ಬಿಎಸ್ ವೈ ಸರ್ಕಾರ ತುಘಲಕ್ ಸರ್ಕಾರ: ಬೆಂಕಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಿಲ್ಲೊಂದು ಹಗರಣಗಳನ್ನು ಮಾಡುತ್ತಲೇ ಇದೆ. ಇಷ್ಟೆಲ್ಲಾ ಹಗರಣಗಳು ನಡೆದರೂ ಮುಖ್ಯ ಮಂತ್ರಿಗಳು ತಮ್ಮ ಸ್ಥಾನವನ್ನು ತ್ಯಜಿಸದೆ ಮುಂದುವರೆದಿದ್ದಾರೆ. ಹೀಗಾಗಿ, ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದೇ ತಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.
ವೀರಶೈವರಗೆ ಉಳಿಗಾಲವಿಲ್ಲ:ವೀರಶೈವ ಪಂಗಡಗಳ ಒಳಪಂಗಡಗಳನ್ನು ಒಡೆಯು ವಂತಹ ಕೆಲಸಗಳನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ರಲ್ಲದೇ, ಬಸವಣ್ಣನವರ ತತ್ವವನ್ನು ನಂಬಿರುವಂತಹ ವೀರಶೈವ ಪಂಗಡ ದವರು ಯಾರೂ ಇವರ ನೀತಿಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಮುಖ್ಯ ಮಂತ್ರಿಗಳ ಮೇಲೆ ಹರಿಹಾಯ್ದರು.
ಇಂದು ಬೆಳಿಗ್ಗೆ ಜೆಡಿಎಸ್ ಕಛೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂತಹ ಭ್ರಷ್ಟ ಮುಖ್ಯಮಂತ್ರಿಯನ್ನು ನಾಡು ಹಿಂದೆಂದೂ ಕಂಡಿರಲಿಲ್ಲ. ಸ್ವಾತಂತ್ರ್ಯ ಬಂದ ನಂತರ ರಾಜ್ಯ ಕಂಡ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಯ ಪಟ್ಟ ಬಿ.ಎಸ್.ಯಡಿಯೂರಪ್ಪರಿಗೆ ಸಲ್ಲುತ್ತದೆ ಎಂದು ಹರಿಹಾಯ್ದರು.
ಶ್ರೀಸಾಮಾನ್ಯರ ತೆರಿಗೆ ಹಣವನ್ನು ಮಠ ಮಾನ್ಯಗಳಿಗೆ ನೀಡುತ್ತಿದ್ದು, ಮಠಾಧೀಶರಾರು ಅನುದಾನ ಕೊಡಿ ಎಂದು ಅರ್ಜಿ ಹಾಕಿರಲಿಲ್ಲ. ಕೆಲವೇ ಮಠಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡಿದ್ದು, ಮಠಾಧಿಪತಿಗಳು ಇಂತಹ ಪಾಪದ ಹಣವನ್ನು ತೆಗೆದುಕೊಳ್ಳ ಬಾರದು ಎಂದರು.
ಬಿಎಸ್ ವೈ ಸಮಾಜಕ್ಕೆ ಕಳಂಕ:ಹಿಂದಿನ ವೀರಶೈವ ಜನಾಂಗದವರಾದ ನಿಜಲಿಂಗಪ್ಪ, ಬೀ.ಡಿ.ಜತ್ತಿ, ಜೆ.ಹೆಚ್.ಪಟೇಲ್ ಸೇರಿದಂತೆ ಹಲವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಇವರು ಯಾರು ಈ ರೀತಿಯ ಆಡಳಿತ ನಡೆಸಿರಲಿಲ್ಲ. ಮುಖ್ಯಮಂತ್ರಿಗಳು ಮಾಡುತ್ತಿರುವ ಭ್ರಷ್ಟಾಚಾರದಿಂದಾಗಿ ಇಡೀ ವೀರಶೈವ ಸಮಾಜಕ್ಕೆ ಕಳಂಕ ಬಂದೊದಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿ.ಪಂ. ಹಾಗೂ ತಾ.ಪಂ. ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಜೆಡಿಎಸ್ ಪಕ್ಷಕ್ಕೆ ಜನಬೆಂಬಲ ಸಿಕ್ಕಿದೆ ಎಂದ ಅವರು, 2011ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಜೆಡಿಎಸ್ಗೆ ಸ್ಪಷ್ಟ ಬಹುಮತ ದೊರಕುವುದರ ಜೊತೆಗೆ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗೆ ಆಗುತ್ತಾರೆ ಎಂದು ಭವಿಷ್ಯ ನುಡಿದರು. ಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಶ್ರೀಕಾಂತ್, ಮುಖಂಡರಾದ ಜಿ.ಮಾದಪ್ಪ, ಪ.ರಾ.ಶ್ರೀನಿವಾಸ್, ಶಿವಣ್ಣ ಹಲವರು ಉಪಸ್ಥಿತರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications