ಬೀದಿ ವ್ಯಾಪಾರಕ್ಕೆ ಮುಕ್ತಿ ಫುಡ್ ಕೋರ್ಟ್ ಗೆ ಜೈ: ಡಿಸಿ

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಗರದ ಬಹುತೇಕ ರಸ್ತೆಗಳಲ್ಲಿ ಈ ರೀತಿಯ ತಿಂಡಿ ಗಾಡಿಗಳ ವ್ಯಾಪಾರ ಹೆಚ್ಚಾಗಿರುವುದನ್ನು ನೋಡಬಹುದಾಗಿದೆ. ಆದರೆ 30ಅಡಿಗಿಂತ ಕಡಿಮೆ ಇರುವಂತಹ ರಸ್ತೆಗಳಲ್ಲಿ ಈ ರೀತಿಯ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಆದೇಶ ನೀಡಿದ್ದು, ಅದರಂತೆ ಕಸ್ತೂರರ್ಬಾ ರಸ್ತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ತಿಂಡಿ ಗಾಡಿಗಳಿಗೆ ಬೇರೆ ಕಡೆ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ ಎಂದರು.
ಆರೋಗ್ಯಕ್ಕೆ ಸ್ವಚ್ಛತೆಗೆ ಆದ್ಯತೆ: ಕಸ್ತೂರರ್ಬಾ ರಸ್ತೆಯಲ್ಲಿ ತಿಂಡಿ ಗಾಡಿಗಳಿಗೆ ಬೇರೆ ಕಡೆ ವ್ಯಾಪಾರ ಮಾಡಲು ಹತ್ತು- ಹದಿನೈದು ದಿನಗಳ ಕಾಲಾವಕಾಶ ನೀಡಲಾಗಿದೆ. ಏಕೆಂದರೆ ಈ ರಸ್ತೆಯಲ್ಲಿ ಶಿಕ್ಷಣ ಸಂಸ್ಥೆಗಳಿವೆ. ನಗರಸಭೆ ಇದೆ, ಇದರ ಜೊತೆಗೆ ಗಾಂಧಿ ಪಾರ್ಕ್ ಕೂಡ ಇದ್ದು, ಇಲ್ಲಿ ಪ್ರತಿನಿತ್ಯ ಮಕ್ಕಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುತ್ತಾರೆ ಇದರಿಂದಾಗಿ ಈ ರಸ್ತೆಯಲ್ಲಿ ಸಾಕಷ್ಟು ಅನಾನುಕೂಲಗಳು ಉಂಟಾಗಿದ್ದು, ಸ್ವಚ್ಛತೆ ಸಂಪೂರ್ಣ ಹಾಳಾಗಿದೆ. ಸ್ವಚ್ಛತೆ ಕಾಪಾಡಲು ಆಗುತ್ತಿಲ್ಲ. ಹೀಗಾಗಿ ತಿಂಡಿ ಗಾಡಿಗಳ ಮಾಲೀಕರುಗಳಿಗೆ ಈ ರಸ್ತೆಯನ್ನು ಬಿಟ್ಟು ಬೇರೆ ಕಡೆ ಶಾಶ್ವತ ಪರಿಹಾರ ಕಲ್ಪಿಸಲು ಯೋಜನೆ ಮಾಡುತ್ತೇವೆ. ಇದಕ್ಕಾಗಿ ಸೂಕ್ತ ಜಾಗ ಪರಿಶೀಲನೆ ಮಾಡಬೇಕಾಗಿದೆ ಎಂದು ಹೇಳಿದರು.
ಘಟನೆಯೊಂದನ್ನು ನೆನೆಪಿಸಿಕೊಂಡ ಅವರು, ಅಲ್ಲಿನ ತಿಂಡಿ ಗಾಡಿಗಳ ವ್ಯಾಪಾರಸ್ಥರು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಪೊಲೀಸರಿಗೆ ಈ ರೀತಿಯ ಪರಿಸ್ಥಿತಿ ಇದೆ ಎಂದರೆ ಇನ್ನು ಸಾರ್ವಜನಿಕರಿಗೆ ಎಷ್ಟು ತೊಂದರೆ ಇದೆ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಫುಡ್ಕೋರ್ಟ್ ತೆರೆಯಲು ಜಿಲ್ಲಾಡಳಿತ ಯೋಚಿಸುತ್ತಿದೆ ಎಂದರು.
ಸದ್ಯಕ್ಕೆ ಕಸ್ತೂರಬಾ ರಸ್ತೆಯಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿ ಕೊಡಲಾಗಿದ್ದು, ಸಂಜೆ 6ಗಂಟೆಯ ನಂತರ ವ್ಯಾಪಾರ ಪ್ರಾರಂಭಿಸಬೇಕು ಮತ್ತು 11 ಗಂಟೆಯೊಳಗೆ ವ್ಯಾಪಾರವನ್ನು ಮುಗಿಸಬೇಕು. ಜೊತೆಗೆ ಪ್ರತಿಯೊಬ್ಬ ತಳ್ಳು ಗಾಡಿಯವರು ಕಸದ ಬುಟ್ಟಿ ಇಡಬೇಕು. ಜೊತೆಗೆ ಕಸದ ಬುಟ್ಟಿಗೆ ಹಾಕಿಸುವ ಜವಾಬ್ದಾರಿ ಮಾಲೀಕರದೇ ಆಗಿದೆ. ಇದನ್ನು ಮೀರಿದರೆ ಅಂಗಡಿಗಳನ್ನು ಅಲ್ಲಿಂದ ಖಾಲಿ ಮಾಡಿಸುವುದಾಗಿ ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications