ಮುಖ್ಯಮಂತ್ರಿಗೆ ಬ್ಯಾಟಿಂಗ್ ಬೌಲಿಂಗ್ ಎರಡೂ ಗೊತ್ತಿಲ್ಲ

ಜಿಲ್ಲಾ ವತ್ತು ತಾಲೂಕಾ ಪಂಚಾಯತಿ ಚುನಾವಣಾ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡುತ್ತ, ಇನ್ನೂ ಸಾಕಷ್ಟು ಹಗರಣಗಳನ್ನು ಬಹಿರಂಗಗೊಳಿಸುವುದು ಬಾಕಿಯುಳಿದಿದೆ. ಜಿ.ಪಂ ಹಾಗೂ ಗ್ರಾ.ಪಂ. ಚುನಾವಣೆಯ ನಂತರ ರಾಜ್ಯಸರ್ಕಾರ ಮಾಡಿರುವಂತಹ ಹಗರಣದ 2ನೇ ಇನ್ನಿಂಗ್ಸ್ನ್ನು ಬಹಿರಂಗಗೊಳಿಸುತ್ತೇನೆ ಎಂದು ಉತ್ತರ ನೀಡಿದರು. ಹಾಗೆಯೇ, ಹಗರಣಗಳ ಬಗ್ಗೆ ಆಡಳಿತ ಪಕ್ಷದವರು ನೀಡುತ್ತಿರುವಂತಹ ಉತ್ತರವನ್ನು ನೋಡಿದರೆ, ಮುಖ್ಯಮಂತ್ರಿಗಳಿಗೆ ಹಾಗೂ ಅವರ ಸಹೋದ್ಯೋಗಿಗಳಿಗೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡನ್ನೂ ಮಾಡಿ ಗೊತ್ತಿಲ್ಲ ಎಂದು ಹಾಸ್ಯ ಮಾಡಿದರು.
ಯಡಿಯೂರಪ್ಪನವರ ಉದ್ಧಟತನ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರ ಪತ್ರಕ್ಕೆ ವಿವರಣೆ ಕೊಡದೆ ಉದ್ಧಟತನದ ಹೇಳಿಕೆ ನೀಡುತ್ತಾ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ನ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದರು. ರಾಜ್ಯಪಾಲರು ಕಳಿಸಿರುವಂತಹ ಪತ್ರಕ್ಕೆ ಮುಖ್ಯ ಮಂತ್ರಿಗಳು ಪ್ರತಿಕ್ರಿಯೆ ಕೊಡಬೇಕು. ಅದುಬಿಟ್ಟು ರಾಜ್ಯಪಾಲರು ಪತ್ರ ಕಳಿಸಿರುವುದು ಅವಮಾನ ಎನ್ನುವಂತೆ ಮುಖ್ಯಮಂತ್ರಿಗಳು ಮಾತನಾಡುತ್ತಿರುವುದನ್ನು ಗಮನಿಸಿದರೆ, ಸಂವಿಧಾನ ಚೌಕಟ್ಟಿನಲ್ಲಿ ನಡೆಯಲು ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲ ಎನಿಸುತ್ತಿದೆ ಎಂದರು.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವಂತಹ ಹಗರಣಗಳ ಬಗ್ಗೆ ಸಾಕಷ್ಟು ದಾಖಲೆಗಳಿವೆ ಎಂದ ಅವರು, ರಾಜ್ಯಪಾಲರು ವಿವರಣೆ ಕೇಳುವುದೇ ತಪ್ಪು ಎಂದಾದರೆ ರಾಜ್ಯಪಾಲರ ಕೆಲಸವಾದರೂ ಏನು ಎಂದು ಪ್ರಶ್ನಿಸಿದರು. ಹಾಗೆಯೇ, ರಾಜ್ಯಪಾಲರ ಕಚೇರಿ ಇರುವುದು ವಿರಾಮ ತೆಗೆದುಕೊಳ್ಳಲು ಅಲ್ಲ ಎಂದು ಸಿಡಿಮಿಡಿಗೊಂಡರು.
ಬಿಜೆಪಿ ಸರ್ಕಾರ ಮಾಡಿರುವಂತಹ ಹಗರಣಗಳ ದಾಖಲೆಗಳನ್ನು ಮಾಧ್ಯಮಗಳೇ ಬಹಿರಂಗ ಪಡಿಸಿವೆ. ಇಷ್ಟಾದರೂ ಮುಖ್ಯಮಂತ್ರಿಗಳು ಭಂಡತನವನ್ನು ಪ್ರದರ್ಶಿಸುತ್ತಿದ್ದು, ಇವರಿಗೆ ಇನ್ನ್ಯಾವ ದಾಖಲೆಗಳು ಬೇಕು? ಈಗ ರಾಷ್ಟ್ರರಾಜಕಾರಣ ಮಾಡುತ್ತೇನೆ ಎಂಬಂತಹ ಹೇಳಿಕೆ ನೀಡುತ್ತಿದ್ದು, ಅವರು ನೀಡುತ್ತಿರುವಂತಹ ಹೇಳಿಕೆಯನ್ನು ಗಮನಿಸಿದರೆ, ಅವರಲ್ಲಿಯೇ ಸಹಮತವಿದ್ದಂತೆ ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications