ಜಿಪಂ ಚುನಾವಣೆ : ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಸಮ್ಮುಖದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ಪಿ ಜಿ ಆರ್ ಸಿಂಧ್ಯಾ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಮಹತ್ವ ನೀಡಿರುವ ಜೆಡಿಎಸ್, ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ದುರಾಡಳಿತದ ಬಗ್ಗೆ ಚುನಾವಣಾ ಪ್ರಣಾಳಿಕೆಯಲ್ಲಿ ಬೆಳಕು ಚೆಲ್ಲಿದೆ.
ಪ್ರಾದೇಶಿಕ ಪಕ್ಷ ಎಂದು ಹೇಳಿಕೊಂಡಿರುವ ಜೆಡಿಎಸ್, ಚುನಾವಣೆಯಲ್ಲಿ ಭರವಸೆ ನೀಡುವುದಿಲ್ಲ, ಬದಲಿಗೆ ಎರಡೂವರೆ ವರ್ಷಗಳ ಅವಧಿಯಲ್ಲಿ ಬಿಜೆಪಿ ದಿವಾಳಿಯತ್ತ ತಂದಿತ್ತಿರುವ ಪಂಚಾಯತಿರಾಜ್ ವ್ಯವಸ್ಥೆಯ ರೋಗ ಲಕ್ಷಣಗಳನ್ನು ಗುರುತಿಸಿ ಅದಕ್ಕೆ ಎಲ್ಲೆಲ್ಲಿ ಯಾವ ರೀತಿಯ ಚಿಕಿತ್ಸೆಯಾಗಬೇಕೆಂಬುದರ ಬಗ್ಗೆ ಪ್ರಣಾಳಿಕೆಯಲ್ಲಿ ಸ್ಪಷ್ಟಪಡಿಸಲು ಮುಂದಾಗಿದೆ.
ವಿಧವಾ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನ ಭತ್ತೆ ಮೊದಲಾದ ಅರ್ಜಿಗಳನ್ನು ಸ್ವೀಕರಿಸಿದ ಒಂದು ತಿಂಗಳೊಳಗೆ ತಹಶೀಲ್ದಾರರೇ ಖುದ್ದು ಹಣ ಮಂಜೂರು ಮಾಡುವಂತೆ ಹೋರಾಟ. ಗ್ರಾಮೀಣ ಮೂಲಭೂತ ಸೌಲಭ್ಯಗಳಾದ ಕೊಳವೆ ಬಾವಿ, ಕೊಳವೆ ನೀರು ಸರಬರಾಜು, ಕಿರು ನೀರು ಸರಬರಾಜು, ಹಳ್ಳಿ ರಸ್ತೆಗಳ ದುರಸ್ಥಿ, ಶಾಲಾ ಕೊಠಡಿಗಳ ನಿರ್ಮಾಣ, ಶೌಚಾಲಯ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ನಡೆಸಲು ಬಿಜೆಪಿ ಸರಕಾರ ಮೇಲೆ ಒತ್ತಡ. ಬ
ಮೂಲಭೂತ ಅವಶ್ಯಕತೆಗಳಾದ ಆಹಾರ, ವಸತಿ, ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ರಸ್ತೆ ಮೊದಲಾದವುಗಳಿಗೆ ಆದ್ಯತೆ, ಪ್ರಸಕ್ತ ಯೋಜನೆಗಳ ಅನುಷ್ಠಾನಕ್ಕಾಗಿ ಹಕ್ಕೊತ್ತಾಯದ ವಿಷಯಗಳಿಗೆ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗಿದೆ. ಬಿಜೆಪಿ ಸರಕಾರದ ಅನಾಚಾರಗಳು ಈ ಬಾರಿಯ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಿಗೆ ನೀರು ಪೂರೈಕೆಗಾಗಿ ಹೋರಾಟ ಪ್ರಣಾಳಿಕೆಯ ಪ್ರಮುಖ ಆಕರ್ಷಣೆಯಾಗಿದೆ.(ದೇವೇಗೌಡ)
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications