ಬಳ್ಳಾರಿ ಜಿಪಂ, ತಾಪಂ: ಕ್ರಾಸ್ ಓಟಿಂಗ್ ಆತಂಕ

ಬಳ್ಳಾರಿ ಜಿಲ್ಲೆಯ 36 ಜಿಲ್ಲಾ ಪಂಚಾಯಿತಿ, 135 ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ನಿಂದ ಸ್ಪರ್ಧಿಸಿರುವ ಬಹುತೇಕ ಶೇ.70 ರಷ್ಟು ಅಭ್ಯರ್ಥಿಗಳಲ್ಲಿ 'ಕ್ರಾಸ್ಓಟಿಂಗ್'ನ ಭಯ ತೀವ್ರವಾಗಿ ಕಾಡುತ್ತಿದೆ. ಸಿರುಗುಪ್ಪ ತಾಲೂಕಿನಲ್ಲಿ ಮಾತ್ರ ಬಿಜೆಪಿಯನ್ನು ಮಣಿಯಲು ಕಾಂಗ್ರೆಸ್ - ಜೆಡಿಎಸ್ ಮೈತ್ರಿಯಲ್ಲಿ ಸ್ಪರ್ಧಿಸಿವೆ.
ಕುಡತಿನಿ, ಕುರುಗೋಡು, ಮೋಕಾ, ರೂಪನಗುಡಿ, ಏಳಬೆಂಚೆ ಸೇರಿ ಬಳ್ಳಾರಿ ತಾಲೂಕಿನ ವ್ಯಾಪ್ತಿಯ ಜಿಲ್ಲಾ ಪಂಚಾಯಿತಿಯ ಎಲ್ಲಾ ಏಳು ಕ್ಷೇತ್ರಗಳಲ್ಲಿ ಜಿಲ್ಲಾ - ತಾಲೂಕು ಪಂಚಾಯಿತಿಗೆ ಮತಗಳು ಕ್ರಾಸ್ಓಟಿಂಗ್ ಆಗಲಿವೆ. ಜಾತಿ, ಉಪಜಾತಿ, ಪ್ರತಿಷ್ಠೆಗಳ ಮೂಲಕ ಈ ಕ್ರಾಸ್ಓಟಿಂಗ್ ವ್ಯವಸ್ಥೆ ಜಾರಿ ಆಗುತ್ತಿದೆ. ಈ ವ್ಯವಸ್ಥೆ ರಹಸ್ಯವಾಗಿ ನಿರ್ಧಾರಕ್ಕೆ ಬಂದು ಅಭ್ಯರ್ಥಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.
ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಮತಯಂತ್ರಗಳ ಮೂಲಕವೇ ಮತ ಚಲಾವಣೆ ಮಾಡಿರುವ ಗ್ರಾಮೀಣ ಮತದಾರರು, ಇದೇ ಪ್ರಥಮಬಾರಿಗೆ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಮತಯಂತ್ರಗಳಲ್ಲಿ ಅಭ್ಯರ್ಥಿಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಆದರೆ, ತಾಲೂಕು - ಜಿಲ್ಲಾ ಪಂಚಾಯಿತಿಯ ಪ್ರತ್ಯೇಕ ಮತಯಂತ್ರಗಳ ಮಾಹಿತಿಯನ್ನು ಅಭ್ಯರ್ಥಿಗಳು, ಪಕ್ಷಗಳು ಮತದಾರರಿಗೆ ನೀಡಿಲ್ಲ.
ಹೊಸಪೇಟೆ ತಾಲೂಕಿನಲ್ಲಿ ಬಿಜೆಪಿ - ಕಾಂಗ್ರೆಸ್ ನೇರ ಸ್ಪರ್ಧೆ ಏರ್ಪಟ್ಟಿದೆ. ಮರಿಯಮ್ಮನಹಳ್ಳಿ ಫಿರ್ಕಾದಲ್ಲಿ ಕ್ರಾಸ್ಓಟಿಂಗ್ ಭೂತ ಅನೇಕರನ್ನು ಕಾಡುತ್ತಿದೆ. ಹಗರಿಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಸಂಡೂರು - ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ - ಬಿಜೆಪಿ ಬಿರುಸಿನ ಪ್ರಚಾರ ನಡೆಸಿವೆ.
ಮತದಾರರನ್ನು ತಮ್ಮತ್ತ ಸೆಳೆಯಲು ಕೊನೆಯ ಸುತ್ತಿನ ಕಸರತ್ತಾಗಿ ಅಭ್ಯರ್ಥಿಗಳು, ಪಕ್ಷಗಳು ಹಂಚುವ ಕೋಳಿ, ಹಣ, ಸೀರೆ, ಅಕ್ಕಿಯನ್ನು ಪಡೆಯುತ್ತಿರುವ ಮತದಾರರು, ತಾವು ಮತ ಚಲಾಯಿಸಲು ನಿರ್ಧರಿಸಿರುವ ಅಭ್ಯರ್ಥಿ, ಪಕ್ಷಗಳ ಕುರಿತು ಮೌನ ಮುರಿಯುತ್ತಿಲ್ಲ. ಮತ ಚಲಾಯಿಸುವ ನಿರ್ಧಾರವನ್ನು ಪ್ರಕಟಿಸುತ್ತಿಲ್ಲ. [ಬಳ್ಳಾರಿ]
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications