Get Updates
Get notified of breaking news, exclusive insights, and must-see stories!

ರಾಷ್ಟ್ರ ರಾಜಕಾರಣದತ್ತ ಯಡಿಯೂರಪ್ಪ ಚಿತ್ತ

Yeddyurappa
ಶಿವಮೊಗ್ಗ, ಡಿ. 23 : ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ಯಡಿಯೂರಪ್ಪ ಒಲವು ವ್ಯಕ್ತಪಡಿಸಿದ್ದಾರೆ. ಮುಂದಿನ ಎರಡೂವರೆ ವರ್ಷಗಳ ಅಧಿಕಾರಾವಧಿ ಮುಕ್ತಾಯವಾದ ನಂತರ ರಾಷ್ಟ್ರ ರಾಜಕೀಯಕ್ಕೆ ಪ್ರವೇಶ ಪಡೆಯುವ ಆಲೋಚನೆ ನಡೆಸಿದ್ದಾರೆ. ಈ ಅವಧಿಯಲ್ಲಿ ನಾನೇ ಮುಖ್ಯಮಂತ್ರಿಯಾಗಿ ಪೂರ್ಣಗೊಳಿಸುವ ವಿಶ್ವಾಸದಿಂದ ಹೇಳಿದ್ದಾರೆ.

ಶಿಕಾರಿಪುರದ ಮಂಗಳಭವನದಲ್ಲಿ ಮಾತನಾಡಿದ ಅವರು, ಸಿಎಂ ಅಧಿಕಾರಾವಧಿ ಪೂರ್ಣಗೊಂಡ ನಂತರ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತೇನೆ. ರಾಜ್ಯಸಭೆ ಸದಸ್ಯನಾಗುವ ಆಸೆ ಇದೆ. ಈಗಾಗಲೇ ಈ ಸಂಬಂಧ ಪಕ್ಷದ ರಾಷ್ಟ್ರ ಹಾಗೂ ರಾಜ್ಯ ನಾಯಕರೊಂದಿಗೆ ಚರ್ಚೆ ಮಾಡಿದ್ದೇನೆ. ಅವರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನ ತುಂಬಲು ರಾಜ್ಯದಲ್ಲಿ ಅನೇಕ ಮಂದಿ ಸಮರ್ಥರಿದ್ದಾರೆ. ಈ ಪೈಕಿ ಯಾರು ಭವಿಷ್ಯದ ನಾಯಕ ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಹಲವು ದಶಕಗಳ ಅವಧಿಯಲ್ಲಿ ಪಕ್ಷ ಬಹಳಷ್ಟು ಮಂದಿ ನಾಯಕರನ್ನು ತಯಾರು ಮಾಡಿದೆ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ನಾಯಕತ್ವದ ಕೊರತೆ ಇಲ್ಲ ಎಂದು ಅವರು ವಿವರಿಸಿದರು.

ಜಿ.ಪಂ.-ತಾ.ಪಂ. ಚುನಾವಣೆ ಮುಕ್ತಾಯವಾದ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಲಾಗುವುದು. ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟನೆ ಮಾಡಲಾಗುವುದು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲಾಗುವುದು ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+