ಅರುಂಧತಿಯನ್ನು ಬೆಂಬಲಿಸಿದ ಯುಆರ್ ಅನಂತಮೂರ್ತಿ

79 ವಸಂತಗಳನ್ನು ಪೂರೈಸಿ 80ನೇ ವರ್ಷಕ್ಕೆ ಕಾಲಿಟ್ಟಿರುವ ಅನಂತಮೂರ್ತಿ ಅವರನ್ನು ಸನ್ಮಾನಿಸಿ, 'ಅನಂತಮೂರ್ತಿ ಮಾತುಕತೆ : ಹತ್ತು ಸಮಸ್ತರ ಜೊತೆ' ಕೃತಿಯನ್ನು ಮಂಗಳವಾರ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಅವರು ಅರುಂಧತಿ ರಾಯ್ ಗೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ.
ಅರುಂಧತಿ ಅವರು ಮಾನವೀಯತೆಯ ಆಧಾರದ ಮೇಲೆ ಕಾಶ್ಮೀರದ ಜನರ ಹಕ್ಕಿನ ಕುರಿತು ಮಾತನಾಡಿದರೆ ಅವರನ್ನು ಭಾರತ ವಿರೋಧಿ ಎಂದು ಪಟ್ಟಕಟ್ಟುವುದು ಎಷ್ಟು ಸಮಂಜಸ ಎಂದು ಅನಂತಮೂರ್ತಿ ವಿಷಾದ ವ್ಯಕ್ತಪಡಿಸಿದರು. ಕಾಶ್ಮೀರಿ ಜನರಿಗಾಗಿ ದನಿ ಎತ್ತಿದ್ದಕ್ಕಾಗಿ ಅವರನ್ನು ದೇಶದ್ರೋಹಿ ಎಂದು ಕರೆಯುವುದು ನಾನು ಒಪ್ಪಲಾರೆ ಎಂದು ಅವರು ನುಡಿದರು.
ಅರುಂಧತಿ ಅವರ ವಿಷಯದಲ್ಲಿ ಎತ್ತಲಾಗಿರುವ ರಾಷ್ಟ್ರೀಯತೆಯ ಕಲ್ಪನೆ ನಿಜಕ್ಕೂ ಅಪಾಯಕಾರಿ. ಮೂಲಭೂತವಾದಿಗಳ ರಾಷ್ಟ್ರೀಯತೆಗೂ ದೇಶಪ್ರೇಮಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ನಮಗೆ ಈ ಸಂದರ್ಭದಲ್ಲಿ ಬೇಕಿರುವುದು ರಾಷ್ಟ್ರೀಯತೆಗಿಂತ ಹೆಚ್ಚಾಗಿ ಗಾಂಧೀಜಿ ಮತ್ತು ಟಾಗೋರ್ ಪ್ರತಿಪಾದಿಸಿರುವ ನಾಗರಿಕತೆ. ರಾಷ್ಟ್ರೀಯತೆ ಎನ್ನುವುದು ಹಿಂದೂತ್ವದ ಮೇಲೆ ಆಧಾರಿತವಾಗಿದೆ. ನಮಗೆ ಬೇಕಿರುವುದು ನಾಗರಿಕತೆ ಮತ್ತು ಮಾನವೀಯತೆ ಎಂದು ಅವರು ವಿಶ್ಲೇಷಿಸಿದರು. [ಜಿಲ್ಲಾಸುದ್ದಿ]
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications