆ ಬಂದಿದ್ದು ಮಾತ್ರ ಸಂಜೆ 4.30ರ ಸಮಯದಲ್ಲಿ. ಸುರೇಖಾ ಅವರ ಪತಿ ಆನಂದ್ ನಾರಾಯಣ್ ಮಿಶ್ರಾ ಅಸ್ಸಾಂನ ಒಡಿಶಾದಲ್ಲಿ ನೆಲೆಸಿದ್ದಾರೆ. ಸುರೇಖಾ ಇತ್ತೀಚೆಗಷ್ಟೆ ಡೆಲ್ ಕಂಪನಿಯಲ್ಲಿ ಉದ್ಯೋಗ ಪಡೆದಿದ್ದರು.
ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಈ ದಂಪತಿಗಳಿಗೆ ಮಕ್ಕಳಿರಲಿಲ್ಲ. ಈ ಹಿಂದೆ ಮೂರು ವರ್ಷಗಳಿಂದ ಲಕ್ಷ್ಮಿಲೇಔಟ್ನ ಉಮಾ ಸಂಜೀವಿನಿ ರೆಸಿಡೆನ್ಸಿ ಅಪಾರ್ಟ್ಮೆಂಟ್ನಲ್ಲಿ ಆನಂದ್ ಮತ್ತು ಸುರೇಖಾ ದಂಪತಿಗಳು ವಾಸವಾಗಿದ್ದರು. ಜಯನಗರದಲ್ಲಿ ಜಿಮ್ ಸೆಂಟರ್ ಒಂದನ್ನು ಆನಂದ್ ನಡೆಸುತ್ತಿದ್ದರು.
ಮಾರ್ಚ್ ತಿಂಗಳಲ್ಲಿ ಆನಂದ್ ಪತ್ನಿ ಸಮೇತ ಒಡಿಶಾಗೆ ಹೋಗಿ ನೆಲಸಿದ್ದರು. ಬಳಿಕ ಅವರು ಬೆಂಗಳೂರಿಗೆ ಹಿಂತಿರುಗಿ ನವೆಂಬರ್ ತಿಂಗಳಿಂದ ರಮಣಬಾಹು ಅಪಾರ್ಟ್ಮೆಂಟ್ನಲ್ಲಿ ಪತ್ನಿಯನ್ನು ಬಿಟ್ಟುಹೋಗಿದ್ದರು ಎಂದು ಪೊಲೀರು ತಿಳಿಸಿದ್ದಾರೆ.
ಪರಿಚಿತ ವ್ಯಕ್ತಿಯೇ ಹಂತಕ!: ಉಮಾ ಸಂಜೀವಿನಿ ರೆಸಿಡೆನ್ಸಿ ಅಪಾರ್ಟ್ಮೆಂಟ್ಗೆ ಬೆಳಿಗ್ಗೆ 10 ಗಂಟೆಗೆ ಅಪರಿಚಿತ ವ್ಯಕ್ತಿಯೊಬ್ಬ ಆನಂದ್ ನಿವಾಸದ ಬಗ್ಗೆ ವಿಚಾರಿಸಿದ್ದ. ಸೆಕ್ಯುರಿಟಿ ಗಾರ್ಡ್ ರಮಣಬಾಹು ಅಪಾರ್ಟ್ಮೆಂಟ್ನಲ್ಲಿ ಆನಂದ್ ಪತ್ನಿ ವಾಸವಾಗಿರುವುದಾಗಿ ಹೇಳಿದ್ದ. ಆ ವ್ಯಕ್ತಿಯೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬೆಳಗ್ಗೆ 11ಗಂಟೆ ಸುಮಾರಿನಲ್ಲಿ ಆನಂದ್ ತಮ್ಮ ಪತ್ನಿ ಸುರೇಖಾ ಮೊಬೈಲ್ಗೆ ಫೋನು ಮಾಡಿದ್ದಾರೆ. ಆಕೆ ಕರೆ ಸ್ವೀಕರಿಸದ ಕಾರಣ ಅನುಮಾನಗೊಂಡ ಅವರು ಅಪಾರ್ಟ್ಮೆಂಟ್ ಮಾಲೀಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಮಾಲೀಕರು ಫ್ಲಾಟ್ ಬಳಿ ಹೋದಾಗ ಬಾಗಿಲಿಗೆ ಚಿಲಕ ಹಾಕಿತ್ತು. ಅವರು ಪೊಲೀಸರಿಗೆ ವಿಷಯ ತಿಳಿಸಿದ ಬಳಿಕ ಈ ಕೊಲೆ ಪ್ರಕರಣ ಬಯಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications