ಜಿಪಂ ಚುನಾವಣೆ : ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಸಮ್ಮುಖದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಪಿ ಜಿ ಆರ್ ಸಿಂಧ್ಯಾ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಮಹತ್ವ ನೀಡಿರುವ ಜೆಡಿಎಸ್, ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ದುರಾಡಳಿತದ ಬಗ್ಗೆ ಚುನಾವಣಾ ಪ್ರಣಾಳಿಕೆಯಲ್ಲಿ ಬೆಳಕು ಚೆಲ್ಲಿದೆ.
ಪ್ರಾದೇಶಿಕ ಪಕ್ಷ ಎಂದು ಹೇಳಿಕೊಂಡಿರುವ ಜೆಡಿಎಸ್, ಚುನಾವಣೆಯಲ್ಲಿ ಭರವಸೆ ನೀಡುವುದಿಲ್ಲ, ಬದಲಿಗೆ ಎರಡೂವರೆ ವರ್ಷಗಳ ಅವಧಿಯಲ್ಲಿ ಬಿಜೆಪಿ ದಿವಾಳಿಯತ್ತ ತಂದಿತ್ತಿರುವ ಪಂಚಾಯತಿರಾಜ್ ವ್ಯವಸ್ಥೆಯ ರೋಗ ಲಕ್ಷಣಗಳನ್ನು ಗುರುತಿಸಿ ಅದಕ್ಕೆ ಎಲ್ಲೆಲ್ಲಿ ಯಾವ ರೀತಿಯ ಚಿಕಿತ್ಸೆಯಾಗಬೇಕೆಂಬುದರ ಬಗ್ಗೆ ಪ್ರಣಾಳಿಕೆಯಲ್ಲಿ ಸ್ಪಷ್ಟಪಡಿಸಲು ಮುಂದಾಗಿದೆ.
ವಿಧವಾ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನ ಭತ್ತೆ ಮೊದಲಾದ ಅರ್ಜಿಗಳನ್ನು ಸ್ವೀಕರಿಸಿದ ಒಂದು ತಿಂಗಳೊಳಗೆ ತಹಶೀಲ್ದಾರರೇ ಖುದ್ದು ಹಣ ಮಂಜೂರು ಮಾಡುವಂತೆ ಹೋರಾಟ. ಗ್ರಾಮೀಣ ಮೂಲಭೂತ ಸೌಲಭ್ಯಗಳಾದ ಕೊಳವೆ ಬಾವಿ, ಕೊಳವೆ ನೀರು ಸರಬರಾಜು, ಕಿರು ನೀರು ಸರಬರಾಜು, ಹಳ್ಳಿ ರಸ್ತೆಗಳ ದುರಸ್ಥಿ, ಶಾಲಾ ಕೊಠಡಿಗಳ ನಿರ್ಮಾಣ, ಶೌಚಾಲಯ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ನಡೆಸಲು ಬಿಜೆಪಿ ಸರಕಾರ ಮೇಲೆ ಒತ್ತಡ. ಬ
ಮೂಲಭೂತ ಅವಶ್ಯಕತೆಗಳಾದ ಆಹಾರ, ವಸತಿ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ರಸ್ತೆ ಮೊದಲಾದವುಗಳಿಗೆ ಆದ್ಯತೆ, ಪ್ರಸಕ್ತ ಯೋಜನೆಗಳ ಅನುಷ್ಠಾನಕ್ಕಾಗಿ ಹಕ್ಕೊತ್ತಾಯದ ವಿಷಯಗಳಿಗೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿದೆ. ಬಿಜೆಪಿ ಸರಕಾರದ ಅನಾಚಾರಗಳು ಈ ಬಾರಿಯ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಿಗೆ ನೀರು ಪೂರೈಕೆಗಾಗಿ ಹೋರಾಟ ಪ್ರಣಾಳಿಕೆಯ ಪ್ರಮುಖ ಆಕರ್ಷಣೆಯಾಗಿದೆ.(ದೇವೇಗೌಡ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications