ಬಿಜಿಎಸ್ ಹಿಂದೂ ಅರ್ಚಕರಿಗೆ ತರಬೇತಿ ಶಿಬಿರ

Balagangadharanath Swamiji
ಬೆಂಗಳೂರು, ಡಿ.21: ಭಗವಂತನ ಪೂಜೆ ಸಾಕ್ಷಾತ್ ದರ್ಶನ ಸಾಧ್ಯವಾಗುವಂತೆ ಇರಬೇಕೆಂದು ಆದಿಚುಂಚನಗಿರಿ ಮಠದ ಜಗದ್ಗುರು ಡಾ.ಬಾಲಗಂಗಾಧರನಾಥ ಮಹಾಸ್ವಾಮಿಕರೆ ನೀಡಿದ್ದಾರೆ. ಶ್ರೀಪೀಠದಿಂದ ನೀಡುತ್ತಿರುವ ಎಲ್ಲಾ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಂಡು ಉತ್ತಮವಾಗಿ ಅಭ್ಯಾಸ ನಡೆಸಿ ಭಕ್ತರಿಗೆ ಸಂತಸವಾಗುವಂತೆ ದೇವರ ಪೂಜಾಕಾರ್ಯದಲ್ಲಿ ತೊಡಗಬೇಕೆಂದು ಮಾರ್ಗದರ್ಶನ ನೀಡಿದರು.

ನಗರದ ಬಿಜಿಎಸ್ ಆಧ್ಯಾತ್ಮಿಕ ಸಭಾ ಭವನದಲ್ಲಿ ನಡೆದ ರಾಜ್ಯ ಮಟ್ಟದ ಮೂರನೇ ಆರ್ಚಕರ ವೃತ್ತಿ ಶಿಕ್ಷಣ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಗಳಾದವರು ಹೇಗಿರಬೇಕೆಂಬುದನ್ನು ತಿಳಿಸುವ ಉದ್ದೇಶದಿಂದ ಈ ಶಿಬಿರ ಏರ್ಪಡಿಸಲಾಗಿದೆ.

ಸಮಾರಂಭದಲ್ಲಿ ಶಿಬಿರದ ಸಂಚಾಲಕ ಹಾಗೂ ಪ್ರಾಚಾರ್ಯ ಪ್ರೊ.ಸಿ.ನಂಜುಡಯ್ಯ, ಕೊಳದ ಮಠದ ಡಾ.ಶಾಂತರವೀರ ಮಹಾಸ್ವಾಮಿ, ಚಿತ್ರದುರ್ಗ ಸದ್ಗುರು ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ, ನಾಗಸಂದ್ರ ಮಠದ ಶ್ರೀ ಸಿದ್ಧಲಿಂಗಸ್ವಾಮಿ ಉಪಸ್ಥಿತರಿದ್ದರು.

ಶ್ರೀಕ್ಷೇತ್ರದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ 16 ದಿನಗಳ ಶಿಬಿರದಲ್ಲಿ ರಾಜ್ಯದ 26 ಜಿಲ್ಲೆಗಳಿಂದ 650 ಮಂದಿ ಅರ್ಚಕರು ಭಾಗವಹಿಸುತ್ತಿದ್ದಾರೆ. ಅವರಿಗೆ 30 ಮಂದಿ ವಿದ್ವಾಂಸರಿಂದ ಶಿಕ್ಷಣ ತರಬೇತಿ ನೀಡಲಾಗುತ್ತಿದೆ. ಅರ್ಚಕರಿಗೆಲ್ಲ ಊಟ, ವಸತಿಯ ವ್ಯವಸ್ಥೆ ಮಾಡಲಾಗಿದೆ. [ಬಾಲಗಂಗಾಧರನಾಥ ಸ್ವಾಮೀಜಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+